<p>ಚಿಕ್ಕಮಗಳೂರು: ಜಿಲ್ಲೆಯ ಶೃಂಗೇರಿ ತಾಲ್ಲೂಕಿನ 15 ವರ್ಷದ ಬಾಲಕಿಯ ಅತ್ಯಾಚಾರ ಪ್ರಕರಣದ ತನಿಖೆಯನ್ನು ಹೆಚ್ಚುವರಿ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಎಸ್.ಎನ್.ಶ್ರುತಿ ನೇತೃತ್ವದ ತಂಡ ಚುರುಕುಗೊಳಿಸಿದ್ದು, ಮೂವರನ್ನು ವಶಕ್ಕೆ ಪಡೆದು ವಿಚಾರಣೆ ನಡೆಸಿದೆ.</p>.<p>ಪಶ್ಚಿಮ ವಲಯ ಐಜಿಪಿ ದೇವ್ ಜ್ಯೋತಿ ರೇ ಅವರು ಶನಿವಾರ ಶೃಂಗೇರಿಯಲ್ಲಿ ಪರಿಶೀಲನೆ ನಡೆಸಿದ್ದಾರೆ. ಸಭೆ ನಡೆಸಿ ಅಧಿಕಾರಿಗಳಿಂದ ಮಾಹಿತಿ ಪಡೆದಿದ್ದಾರೆ.</p>.<p>‘ವಿವಿಧ ಆಯಾಮಗಳಲ್ಲಿ ಪ್ರಕರಣದ ತನಿಖೆ ಮುಂದುವರಿದಿದೆ. ಮತ್ತೆ ಮೂವರನ್ನು ವಶಕ್ಕೆ ಪಡೆಯಲಾಗಿದೆ. ವಿಚಾರಣೆ ನಡೆಯುತ್ತಿದೆ’ ಎಂದು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಅಕ್ಷಯ್ ಎಂ. ಹಾಕೆ ‘ಪ್ರಜಾವಾಣಿ’ಗೆ ತಿಳಿಸಿದರು.</p>.<p>ಶೃಂಗೇರಿ ಠಾಣೆ ಪಿಎಸ್ಐ ಕೀರ್ತಿಕುಮಾರ್ ಅವರನ್ನು ಕರಾವಳಿ ಕಾವಲುಪಡೆಗೆ ವರ್ಗಾಯಿಸಲಾಗಿದೆ. ಚಿಕ್ಕಮಗಳೂರು ಗ್ರಾಮಾಂತರ ಠಾಣೆ ಪಿಎಸ್ಐ ಗವಿರಾಜ್ ಅವರಿಗೆ ಹೊಣೆ ವಹಿಸಲಾಗಿದೆ. ಅಮಾನತುಗೊಂಡಿರುವ ಸಿಪಿಐ ಸಿದ್ದರಾಮಯ್ಯ ಅವರ ಜಾಗಕ್ಕೆ ನಗರ ಸಿಇಎನ್ ಇನ್ಸ್ಪೆಕ್ಟರ್ ರಕ್ಷಿತ್ ಅವರನ್ನು ನಿಯೋಜಿಸಲಾಗಿದೆ.</p>.<p>ಫೋನ್ ಕರೆಗಳ ವಿವರ, ಬಾಲಕಿ ಹೇಳಿಕೆ, ಆರೋಪಿಗಳ ಸಂಪರ್ಕ ಜಾಲ ಇತ್ಯಾದಿ ಆಧರಿಸಿ ತಂಡವು ಶೋಧ ಕಾರ್ಯಾಚರಣೆಯಲ್ಲಿ ತೊಡಗಿದೆ ಎಂದು ಮೂಲಗಳು ತಿಳಿಸಿವೆ. ಪ್ರಕರಣಕ್ಕೆ ಸಂಬಂಧಿಸಿದಂತೆ ಈವರೆಗೆ ಎಂಟು ಆರೋಪಿಗಳನ್ನು ಬಂಧಿಸಲಾಗಿದೆ. 9 ಮಂದಿ ತಲೆ ಮರೆಸಿಕೊಂಡಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p>ಚಿಕ್ಕಮಗಳೂರು: ಜಿಲ್ಲೆಯ ಶೃಂಗೇರಿ ತಾಲ್ಲೂಕಿನ 15 ವರ್ಷದ ಬಾಲಕಿಯ ಅತ್ಯಾಚಾರ ಪ್ರಕರಣದ ತನಿಖೆಯನ್ನು ಹೆಚ್ಚುವರಿ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಎಸ್.ಎನ್.ಶ್ರುತಿ ನೇತೃತ್ವದ ತಂಡ ಚುರುಕುಗೊಳಿಸಿದ್ದು, ಮೂವರನ್ನು ವಶಕ್ಕೆ ಪಡೆದು ವಿಚಾರಣೆ ನಡೆಸಿದೆ.</p>.<p>ಪಶ್ಚಿಮ ವಲಯ ಐಜಿಪಿ ದೇವ್ ಜ್ಯೋತಿ ರೇ ಅವರು ಶನಿವಾರ ಶೃಂಗೇರಿಯಲ್ಲಿ ಪರಿಶೀಲನೆ ನಡೆಸಿದ್ದಾರೆ. ಸಭೆ ನಡೆಸಿ ಅಧಿಕಾರಿಗಳಿಂದ ಮಾಹಿತಿ ಪಡೆದಿದ್ದಾರೆ.</p>.<p>‘ವಿವಿಧ ಆಯಾಮಗಳಲ್ಲಿ ಪ್ರಕರಣದ ತನಿಖೆ ಮುಂದುವರಿದಿದೆ. ಮತ್ತೆ ಮೂವರನ್ನು ವಶಕ್ಕೆ ಪಡೆಯಲಾಗಿದೆ. ವಿಚಾರಣೆ ನಡೆಯುತ್ತಿದೆ’ ಎಂದು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಅಕ್ಷಯ್ ಎಂ. ಹಾಕೆ ‘ಪ್ರಜಾವಾಣಿ’ಗೆ ತಿಳಿಸಿದರು.</p>.<p>ಶೃಂಗೇರಿ ಠಾಣೆ ಪಿಎಸ್ಐ ಕೀರ್ತಿಕುಮಾರ್ ಅವರನ್ನು ಕರಾವಳಿ ಕಾವಲುಪಡೆಗೆ ವರ್ಗಾಯಿಸಲಾಗಿದೆ. ಚಿಕ್ಕಮಗಳೂರು ಗ್ರಾಮಾಂತರ ಠಾಣೆ ಪಿಎಸ್ಐ ಗವಿರಾಜ್ ಅವರಿಗೆ ಹೊಣೆ ವಹಿಸಲಾಗಿದೆ. ಅಮಾನತುಗೊಂಡಿರುವ ಸಿಪಿಐ ಸಿದ್ದರಾಮಯ್ಯ ಅವರ ಜಾಗಕ್ಕೆ ನಗರ ಸಿಇಎನ್ ಇನ್ಸ್ಪೆಕ್ಟರ್ ರಕ್ಷಿತ್ ಅವರನ್ನು ನಿಯೋಜಿಸಲಾಗಿದೆ.</p>.<p>ಫೋನ್ ಕರೆಗಳ ವಿವರ, ಬಾಲಕಿ ಹೇಳಿಕೆ, ಆರೋಪಿಗಳ ಸಂಪರ್ಕ ಜಾಲ ಇತ್ಯಾದಿ ಆಧರಿಸಿ ತಂಡವು ಶೋಧ ಕಾರ್ಯಾಚರಣೆಯಲ್ಲಿ ತೊಡಗಿದೆ ಎಂದು ಮೂಲಗಳು ತಿಳಿಸಿವೆ. ಪ್ರಕರಣಕ್ಕೆ ಸಂಬಂಧಿಸಿದಂತೆ ಈವರೆಗೆ ಎಂಟು ಆರೋಪಿಗಳನ್ನು ಬಂಧಿಸಲಾಗಿದೆ. 9 ಮಂದಿ ತಲೆ ಮರೆಸಿಕೊಂಡಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>