ಮಲಹಾನಿಕರೇಶ್ವರ ಸ್ವಾಮಿಗೆ ಶತರುದ್ರಾಭಿಷೇಕ, ಪಂಚಾಮೃತಭಿಷೇಕ, ಶ್ರೀಸೂಕ್ತ ಮತ್ತು ಪುರುಷಸೂಕ್ತ ಪಠಣದೊಂದಿಗೆ ವಿಶೇಷ ಪೂಜೆ ಸಲ್ಲಿಸಿದರು. ಶಿವರಾತ್ರಿ ಪ್ರಯುಕ್ತ ಶಾರದಾ ಮಠದ ಗುರು ನಿವಾಸದ ಸ್ವರ್ಣ ಮಂಟಪದಲ್ಲಿ ವಿರಾಜಮಾನರಾಗಿರುವ ಚಂದ್ರಮೌಳೇಶ್ವರ ಸ್ವಾಮಿಯ ಸ್ಫಟಿಕ ಲಿಂಗಕ್ಕೆ ಉಭಯ ಗುರುಗಳು ರಾತ್ರಿಯಿಂದ ಬೆಳಿಗ್ಗೆವರೆಗೆ ವಿಶೇಷ ಪೂಜೆ ಸಲ್ಲಿಸಿದರು. ಋತ್ವಿಜರಿಂದ ರುದ್ರಪಠಣದೊಂದಿಗೆ ಮಲಹಾನಿಕರೇಶ್ವರ ಸ್ವಾಮಿ ಸನ್ನಿಧಿಯಲ್ಲಿ ಬೆಳಿಗ್ಗೆವರೆಗೆ ಪೂಜೆ ನೇರವೇರಿತು. ಮಠದ ಪುರೋಹಿತರಾದ ಕೃಷ್ಣ ಭಟ್, ಶಿವಕುಮಾರ ಶರ್ಮ, ಸೀತಾರಾಮ ಶರ್ಮ, ನಾಗರಾಜ ಭಟ್, ಶ್ರೀ ಸದ್ವಿದ್ಯಾ ಸಂಜೀವಿನಿ ಸಂಸ್ಕೃತ ಪಾಠ ಶಾಲೆಯ ವಿದ್ಯಾರ್ಥಿಗಳಿಂದ ರುದ್ರಪಠಣ ನಡೆಯಿತು.