ಸಮಿತಿ ಮುಖ್ಯಸ್ಥ ರವೀಂದ್ರ ಪಂಡಿತ ‘ಪ್ರಜಾವಾಣಿ’ಯೊಂದಿಗೆ ಫೋನ್ನಲ್ಲಿ ಮಾತನಾಡಿ, ‘ಸಮಿತಿಯ 12 ಮಂದಿ ಶೃಂಗೇರಿಗೆ ಹೋಗಿ ಪಂಚಲೋಹ ಮೂರ್ತಿ ಪಡೆಯುತ್ತೇವೆ. ಕಾಶ್ಮೀರದಲ್ಲಿ ದೇಗುಲ ನಿರ್ಮಾಣ ಕಾರ್ಯ ಪೂರ್ಣ ಮುಗಿದಿಲ್ಲ. ಹೀಗಾಗಿ, ಸದ್ಯಕ್ಕೆ ಮೂರ್ತಿಯನ್ನು ಶೃಂಗೇರಿ ಅಥವಾ ಬೆಂಗಳೂರಿನಲ್ಲಿ ಇಡುತ್ತೇವೆ’ ಎಂದು ತಿಳಿಸಿದರು.