<p><strong>ತರೀಕೆರೆ:</strong> ಪಾಳೆಗಾರ ಸರ್ಜಾ ಹನುಮಪ್ಪ ನಾಯಕರ ಪುತ್ಥಳಿಯನ್ನು ಶೀಘ್ರದಲ್ಲೇ ಪಟ್ಟಣದ ಸರ್ಜಾ ಹನುಮಪ್ಪ ನಾಯಕ ಖಾಸಗಿ ಬಸ್ ನಿಲ್ದಾಣದ ಮುಂಭಾಗ ಸ್ಥಾಪಿಸಲಾಗುವುದು ಎಂದು ಶಾಸಕ ಜಿ.ಎಚ್. ಶ್ರೀನಿವಾಸ್ ಹೇಳಿದರು.</p>.<p>ತಾಲ್ಲೂಕು ಆಡಳಿತ, ಪುರಸಭೆ, ತರೀಕೆರೆ ಮತ್ತು ಅಜ್ಜಂಪುರ ತಾಲ್ಲೂಕಿನ ವಾಲ್ಮೀಕಿ ಸಮಾಜದ ಆಶ್ರಯದಲ್ಲಿ ನಡೆದ ವಾಲ್ಮೀಕಿ ಜಯಂತಿಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.</p>.<p>‘ಮಹನೀಯರ ಜಯಂತಿಗಳನ್ನು ಆಯಾ ಜಾತಿಗೆ ಸೀಮಿತಗೊಳಿಸದೆ ಎಲ್ಲಾ ಸಮಾಜದವರೂ ಸೇರಿ ಆಚರಿಸಬೇಕು’ ಎಂದರು.</p>.<p>ವಾಲ್ಮೀಕಿ ಸಮಾಜದವರು ನೀಡಿರುವ ಕಣ್ಣಪ್ಪನ ಗುತ್ತಿ ಮತ್ತಿತರರ ಬೇಡಿಕೆಗಳನ್ನು ಹಂತ ಹಂತವಾಗಿ ಈಡೇರಿಸಲಾಗುವುದು ಎಂದರು.</p>.<p>ಉಪ ವಿಭಾಗಾಧಿಕಾರಿ ಕೆ.ಜೆ. ಕಾಂತರಾಜ್ ಮಾತನಾಡಿ, ‘ವಾಲ್ಮೀಕಿ ಅವರಂಥ ಮಹಾನ್ ವ್ಯಕ್ತಿಗಳನ್ನು ದೇವರ ಸ್ವರೂಪದಲ್ಲಿ ಪೂಜಿಸದೆ ಅವರ ಆದರ್ಶಗಳನ್ನು ಮೈಗೂಡಿಸಿಕೊಳ್ಳಬೇಕು’ ಎಂದರು.</p>.<p>‘ವಿದ್ವತ್ತು, ಪ್ರತಿಭೆಗಳು ಜಾತಿ ಆಧಾರದಿಂದ ಬರುವುದಿಲ್ಲ. ಪ್ರೌಢಿಮೆಯಿಂದ ಬರುತ್ತದೆ. ವಾಲ್ಮೀಕಿಯವರನ್ನು ಭುವನದ ಭಾಗ್ಯ ಎಂದು ರಾಷ್ಟ್ರಕವಿ ಹೇಳಿದ್ದಾರೆ. ಸಂಸ್ಕೃತದಲ್ಲಿ ಮೊಟ್ಟ ಮೊದಲ ಬಾರಿಗೆ ಗ್ರಂಥವನ್ನು ರಚಿಸಿ ಆದಿಕವಿ ಎನಿಸಿಕೊಂಡಿದ್ದಾರೆ’ ಎಂದರು.</p>.<p>ಪುರಸಭೆ ಅಧ್ಯಕ್ಷ ವಸಂತಕುಮಾರ್, ಮಾಜಿ ಅಧ್ಯಕ್ಷ ಪ್ರಕಾಶ್ ವರ್ಮಾ, ವಾಲ್ಮೀಕಿ ಸಮಾಜದ ತರೀಕೆರೆ ತಾಲ್ಲೂಕು ಘಟಕದ ಅಧ್ಯಕ್ಷ ಗೋವಿಂದಪ್ಪ, ಅಜ್ಜಂಪುರ ತಾಲ್ಲೂಕು ಘಟಕದ ಅಧ್ಯಕ್ಷ ಅಣ್ಣಪ್ಪ, ಉಪನ್ಯಾಸಕ ದತ್ತಾತ್ರೇಯ ಮಾತನಾಡಿದರು. ವಿದ್ಯಾರ್ಥಿಗಳಿಗೆ ಪ್ರತಿಭಾ ಪುರಸ್ಕಾರ ವಿತರಿಸಲಾಯಿತು.</p>.<p>ಸಮಾಜ ಕಲ್ಯಾಣ ಇಲಾಖೆ ವ್ಯವಸ್ಥಾಪಕ ಲಿಂಗರಾಜ್ ಸ್ವಾಗತಿಸಿದರು. ರೈತಗೀತೆಯನ್ನು ಶಿಕ್ಷಕಿ ಜ್ಯೋತಿ ಮತ್ತು ತಂಡದವರು ಹಾಡಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ತರೀಕೆರೆ:</strong> ಪಾಳೆಗಾರ ಸರ್ಜಾ ಹನುಮಪ್ಪ ನಾಯಕರ ಪುತ್ಥಳಿಯನ್ನು ಶೀಘ್ರದಲ್ಲೇ ಪಟ್ಟಣದ ಸರ್ಜಾ ಹನುಮಪ್ಪ ನಾಯಕ ಖಾಸಗಿ ಬಸ್ ನಿಲ್ದಾಣದ ಮುಂಭಾಗ ಸ್ಥಾಪಿಸಲಾಗುವುದು ಎಂದು ಶಾಸಕ ಜಿ.ಎಚ್. ಶ್ರೀನಿವಾಸ್ ಹೇಳಿದರು.</p>.<p>ತಾಲ್ಲೂಕು ಆಡಳಿತ, ಪುರಸಭೆ, ತರೀಕೆರೆ ಮತ್ತು ಅಜ್ಜಂಪುರ ತಾಲ್ಲೂಕಿನ ವಾಲ್ಮೀಕಿ ಸಮಾಜದ ಆಶ್ರಯದಲ್ಲಿ ನಡೆದ ವಾಲ್ಮೀಕಿ ಜಯಂತಿಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.</p>.<p>‘ಮಹನೀಯರ ಜಯಂತಿಗಳನ್ನು ಆಯಾ ಜಾತಿಗೆ ಸೀಮಿತಗೊಳಿಸದೆ ಎಲ್ಲಾ ಸಮಾಜದವರೂ ಸೇರಿ ಆಚರಿಸಬೇಕು’ ಎಂದರು.</p>.<p>ವಾಲ್ಮೀಕಿ ಸಮಾಜದವರು ನೀಡಿರುವ ಕಣ್ಣಪ್ಪನ ಗುತ್ತಿ ಮತ್ತಿತರರ ಬೇಡಿಕೆಗಳನ್ನು ಹಂತ ಹಂತವಾಗಿ ಈಡೇರಿಸಲಾಗುವುದು ಎಂದರು.</p>.<p>ಉಪ ವಿಭಾಗಾಧಿಕಾರಿ ಕೆ.ಜೆ. ಕಾಂತರಾಜ್ ಮಾತನಾಡಿ, ‘ವಾಲ್ಮೀಕಿ ಅವರಂಥ ಮಹಾನ್ ವ್ಯಕ್ತಿಗಳನ್ನು ದೇವರ ಸ್ವರೂಪದಲ್ಲಿ ಪೂಜಿಸದೆ ಅವರ ಆದರ್ಶಗಳನ್ನು ಮೈಗೂಡಿಸಿಕೊಳ್ಳಬೇಕು’ ಎಂದರು.</p>.<p>‘ವಿದ್ವತ್ತು, ಪ್ರತಿಭೆಗಳು ಜಾತಿ ಆಧಾರದಿಂದ ಬರುವುದಿಲ್ಲ. ಪ್ರೌಢಿಮೆಯಿಂದ ಬರುತ್ತದೆ. ವಾಲ್ಮೀಕಿಯವರನ್ನು ಭುವನದ ಭಾಗ್ಯ ಎಂದು ರಾಷ್ಟ್ರಕವಿ ಹೇಳಿದ್ದಾರೆ. ಸಂಸ್ಕೃತದಲ್ಲಿ ಮೊಟ್ಟ ಮೊದಲ ಬಾರಿಗೆ ಗ್ರಂಥವನ್ನು ರಚಿಸಿ ಆದಿಕವಿ ಎನಿಸಿಕೊಂಡಿದ್ದಾರೆ’ ಎಂದರು.</p>.<p>ಪುರಸಭೆ ಅಧ್ಯಕ್ಷ ವಸಂತಕುಮಾರ್, ಮಾಜಿ ಅಧ್ಯಕ್ಷ ಪ್ರಕಾಶ್ ವರ್ಮಾ, ವಾಲ್ಮೀಕಿ ಸಮಾಜದ ತರೀಕೆರೆ ತಾಲ್ಲೂಕು ಘಟಕದ ಅಧ್ಯಕ್ಷ ಗೋವಿಂದಪ್ಪ, ಅಜ್ಜಂಪುರ ತಾಲ್ಲೂಕು ಘಟಕದ ಅಧ್ಯಕ್ಷ ಅಣ್ಣಪ್ಪ, ಉಪನ್ಯಾಸಕ ದತ್ತಾತ್ರೇಯ ಮಾತನಾಡಿದರು. ವಿದ್ಯಾರ್ಥಿಗಳಿಗೆ ಪ್ರತಿಭಾ ಪುರಸ್ಕಾರ ವಿತರಿಸಲಾಯಿತು.</p>.<p>ಸಮಾಜ ಕಲ್ಯಾಣ ಇಲಾಖೆ ವ್ಯವಸ್ಥಾಪಕ ಲಿಂಗರಾಜ್ ಸ್ವಾಗತಿಸಿದರು. ರೈತಗೀತೆಯನ್ನು ಶಿಕ್ಷಕಿ ಜ್ಯೋತಿ ಮತ್ತು ತಂಡದವರು ಹಾಡಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>