ನಗರದ ಕ್ಯಾಪಿಟಲ್ ಹೊಟೇಲ್ನಲ್ಲಿ ಈ ಸಭೆ ನಡೆಯಲಿದೆ. ಮುಖ್ಯಮಂತ್ರಿ ಸುಸೂತ್ರ ಆಯ್ಕೆ ಪ್ರಕ್ರಿಯೆಗಾಗಿ ದೆಹಲಿಯಿಂದ ವೀಕ್ಷಕರಾಗಿ ಬರುವ ಕೇಂದ್ರ ಸಚಿವರಾದ ಕಿಶನ್ ರೆಡ್ಡಿ ಮತ್ತು ಧರ್ಮೇಂದ್ರ ಪ್ರಧಾನ್ ಅವರು ಈ ಸಭೆಯಲ್ಲಿ ಭಾಗವಹಿಸಲಿದ್ದಾರೆ. ಮೊದಲಿಗೆ ಹೊಸ ಮುಖ್ಯಮಂತ್ರಿ ಆಯ್ಕೆಗೆ ಬಗ್ಗೆ ಮಾಹಿತಿ ಸಂಗ್ರಹಿಸಿ ಬಳಿಕ ಹೆಸರು ಪ್ರಕಟಿಸಬಹುದು ಎಂದು ಮೂಲಗಳು ತಿಳಿಸಿವೆ. ರಾತ್ರಿ 7.30 ಕ್ಕೆ ಈ ಸಭೆ ನಡೆಯಲಿದೆ.