ದತ್ತಜಯಂತಿ ಅಂಗವಾಗಿ ಜಿಲ್ಲೆಯಲ್ಲಿ ಡಿಆರ್, ಕೆಎಸ್ಆರ್ಪಿ ಸೇರಿದಂತೆ ಸಿಬ್ಬಂದಿ ಬಳಸಿ ಬಿಗಿ ಬಂದೋಬಸ್ತ್ ಹಾಕಲಾಗಿದೆ. ಯಾವುದೇ ಅಹಿತಕರ ಘಟನೆ ಮರುಕಳಿಸದಂತೆ ಎಚ್ಚರಿಕೆ ವಹಿಸಲಾಗಿದೆ. ಕಾನೂನು ಸುವ್ಯವಸ್ಥೆ ಕಾಪಾಡುವ ದೃಷ್ಟಿಯಿಂದ ದತ್ತ ಜಯಂತಿಯಂದು ನಿರ್ದಿಷ್ಟ ಪ್ರದೇಶದಲ್ಲಿ ಸಂಜೆ ವೇಳೆ ಅಂಗಡಿ ಮುಂಗಟ್ಟುಗಳನ್ನು ಮುಚ್ಚಲಾಗುತ್ತಿದೆ ಎಂದರು. ಕೊಪ್ಪ ಎಎಸ್ಪಿ ಗುಂಜನ್ ಆರ್ಯ, ಸಿಪಿಐ ಸತ್ಯನಾರಾಯಣ, ಪಿಎಸ್ಐ ವಿ.ಟಿ.ದಿಲೀಪ್ ಕುಮಾರ್ ಇದ್ದರು.