<p><strong>ಶೃಂಗೇರಿ</strong>: ತಾಲ್ಲೂಕು ವ್ಯವಸಾಯೋತ್ಪನ್ನ ಮಾರಾಟ ಸಹಕಾರ ಸಂಘದ (ಟಿಎಪಿಸಿಎಂಎಸ್) ನಿರ್ದೇಶಕ ಸ್ಥಾನಕ್ಕೆ ಶುಕ್ರವಾರ ರೈತ ಭವನದಲ್ಲಿ ನಡೆದ ಚುನಾವಣೆಯಲ್ಲಿ ಅರ್ಹ ಷೇರುದಾರರು ಮತದಾನ ಮಾಡಿದರು.</p>.<p>ಸಂಘದಲ್ಲಿ 14 ಜನ ನಿರ್ದೇಶಕರ ಸ್ಥಾನವಿದ್ದು, 3 ಸ್ಥಾನಕ್ಕೆ ಅವಿರೋಧವಾಗಿ ಆಯ್ಕೆ ನಡೆದಿದೆ. 11 ನಿರ್ದೇಶಕರ ಸ್ಥಾನಕ್ಕೆ ಚುನಾವಣೆ ನಡೆದಿದ್ದು, 23 ಅಭ್ಯರ್ಥಿಗಳು ಸ್ಪರ್ಧೆಯಲ್ಲಿದ್ದರು. ಮತದಾನ ಶಾಂತಿಯುತವಾಗಿ ಮುಕ್ತಾಯಗೊಂಡಿದೆ. ಒಟ್ಟು 682 ಮತದಾರರು ಇದ್ದು, ಇದರಲ್ಲಿ 652 ಮತದಾರರು ಮತ ಚಲಾಯಿಸುವ ಮೂಲಕ ಶೇ 95ರಷ್ಟು ಮತದಾನ ನಡೆದಿದೆ. ತಾಲ್ಲೂಕಿನ 9 ಗ್ರಾಮ ಪಂಚಾಯಿತಿ ವ್ಯಾಪ್ತಿಯಲ್ಲಿದ್ದ ಮತದಾರರನ್ನು ಭೇಟಿಯಾಗಿ ಮತ ಯಾಚಿಸುವುದೇ ಅಭ್ಯರ್ಥಿಗಳಿಗೆ ಸವಾಲು ಆಗಿತ್ತು. ಎರಡು ತಂಡಗಳಾಗಿ ಚುನಾವಣೆ ಎದುರಿಸಿದ ಗುಂಪು ಅಲ್ಲದೇ ಭಾನುಪ್ರಕಾಶ್ ಅವರು ಏಕಾಂಗಿ ಅಭ್ಯರ್ಥಿಯಾಗಿ ಸ್ಪರ್ಧೆ ಮಾಡಿದ್ದಾರೆ.</p>.<p>ಬೆಳಿಗ್ಗೆ 9ಕ್ಕೆ ಆರಂಭವಾದ ಮತದಾನ ಮಧ್ಯಾಹ್ನ 4ರವರೆಗೂ ನಡೆದಿದ್ದು, ಗ್ರಾಮೀಣ ಪ್ರದೇಶದಲ್ಲಿದ್ದ ಮತದಾರರನ್ನು ಕರೆ ತರುವ ಕಾಯಕ ಕೊನೆಯವರೆಗೂ ನಡೆಯಿತು. ಬೆಂಗಳೂರು ಮತ್ತಿತರ ಕಡೆಯಿಂದ ಬಂದು ಕೆಲ ಮತದಾರರು ಮತ ಚಲಾಯಿಸಿದರು.</p>.<p>ವ್ಯವಸಾಯೋತ್ಪನ್ನ ಮಾರಾಟ ಸಹಕಾರ ಸಂಘದ ರೈತ ಭವನದಲ್ಲಿ ಮತದಾನ ನಡೆದಿದ್ದು, ರಾಜಕೀಯ ಪಕ್ಷಗಳು ಚುನಾವಣೆಯನ್ನು ಪ್ರತಿಷ್ಠೆಯಾಗಿ ಪರಿಗಣಿಸಿ, ರಾಜಕೀಯ ಮುಖಂಡರು ಮತದಾನ ಕೇಂದ್ರದ ಬಳಿ ಜಮಾಯಿಸಿದ್ದರು. 2020-21ನೇ ಸಾಲಿನಲ್ಲಿ ಅಭ್ಯರ್ಥಿಗಳು ಹೊಂದಾಣಿಕೆ ಮಾಡಿಕೊಂಡು ಚುನಾವಣೆ ನಡೆದಿರಲಿಲ್ಲ. ಈಗ ಕಾಂಗ್ರೆಸ್ ಮತ್ತು ಜೆಡಿಎಸ್ ಮೈತ್ರಿ ಮಾಡಿಕೊಂಡು ಅಭ್ಯರ್ಥಿಗಳನ್ನು ಬೆಂಬಲಿಸಿದ್ದಾರೆ. ಕಳೆದ 5 ಬಾರಿ ಚುನಾವಣೆಗೆ ಸ್ಪರ್ಧಿಸಿ ಅಧ್ಯಕ್ಷರಾಗಿ ಸೇವೆ ಸಲ್ಲಿಸಿರುವ ಎಚ್.ಕೆ. ನವೀನ್ ಹಾಗೂ ಮಾಜಿ ಅಧ್ಯಕ್ಷ ಕೆ.ಎಸ್. ರಮೇಶ್ ಮತ್ತೆ ಚುನಾವಣಾ ಕಣದಲ್ಲಿದ್ದಾರೆ. ಗ್ರಾಮ ಪಂಚಾಯಿತಿ ಮಾಜಿ ಸದಸ್ಯರಾದ ತ್ರಿಮೂರ್ತಿ, ಭಾನುಪ್ರಕಾಶ್, ಲಕ್ಷ್ಮೀಶ ಕಣದಲ್ಲಿದ್ದಾರೆ.</p>.<p>ತಹಶೀಲ್ದಾರ್ ಅನೂಪ್ ಸಂಜೋಗ್ ಚುನಾವಣಾಧಿಕಾರಿಯಾಗಿ ಕರ್ತವ್ಯ ನಿರ್ವಹಿಸಿದರು. ಸ್ಥಳದಲ್ಲಿ ಬಿಗಿ ಪೊಲೀಸ್ ಬಂದೋಬಸ್ತ್ ಮಾಡಲಾಗಿತ್ತು. ಮತದಾನಕ್ಕೆ 2 ಭೂತ್ಗಳನ್ನು ನಿರ್ಮಿಸಿ 6 ವಿಭಾಗಗಳಾಗಿ ಮಾಡಿದ್ದರು. ನೂಕುನುಗ್ಗಲು ಆಗದಂತೆ ಒಂದೇ ಸಮಯದಲ್ಲಿ 6 ಜನ ಮತ ಚಲಾಯಿಸುವಂತೆ ಕ್ರಮ ಕೈಗೊಳ್ಳಲಾಗಿತ್ತು. ಮತದಾನ ಮುಗಿದ ನಂತರ ರೈತ ಭವನದಲ್ಲಿ ಮತ ಎಣಿಕೆ ನಡೆಯಿತು. ಫಲಿತಾಂಶ ತಡ ರಾತ್ರಿಯಾಗಿ ಹೊರಬೀಳಲಿದೆ.</p>.<p><em>ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ</em><br />260530-126-238890381</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಶೃಂಗೇರಿ</strong>: ತಾಲ್ಲೂಕು ವ್ಯವಸಾಯೋತ್ಪನ್ನ ಮಾರಾಟ ಸಹಕಾರ ಸಂಘದ (ಟಿಎಪಿಸಿಎಂಎಸ್) ನಿರ್ದೇಶಕ ಸ್ಥಾನಕ್ಕೆ ಶುಕ್ರವಾರ ರೈತ ಭವನದಲ್ಲಿ ನಡೆದ ಚುನಾವಣೆಯಲ್ಲಿ ಅರ್ಹ ಷೇರುದಾರರು ಮತದಾನ ಮಾಡಿದರು.</p>.<p>ಸಂಘದಲ್ಲಿ 14 ಜನ ನಿರ್ದೇಶಕರ ಸ್ಥಾನವಿದ್ದು, 3 ಸ್ಥಾನಕ್ಕೆ ಅವಿರೋಧವಾಗಿ ಆಯ್ಕೆ ನಡೆದಿದೆ. 11 ನಿರ್ದೇಶಕರ ಸ್ಥಾನಕ್ಕೆ ಚುನಾವಣೆ ನಡೆದಿದ್ದು, 23 ಅಭ್ಯರ್ಥಿಗಳು ಸ್ಪರ್ಧೆಯಲ್ಲಿದ್ದರು. ಮತದಾನ ಶಾಂತಿಯುತವಾಗಿ ಮುಕ್ತಾಯಗೊಂಡಿದೆ. ಒಟ್ಟು 682 ಮತದಾರರು ಇದ್ದು, ಇದರಲ್ಲಿ 652 ಮತದಾರರು ಮತ ಚಲಾಯಿಸುವ ಮೂಲಕ ಶೇ 95ರಷ್ಟು ಮತದಾನ ನಡೆದಿದೆ. ತಾಲ್ಲೂಕಿನ 9 ಗ್ರಾಮ ಪಂಚಾಯಿತಿ ವ್ಯಾಪ್ತಿಯಲ್ಲಿದ್ದ ಮತದಾರರನ್ನು ಭೇಟಿಯಾಗಿ ಮತ ಯಾಚಿಸುವುದೇ ಅಭ್ಯರ್ಥಿಗಳಿಗೆ ಸವಾಲು ಆಗಿತ್ತು. ಎರಡು ತಂಡಗಳಾಗಿ ಚುನಾವಣೆ ಎದುರಿಸಿದ ಗುಂಪು ಅಲ್ಲದೇ ಭಾನುಪ್ರಕಾಶ್ ಅವರು ಏಕಾಂಗಿ ಅಭ್ಯರ್ಥಿಯಾಗಿ ಸ್ಪರ್ಧೆ ಮಾಡಿದ್ದಾರೆ.</p>.<p>ಬೆಳಿಗ್ಗೆ 9ಕ್ಕೆ ಆರಂಭವಾದ ಮತದಾನ ಮಧ್ಯಾಹ್ನ 4ರವರೆಗೂ ನಡೆದಿದ್ದು, ಗ್ರಾಮೀಣ ಪ್ರದೇಶದಲ್ಲಿದ್ದ ಮತದಾರರನ್ನು ಕರೆ ತರುವ ಕಾಯಕ ಕೊನೆಯವರೆಗೂ ನಡೆಯಿತು. ಬೆಂಗಳೂರು ಮತ್ತಿತರ ಕಡೆಯಿಂದ ಬಂದು ಕೆಲ ಮತದಾರರು ಮತ ಚಲಾಯಿಸಿದರು.</p>.<p>ವ್ಯವಸಾಯೋತ್ಪನ್ನ ಮಾರಾಟ ಸಹಕಾರ ಸಂಘದ ರೈತ ಭವನದಲ್ಲಿ ಮತದಾನ ನಡೆದಿದ್ದು, ರಾಜಕೀಯ ಪಕ್ಷಗಳು ಚುನಾವಣೆಯನ್ನು ಪ್ರತಿಷ್ಠೆಯಾಗಿ ಪರಿಗಣಿಸಿ, ರಾಜಕೀಯ ಮುಖಂಡರು ಮತದಾನ ಕೇಂದ್ರದ ಬಳಿ ಜಮಾಯಿಸಿದ್ದರು. 2020-21ನೇ ಸಾಲಿನಲ್ಲಿ ಅಭ್ಯರ್ಥಿಗಳು ಹೊಂದಾಣಿಕೆ ಮಾಡಿಕೊಂಡು ಚುನಾವಣೆ ನಡೆದಿರಲಿಲ್ಲ. ಈಗ ಕಾಂಗ್ರೆಸ್ ಮತ್ತು ಜೆಡಿಎಸ್ ಮೈತ್ರಿ ಮಾಡಿಕೊಂಡು ಅಭ್ಯರ್ಥಿಗಳನ್ನು ಬೆಂಬಲಿಸಿದ್ದಾರೆ. ಕಳೆದ 5 ಬಾರಿ ಚುನಾವಣೆಗೆ ಸ್ಪರ್ಧಿಸಿ ಅಧ್ಯಕ್ಷರಾಗಿ ಸೇವೆ ಸಲ್ಲಿಸಿರುವ ಎಚ್.ಕೆ. ನವೀನ್ ಹಾಗೂ ಮಾಜಿ ಅಧ್ಯಕ್ಷ ಕೆ.ಎಸ್. ರಮೇಶ್ ಮತ್ತೆ ಚುನಾವಣಾ ಕಣದಲ್ಲಿದ್ದಾರೆ. ಗ್ರಾಮ ಪಂಚಾಯಿತಿ ಮಾಜಿ ಸದಸ್ಯರಾದ ತ್ರಿಮೂರ್ತಿ, ಭಾನುಪ್ರಕಾಶ್, ಲಕ್ಷ್ಮೀಶ ಕಣದಲ್ಲಿದ್ದಾರೆ.</p>.<p>ತಹಶೀಲ್ದಾರ್ ಅನೂಪ್ ಸಂಜೋಗ್ ಚುನಾವಣಾಧಿಕಾರಿಯಾಗಿ ಕರ್ತವ್ಯ ನಿರ್ವಹಿಸಿದರು. ಸ್ಥಳದಲ್ಲಿ ಬಿಗಿ ಪೊಲೀಸ್ ಬಂದೋಬಸ್ತ್ ಮಾಡಲಾಗಿತ್ತು. ಮತದಾನಕ್ಕೆ 2 ಭೂತ್ಗಳನ್ನು ನಿರ್ಮಿಸಿ 6 ವಿಭಾಗಗಳಾಗಿ ಮಾಡಿದ್ದರು. ನೂಕುನುಗ್ಗಲು ಆಗದಂತೆ ಒಂದೇ ಸಮಯದಲ್ಲಿ 6 ಜನ ಮತ ಚಲಾಯಿಸುವಂತೆ ಕ್ರಮ ಕೈಗೊಳ್ಳಲಾಗಿತ್ತು. ಮತದಾನ ಮುಗಿದ ನಂತರ ರೈತ ಭವನದಲ್ಲಿ ಮತ ಎಣಿಕೆ ನಡೆಯಿತು. ಫಲಿತಾಂಶ ತಡ ರಾತ್ರಿಯಾಗಿ ಹೊರಬೀಳಲಿದೆ.</p>.<p><em>ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ</em><br />260530-126-238890381</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>