‘ಶೋಭಾ ಅವರು ಮೊದಲು ತಮ್ಮ ಟಿಕೆಟ್ ಉಳಿಸಿಕೊಳ್ಳಲಿ’ ಎಂಬ ಸಚಿವ ಎಂ.ಬಿ.ಪಾಟೀಲ ಅವರ ಹೇಳಿಕೆಗೆ ತಿರುಗೇಟು ನೀಡಿದ ಅವರು, ‘ಕಾಂಗ್ರೆಸ್ನಲ್ಲಿ ಏನು ನಡೆಯುತ್ತಿದೆ ಎಂಬುದು ಅವರಿಗೆ ಗೊತ್ತಿದೆ. ಮುಖ್ಯಮಂತ್ರಿ ಮತ್ತು ಉಪಮುಖ್ಯಮಂತ್ರಿ ನಡುವೆ ಏನೆಲ್ಲ ನಡೆಯುತ್ತಿದೆ ಎಂಬುದು ಲೋಕಸಭೆ ಚುನಾವಣೆ ಬಳಿಕ ಬಹಿರಂಗವಾಗಲಿದೆ. ತಮ್ಮ ಪಕ್ಷದ ಶಾಸಕರನ್ನು ಉಳಿಸಿಕೊಳ್ಳಲು ಆಗದ ಕಾಂಗ್ರೆಸ್, ಬಿಜೆಪಿ ಶಾಸಕರಿಗೆ ಕೈಹಾಕಿದೆ’ ಎಂದು ಹೇಳಿದರು.