ಚಿಕ್ಕಮಗಳೂರಿನಲ್ಲಿ ಡಿ.19ರಂದು ನಡೆಯಲಿರುವ ದತ್ತ ಜಯಂತಿ ಅಂಗವಾಗಿ ಹಾಸನ ಜಿಲ್ಲೆಯ ಸಕಲೇಶಪುರದಿಂದ ಅರೇಹಳ್ಳಿ, ಬಿಕ್ಕೋಡು, ಬೇಲೂರು, ಹಳೇಬೀಡು ಮಾರ್ಗವಾಗಿ ಸಾವಿರಾರು ವಾಹನಗಳಲ್ಲಿ ದತ್ತ ಮಾಲಾಧಾರಿಗಳು ಚಿಕ್ಕಮಗಳೂರಿಗೆ ತೆರಳುತ್ತಾರೆ. ವಾಪಸಾಗುವಾಗ ಬೇಲೂರು, ಹಳೇಬೀಡು, ಬಿಕ್ಕೊಡು, ಅರೇಹಳ್ಳಿಯಲ್ಲಿ ವಾಹನ ನಿಲ್ಲಿಸಿ ಮದ್ಯ ಸೇವನೆ ಮಾಡಿ ನಂತರ ಅನ್ಯಧರ್ಮಗಳ ಧಾರ್ಮಿಕ ಭಾವನೆಗೆ ಧಕ್ಕೆ ಉಂಟಾಗುವಂತೆ ಘೋಷಣೆ ಕೂಗುತ್ತಾ ಹೋಗುವ ಸಂಭವ ಇರುವುದರಿಂದ ಅಹಿತಕರ ಘಟನೆ ನಡೆಯದಂತೆ ಮುನ್ನೆಚ್ಚರಿಕೆ ಕ್ರಮವಾಗಿ ಬೇಲೂರು ತಾಲ್ಲೂಕಿನಾದ್ಯಂತ ಡಿ.19ರಂದು ಬೆಳಿಗ್ಗೆ 6ರಿಂದ ರಾತ್ರಿ 12 ಗಂಟೆವರೆಗೆ ಪಾನ ನಿರೋಧ (ಒಣ) ದಿನ ಘೋಷಿಸಲು ಜಿಲ್ಲಾ ಪೊಲೀಷ್ ವರಿಷ್ಠಾಧಿಕಾರಿ ಪ್ರಸ್ತಾವ ಸಲ್ಲಿಸಿದ್ದಾರೆ. ಅದರಂತೆ ಬೇಲೂರು ತಾಲ್ಲೂಕು ವ್ಯಾಪ್ತಿಯಲ್ಲಿ 19ರಂದು ಮದ್ಯ ಮಾರಾಟ, ಸಾಗಣೆ ನಿಷೇಧಿಸಲಾಗಿದೆ ಎಂದು ಹಾಸನ ಜಿಲ್ಲಾಧಿಕಾರಿ ಆದೇಶ ಹೊರಡಿಸಿದ್ದಾರೆ.