<p><strong>ಚಿಕ್ಕಮಗಳೂರು: ‘</strong>ಬಿಜೆಪಿಯನ್ನು ಅಧಿಕಾರದಿಂದ ಹೊರಗಿಡಲು ಆಗ ಜೆಡಿಎಸ್ ಜತೆ ಒಂದಾಗಿದ್ದ ಸಿದ್ದರಾಮಯ್ಯ ಈಗ ‘ಕೈಗೆಟುಕದ ದ್ರಾಕ್ಷಿ ಹುಳಿ’ ಎಂದು ನರಿ ಕತೆ ಹೇಳಿದರೆ ಯಾರು ಕೇಳುತ್ತಾರೆ’ ಎಂದು ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಸಿ.ಟಿ.ರವಿ ವ್ಯಂಗ್ಯವಾಡಿದರು.</p>.<p>ನಗರದಲ್ಲಿ ಶುಕ್ರವಾರ ಸುದ್ದಿಗಾರರೊಂದಿಗೆ ಮಾತನಾಡಿ, ‘ವಿಧಾನಸಭೆ ಚುನಾವಣೆಯಲ್ಲಿ ಚಾಮುಂಡೇಶ್ವರಿ ಕ್ಷೇತ್ರದಲ್ಲಿ ಜೆಡಿಎಸ್, ಬಿಜೆಪಿ ಎರಡೂ ಸೇರಿ ಸೋಲಿಸಿದರು ಎಂದು ಸಿದ್ದರಾಮಯ್ಯ ಹೇಳಿದ್ದಾರೆ. ಎರಡೂ ಪಕ್ಷ ಒಳಒಪ್ಪಂದ ಮಾಡಿಕೊಂಡಿದ್ದರೆ ಬಾದಾಮಿಯಲ್ಲೂ ಅವರು ಸೋಲು ಅನುಭವಿಸಬೇಕಾಗುತ್ತಿತ್ತು’ ಎಂದು ಚುಚ್ಚಿದರು.</p>.<p>‘ಸಿದ್ದರಾಮಯ್ಯ ಅವರು ಸೋಲಿಗೆ ಈಗ ಕಾರಣ ಹುಡುಕಿದ್ದಾರೆ. ಸೋಲಿಸಿದವರ ಜೊತೆ ಸೇರಿ ಅವರು ಸರ್ಕಾರ ರಚಿಸಿದ್ದು ಏಕೆ’ ಎಂದು ಪ್ರಶ್ನಿಸಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಚಿಕ್ಕಮಗಳೂರು: ‘</strong>ಬಿಜೆಪಿಯನ್ನು ಅಧಿಕಾರದಿಂದ ಹೊರಗಿಡಲು ಆಗ ಜೆಡಿಎಸ್ ಜತೆ ಒಂದಾಗಿದ್ದ ಸಿದ್ದರಾಮಯ್ಯ ಈಗ ‘ಕೈಗೆಟುಕದ ದ್ರಾಕ್ಷಿ ಹುಳಿ’ ಎಂದು ನರಿ ಕತೆ ಹೇಳಿದರೆ ಯಾರು ಕೇಳುತ್ತಾರೆ’ ಎಂದು ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಸಿ.ಟಿ.ರವಿ ವ್ಯಂಗ್ಯವಾಡಿದರು.</p>.<p>ನಗರದಲ್ಲಿ ಶುಕ್ರವಾರ ಸುದ್ದಿಗಾರರೊಂದಿಗೆ ಮಾತನಾಡಿ, ‘ವಿಧಾನಸಭೆ ಚುನಾವಣೆಯಲ್ಲಿ ಚಾಮುಂಡೇಶ್ವರಿ ಕ್ಷೇತ್ರದಲ್ಲಿ ಜೆಡಿಎಸ್, ಬಿಜೆಪಿ ಎರಡೂ ಸೇರಿ ಸೋಲಿಸಿದರು ಎಂದು ಸಿದ್ದರಾಮಯ್ಯ ಹೇಳಿದ್ದಾರೆ. ಎರಡೂ ಪಕ್ಷ ಒಳಒಪ್ಪಂದ ಮಾಡಿಕೊಂಡಿದ್ದರೆ ಬಾದಾಮಿಯಲ್ಲೂ ಅವರು ಸೋಲು ಅನುಭವಿಸಬೇಕಾಗುತ್ತಿತ್ತು’ ಎಂದು ಚುಚ್ಚಿದರು.</p>.<p>‘ಸಿದ್ದರಾಮಯ್ಯ ಅವರು ಸೋಲಿಗೆ ಈಗ ಕಾರಣ ಹುಡುಕಿದ್ದಾರೆ. ಸೋಲಿಸಿದವರ ಜೊತೆ ಸೇರಿ ಅವರು ಸರ್ಕಾರ ರಚಿಸಿದ್ದು ಏಕೆ’ ಎಂದು ಪ್ರಶ್ನಿಸಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>