ಚಿಕ್ಕಮಗಳೂರು: ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಕೆ.ಅಣ್ಣಾಮಲೈ ಅವರನ್ನು ಬೆಂಗಳೂರು ದಕ್ಷಿಣ ವಿಭಾಗದ ಡಿಸಿಪಿ ಆಗಿ ವರ್ಗಾವಣೆ ಮಾಡಿ ಸರ್ಕಾರ ಆದೇಶ ಹೊರಡಿಸಿದೆ.
ಅಪರಾಧ ತನಿಖಾ ದಳದ (ಸಿಐಡಿ) ಎಸ್ಪಿ ಹರೀಶ್ ಪಾಂಡೆ ಅವರನ್ನು ಚಿಕ್ಕಮಗಳೂರು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಯಾಗಿ ವರ್ಗಾವಣೆ ಮಾಡಲಾಗಿದೆ.
ಅಣ್ಣಾಮಲೈ ಅವರು 2016ರ ಆಗಸ್ಟ್ 4ರಂದು ಉಡುಪಿಯಿಂದ ಚಿಕ್ಕಮಗಳೂರಿಗೆ ವರ್ಗಾವಣೆಯಾಗಿದ್ದರು. ತಮ್ಮದೇ ಆದ ಕಾರ್ಯ ವೈಖರಿಯಿಂದ ಖಡಕ್, ಪ್ರಾಮಾಣಿಕ ಅಧಿಕಾರಿ ಎಂದೇ ಹೆಸರಾಗಿದ್ದಾರೆ.
ಜಿಲ್ಲೆಯಲ್ಲಿ ಶಾಂತಿ–ಸುವ್ಯವಸ್ಥೆ ನಿರ್ವಹಣೆಗೆ ನಿಗಾ ವಹಿಸಿದ್ದರು. ಬೆಟ್ಟಿಂಗ್ ದಂಧೆಗೆ ಕಡಿವಾಣ ಹಾಕಿದ್ದರು. ದತ್ತ ಜಯಂತಿ, ಉರುಸ್ ಆಚರಣೆ, ಚುನಾವಣೆ ಭದ್ರತೆಗಳನ್ನು ವ್ಯವಸ್ಥಿತವಾಗಿ ನಿರ್ವಹಿಸಿದ್ದರು. ಜನಮನದಲ್ಲಿ ಹೆಸರಾಗಿದ್ದರು.