<p><strong>ಚಿಕ್ಕಮಗಳೂರು: </strong>‘ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ಅವರು ಭ್ರಷ್ಟಾಚಾರದ ಆರೋಪಕ್ಕೆ ಆಧಾರ ಇದ್ದರೆ ಲೋಕಾಯುಕ್ತಕ್ಕೆ ದೂರು ನೀಡಲಿ’ ಎಂದು ಜಿಲ್ಲಾ ಉಸ್ತುವಾರಿ ಸಚಿವ ಸಿ.ಟಿ. ರವಿ ಸವಾಲು ಹಾಕಿದರು.</p>.<p>ಶನಿವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ‘ಆರೋಪ ಮಾಡುವುದು ಸುಲಭ. ಅದಕ್ಕೆ ಆಧಾರ ಒದಗಿಸುವುದು ಕಷ್ಟ ಎಂಬುದು ಅವರ ಮಾತಿನಿಂದಲೇ ವ್ಯಕ್ತವಾಗುತ್ತದೆ. ‘ರೀ ಡ್ಯು’ ನೆಪದಲ್ಲಿ 700 ಎಕರೆ ಡಿನೋಟಿಫೈ ಮಾಡಲಾಗಿದೆ. ‘ರೀ ಡ್ಯು’ ಪರಿಭಾಷೆ ಹುಟ್ಟುಹಾಕಿದ್ದು ಯಾರು ಎಂದು ಸಿದ್ದರಾಮಯ್ಯ ಉತ್ತರಿಸಬೇಕು’ ಎಂದು ಕುಟುಕಿದರು.</p>.<p>‘ಭ್ರಷ್ಟಾಚಾರ ಮಾಡಿದ್ದರೆ ನೇಣು ಹಾಕಲಿ ಎಂದು ಡಿ.ಕೆ.ಶಿವಕುಮಾರ್ ಹೇಳಿದ್ದಾರೆ. ಅವರು ಪ್ರಾಮಾಣಿಕರೇ ಎಂದು ಆತ್ಮಸಾಕ್ಷಿಯನ್ನು ಪ್ರಶ್ನಿಸಿಕೊಂಡರೆ ಸಾಕು. ನಾವು ನೇಣಿಗೆ ಹಾಕುವ ಅಗತ್ಯ ಇಲ್ಲ’ ಎಂದು ಚುಚ್ಚಿದರು.</p>.<p>‘ರಾಜಕೀಯ ಮೇಲಾಟ, ಕೆಸರೆರಚಾಟಕ್ಕೆ ಕಾಲು ಹಿಡಿಯುವುದು ತಪ್ಪು. ಚಿಕ್ಕಮಗಳೂರು ಜಿಲ್ಲೆಯಲ್ಲಿ ಪಂಚಾಯಿತಿಯಿಂದ ಪಾರ್ಲಿಮೆಂಟ್ವರೆಗೂ ಬಿಜೆಪಿ ಇದೆ. ಈ ಜಿಲ್ಲೆ ಸಿ.ಪಿ.ಯೋಗೇಶ್ವರ್ಗೆ ಮಾದರಿ. ರಾಮನಗರ ಜಿಲ್ಲೆಯಲ್ಲಿ ಹೀಗೆ ಬಿಜೆಪಿ ಕಟ್ಟಲಿ’ ಎಂದು ಹೇಳಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಚಿಕ್ಕಮಗಳೂರು: </strong>‘ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ಅವರು ಭ್ರಷ್ಟಾಚಾರದ ಆರೋಪಕ್ಕೆ ಆಧಾರ ಇದ್ದರೆ ಲೋಕಾಯುಕ್ತಕ್ಕೆ ದೂರು ನೀಡಲಿ’ ಎಂದು ಜಿಲ್ಲಾ ಉಸ್ತುವಾರಿ ಸಚಿವ ಸಿ.ಟಿ. ರವಿ ಸವಾಲು ಹಾಕಿದರು.</p>.<p>ಶನಿವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ‘ಆರೋಪ ಮಾಡುವುದು ಸುಲಭ. ಅದಕ್ಕೆ ಆಧಾರ ಒದಗಿಸುವುದು ಕಷ್ಟ ಎಂಬುದು ಅವರ ಮಾತಿನಿಂದಲೇ ವ್ಯಕ್ತವಾಗುತ್ತದೆ. ‘ರೀ ಡ್ಯು’ ನೆಪದಲ್ಲಿ 700 ಎಕರೆ ಡಿನೋಟಿಫೈ ಮಾಡಲಾಗಿದೆ. ‘ರೀ ಡ್ಯು’ ಪರಿಭಾಷೆ ಹುಟ್ಟುಹಾಕಿದ್ದು ಯಾರು ಎಂದು ಸಿದ್ದರಾಮಯ್ಯ ಉತ್ತರಿಸಬೇಕು’ ಎಂದು ಕುಟುಕಿದರು.</p>.<p>‘ಭ್ರಷ್ಟಾಚಾರ ಮಾಡಿದ್ದರೆ ನೇಣು ಹಾಕಲಿ ಎಂದು ಡಿ.ಕೆ.ಶಿವಕುಮಾರ್ ಹೇಳಿದ್ದಾರೆ. ಅವರು ಪ್ರಾಮಾಣಿಕರೇ ಎಂದು ಆತ್ಮಸಾಕ್ಷಿಯನ್ನು ಪ್ರಶ್ನಿಸಿಕೊಂಡರೆ ಸಾಕು. ನಾವು ನೇಣಿಗೆ ಹಾಕುವ ಅಗತ್ಯ ಇಲ್ಲ’ ಎಂದು ಚುಚ್ಚಿದರು.</p>.<p>‘ರಾಜಕೀಯ ಮೇಲಾಟ, ಕೆಸರೆರಚಾಟಕ್ಕೆ ಕಾಲು ಹಿಡಿಯುವುದು ತಪ್ಪು. ಚಿಕ್ಕಮಗಳೂರು ಜಿಲ್ಲೆಯಲ್ಲಿ ಪಂಚಾಯಿತಿಯಿಂದ ಪಾರ್ಲಿಮೆಂಟ್ವರೆಗೂ ಬಿಜೆಪಿ ಇದೆ. ಈ ಜಿಲ್ಲೆ ಸಿ.ಪಿ.ಯೋಗೇಶ್ವರ್ಗೆ ಮಾದರಿ. ರಾಮನಗರ ಜಿಲ್ಲೆಯಲ್ಲಿ ಹೀಗೆ ಬಿಜೆಪಿ ಕಟ್ಟಲಿ’ ಎಂದು ಹೇಳಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>