ನಗರದಲ್ಲಿ ಭಾನುವಾರ ಸುದ್ದಿಗಾರರೊಂದಿಗೆ ಮಾತನಾಡಿ, ‘ಚಂದ್ರು ತಾಯಿಯೇ ಹೇಳಿಕೆ ನೀಡಿದ್ದಾರೆ. ಹತ್ಯೆಯ ಮೂಲ ಬಿಟ್ಟು ಬೇರೆಯದರ ಬಗ್ಗೆ ಯೋಚಿಸುವುದು ಸರಿಯಲ್ಲ. ಅಖಂಡ ಶ್ರೀನಿವಾಸ ಮನೆ ಸೇರಿ ಕೆ.ಜಿ ಹಳ್ಳಿ, ಡಿ.ಜಿ.ಹಳ್ಳಿಯಲ್ಲಿ ನೂರಾರು ಮನೆಗೆ ಬೆಂಕಿ ಯಾಕೆ ಹಾಕಿದರು. ಈ ಬಗ್ಗೆ ಗಂಭೀರವಾಗಿ ಆಲೋಚನೆ ಮಾಡಿದರೆ ಸತ್ಯ ಗೊತ್ತಾಗುತ್ತದೆ’ ಎಂದರು.