ಚಿಕ್ಕಮಗಳೂರು: ಮಳೆ ಹಾನಿ ವೀಕ್ಷಣೆಗೆಜಿಲ್ಲೆಗೆ ಬಂದಿದ್ದ ವಿಧಾನಸಭೆ ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ವಾಹನದಲ್ಲಿ ಸಾಗುವಾಗ ಕೊಪ್ಪ ತಾಲ್ಲೂಕಿನ ಮಕ್ಕಿಕೊಪ್ಪ ಹಾಗೂ ಶೃಂಗೇರಿ ತಾಲ್ಲೂಕಿನ ಮೆಣಸೆಯಲ್ಲಿ ಬಿಜೆಪಿಯವರು ಕಪ್ಪು ಬಟ್ಟೆ, ಸಾವರ್ಕರ್ ಚಿತ್ರ, ಬಿಜೆಪಿ ಬಾವುಟ ಪ್ರದರ್ಶಿಸಿದರು. ಬಿಜೆಪಿಯವರ ನಡೆಗೆ ಮೆಣಸೆಯಲ್ಲಿ ಕಾಂಗ್ರೆಸ್ ಕಾರ್ಯಕರ್ತರು ಪ್ರತಿರೋಧ ವ್ಯಕ್ತಪಡಿಸಿದರು.