<p><strong>ಅಜ್ಜಂಪುರ: ‘ಗ್ರಾಮೀಣ ಕ್ರೀಡೆಗಳ ಪ್ರೋತ್ಸಾಹ ಮತ್ತು ಗ್ರಾಮೀಣ ಯುವ ಕ್ರೀಡಾಪಟುಗಳ ಉತ್ತೇಜನಕ್ಕಾಗಿ ಆಯೋಜಿಸುವ ಗ್ರಾಮೀಣ ಕ್ರೀಡಾಕೂಟದಲ್ಲಿ ಭಾಗವಹಿಸಲು ಯುವ ಸಮೂಹ ಹೆಚ್ಚು ಉತ್ಸಾಹ ತೋರಬೇಕು’ ಎಂದು ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ ತಾಲ್ಲೂಕು ಯುವ ಸಮನ್ವಯಾಧಿಕಾರಿ ಮಲ್ಲಿದೇವಿಹಳ್ಳಿ ಶ್ರೀನಿವಾಸ್ ಮನವಿ ಮಾಡಿದರು.</strong></p>.<p><strong>ತಾಲ್ಲೂಕಿನ ಗಡೀಹಳ್ಳಿ ಗ್ರಾಮದಲ್ಲಿ ಕ್ಲಸ್ಟರ್ ಮಟ್ಟದ ಗ್ರಾಮೀಣ ಕ್ರೀಡಾಕೂಟದ ಉದ್ಘಾಟನಾ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು.</strong></p>.<p><strong>ಗಡೀಹಳ್ಳಿ ಪಂಚಾಯಿತಿ ಅಧ್ಯಕ್ಷೆ ಕವಿತಾ ಮೌನೇಶ್ ಮಾತನಾಡಿ, ಯುವಕರು ಮೊಬೈಲ್ ಗೀಳಿನಿಂದ ಹೊರಬರಬೇಕು. ದೈಹಿಕ ಮತ್ತು ಮಾನಸಿಕ ಆರೋಗ್ಯಕ್ಕೆ ಪೂರಕವಾದ ಕ್ರೀಡಾ ಚಟುವಟಿಕೆಯಲ್ಲಿ ಭಾಗಿಯಾಗಬೇಕು ಎಂದು ಸಲಹೆ ನೀಡಿದರು.</strong></p>.<p><strong>ವಿವಿಧ ಪಂಚಾಯಿತಿ ಅಧ್ಯಕ್ಷರಾದ ಪಿಡಿಒ ಹರ್ಷವರ್ಧನ್, ಕುಮಾರ್, ರಮೇಶ್, ಹುಲ್ಲಪ್ಪ ಹಳ್ಳಿಕೇರಿ, ಅಮೀರ್ ಇದ್ದರು. ಗಡೀಹಳ್ಳಿ, ಕಲ್ಲೇನಹಳ್ಳಿ, ತ್ಯಾಗದಕಟ್ಟೆ, ಬೇಗೂರು, ಸೊಲ್ಲಾಪುರ ಪಂಚಾಯಿತಿ ವ್ಯಾಪ್ತಿಯ 19 ವರ್ಷ ಮೇಲ್ಪಟ್ಟ ಕ್ರೀಡಾಪಟುಗಳು ಕಬಡ್ಡಿ, ವಾಲಿಬಾಲ್, ಕೋಕೊ ಪಂದ್ಯಾವಳಿ ಮತ್ತು ಯೋಗ ಪ್ರದರ್ಶನದಲ್ಲಿ ಪಾಲ್ಗೂಂಡರು.</strong></p>.<p><strong>ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆ, ಶಾಲಾ ಶಿಕ್ಷಣ ಸಾಕ್ಷರತಾ ಇಲಾಖೆ, ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ ಕಾರ್ಯಕ್ರಮ ಆಯೋಜಿಸಿತ್ತು.</strong></p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಅಜ್ಜಂಪುರ: ‘ಗ್ರಾಮೀಣ ಕ್ರೀಡೆಗಳ ಪ್ರೋತ್ಸಾಹ ಮತ್ತು ಗ್ರಾಮೀಣ ಯುವ ಕ್ರೀಡಾಪಟುಗಳ ಉತ್ತೇಜನಕ್ಕಾಗಿ ಆಯೋಜಿಸುವ ಗ್ರಾಮೀಣ ಕ್ರೀಡಾಕೂಟದಲ್ಲಿ ಭಾಗವಹಿಸಲು ಯುವ ಸಮೂಹ ಹೆಚ್ಚು ಉತ್ಸಾಹ ತೋರಬೇಕು’ ಎಂದು ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ ತಾಲ್ಲೂಕು ಯುವ ಸಮನ್ವಯಾಧಿಕಾರಿ ಮಲ್ಲಿದೇವಿಹಳ್ಳಿ ಶ್ರೀನಿವಾಸ್ ಮನವಿ ಮಾಡಿದರು.</strong></p>.<p><strong>ತಾಲ್ಲೂಕಿನ ಗಡೀಹಳ್ಳಿ ಗ್ರಾಮದಲ್ಲಿ ಕ್ಲಸ್ಟರ್ ಮಟ್ಟದ ಗ್ರಾಮೀಣ ಕ್ರೀಡಾಕೂಟದ ಉದ್ಘಾಟನಾ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು.</strong></p>.<p><strong>ಗಡೀಹಳ್ಳಿ ಪಂಚಾಯಿತಿ ಅಧ್ಯಕ್ಷೆ ಕವಿತಾ ಮೌನೇಶ್ ಮಾತನಾಡಿ, ಯುವಕರು ಮೊಬೈಲ್ ಗೀಳಿನಿಂದ ಹೊರಬರಬೇಕು. ದೈಹಿಕ ಮತ್ತು ಮಾನಸಿಕ ಆರೋಗ್ಯಕ್ಕೆ ಪೂರಕವಾದ ಕ್ರೀಡಾ ಚಟುವಟಿಕೆಯಲ್ಲಿ ಭಾಗಿಯಾಗಬೇಕು ಎಂದು ಸಲಹೆ ನೀಡಿದರು.</strong></p>.<p><strong>ವಿವಿಧ ಪಂಚಾಯಿತಿ ಅಧ್ಯಕ್ಷರಾದ ಪಿಡಿಒ ಹರ್ಷವರ್ಧನ್, ಕುಮಾರ್, ರಮೇಶ್, ಹುಲ್ಲಪ್ಪ ಹಳ್ಳಿಕೇರಿ, ಅಮೀರ್ ಇದ್ದರು. ಗಡೀಹಳ್ಳಿ, ಕಲ್ಲೇನಹಳ್ಳಿ, ತ್ಯಾಗದಕಟ್ಟೆ, ಬೇಗೂರು, ಸೊಲ್ಲಾಪುರ ಪಂಚಾಯಿತಿ ವ್ಯಾಪ್ತಿಯ 19 ವರ್ಷ ಮೇಲ್ಪಟ್ಟ ಕ್ರೀಡಾಪಟುಗಳು ಕಬಡ್ಡಿ, ವಾಲಿಬಾಲ್, ಕೋಕೊ ಪಂದ್ಯಾವಳಿ ಮತ್ತು ಯೋಗ ಪ್ರದರ್ಶನದಲ್ಲಿ ಪಾಲ್ಗೂಂಡರು.</strong></p>.<p><strong>ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆ, ಶಾಲಾ ಶಿಕ್ಷಣ ಸಾಕ್ಷರತಾ ಇಲಾಖೆ, ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ ಕಾರ್ಯಕ್ರಮ ಆಯೋಜಿಸಿತ್ತು.</strong></p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>