ಗುರುವಾರ, 2 ಮೇ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಕಾಶ್ಮೀರದ ತೀತ್ವಾಲ್‍ನಲ್ಲಿ ಶಾರದಾಂಬೆ ಪಂಚಲೋಹ ಮೂರ್ತಿ ಪ್ರಾಣ ಪ್ರತಿಷ್ಠೆ

Published 7 ಜೂನ್ 2023, 5:36 IST
Last Updated 7 ಜೂನ್ 2023, 5:36 IST
ಅಕ್ಷರ ಗಾತ್ರ

ಶೃಂಗೇರಿ: ಕಾಶ್ಮೀರದ ತೀತ್ವಾಲ್‍ನ ಶಾರದಾ ದೇವಿ ದೇಗುಲದಲ್ಲಿ ಶೃಂಗೇರಿ ಶಾರದಾಂಬೆಯ ಪಂಚಲೋಹದ ಮೂರ್ತಿಗೆ ಪ್ರಾಣ ಪ್ರತಿಷ್ಠಾಪನೆಯನ್ನು ಸೋಮವಾರ ಶೃಂಗೇರಿ ಶಾರದಾ ಪೀಠದ ವಿಧುಶೇಖರಭಾರತೀ ಸ್ವಾಮೀಜಿ ನೇರವೇರಿಸಿದರು.

ಶಾರದಾಂಬೆ ಪ್ರತಿಷ್ಠಾಪನೆ ಮತ್ತು ಕುಂಭಾಭಿಷೇಕದ ಪ್ರಯುಕ್ತ ಭಾನುವಾರ ಮತ್ತು ಸೋಮವಾರ ವಿವಿಧ ಧಾರ್ಮಿಕ ಕಾರ್ಯಗಳು ನಡೆದವು. ವಿಧುಶೇಖರಭಾರತೀ ಸ್ವಾಮೀಜಿ ಶಾರದಾ ಪೀಠದ ಆರಾಧ್ಯ ದೈವ ಶ್ರೀಚಕ್ರ ಯಂತ್ರ ಸ್ಥಾಪನೆ ಮಾಡಿ, ವಿಶೇಷ ಪೂಜೆ ಸಲ್ಲಿಸಿ, ಕಲಶ ಪೂಜೆಯೊಂದಿಗೆ ಕುಂಭಾಭಿಷೇಕ ನೆರವೇರಿಸಿದರು.

ಶಾರದಾ ಮಠದ ಪುರೋಹಿತರಾದ ಶಿವಕುಮಾರ ಶರ್ಮ, ತಂತ್ರಿ ಸೀತಾರಾಮ ಶರ್ಮ ನೇತೃತ್ವದ ತಂಡ ಧಾರ್ಮಿಕ ಕಾರ್ಯ ನಡೆಸಿಕೊಟ್ಟಿತು. ಜಮ್ಮು ಕಾಶ್ಮೀರದ ರಾಜ್ಯಪಾಲ ಮನೋಜ್ ಸಿನ್ಹಾ ಗುರುಗಳನ್ನು ಭೇಟಿ ಮಾಡಿದರು. ಶಾರದಾ ಮಠದ ಆಡಳಿತಾಧಿಕಾರಿ ವಿ.ಆರ್ ಗೌರೀಶಂಕರ್ ಮತ್ತು ಕಾಶ್ಮೀರದ ಪಂಡಿತರು ಇದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT