ನಗರದಲ್ಲಿ ಶುಕ್ರವಾರ ಸುದ್ದಿಗಾರರೊಂದಿಗೆ ಮಾತನಾಡಿ, ‘ವಿಧಾನಸಭೆ ಚುನಾವಣೆಯಲ್ಲಿ ಚಾಮುಂಡೇಶ್ವರಿ ಕ್ಷೇತ್ರದಲ್ಲಿ ಜೆಡಿಎಸ್, ಬಿಜೆಪಿ ಎರಡೂ ಸೇರಿ ಸೋಲಿಸಿದರು ಎಂದು ಸಿದ್ದರಾಮಯ್ಯ ಹೇಳಿದ್ದಾರೆ. ಎರಡೂ ಪಕ್ಷ ಒಳಒಪ್ಪಂದ ಮಾಡಿಕೊಂಡಿದ್ದರೆ ಬಾದಾಮಿಯಲ್ಲೂ ಅವರು ಸೋಲು ಅನುಭವಿಸಬೇಕಾಗುತ್ತಿತ್ತು’ ಎಂದು ಚುಚ್ಚಿದರು.