ಮಾಲಾಧಾರಿಗಳು, ದತ್ತಭಕ್ತರು ವಾಹನಗಳಲ್ಲಿ ಗಿರಿಗೆ ತೆರಳಿದರು. ಶ್ರೀಗುರುದತ್ತಾತ್ರೇಯ ಬಾಬಾಬುಡನ್ಸ್ವಾಮಿ ದರ್ಗಾದಲ್ಲಿ ದತ್ತಾತ್ರೇಯಸ್ವಾಮಿ ಪಾದುಕೆ ದರ್ಶನ ಮಾಡಿ ಭಕ್ತಿ ಸಮರ್ಪಿಸಿದರು.
ದತ್ತಪೀಠದ ಬಳಿಯ ಸಭಾಮಂಟಪದಲ್ಲಿ ಮಹಾಗಣಪತಿಹೋಮ, ದತ್ತಮೂಲಮಂತ್ರ, ಅನಸೂಯಾ ಹೋಮ, ಪೂರ್ಣಾಹುತಿ ಕೈಂಕರ್ಯ ನೇರವೇರಿದವು. ಅಭಿಯಾನದ ನಿಮಿತ್ತ ಗಿರಿಶ್ರೇಣಿ ತಾಣಗಳಿಗೆ ಪ್ರವಾಸಿ ವಾಹನಗಳಿಗೆ ಜಿಲ್ಲಾಡಳಿತ ನಿರ್ಬಂಧ ವಿಧಿಸಿತ್ತು. ಪೊಲೀಸ್ ಬಿಗಿ ಬಂದೋಬಸ್ತ್ ನಿಯೋಜಿಸಲಾಗಿತ್ತು.