<p>ಶೃಂಗೇರಿ: ‘ಅತಿಯಾದ ಮಳೆ ಹಾಗೂ ತೇವಾಂಶದಿಂದ ಜಿಲ್ಲೆಯ 20 ಸಾವಿರಕ್ಕೂ ಹೆಚ್ಚು ಹೆಕ್ಟೇರ್ ತೋಟಗಳಿಗೆಎಲೆಚುಕ್ಕಿ ರೋಗ ವ್ಯಾಪಿಸಿದೆ. ಅಕ್ಕ ಪಕ್ಕದ ತೋಟಗಳಿಗೆ ಶೀಘ್ರವಾಗಿ ಗಾಳಿಯಿಂದ, ಮಳೆಯಿಂದ ರೋಗ ಹರಡುತ್ತದೆ’ ಎಂದು ಮೂಡಿಗೆರೆ ಕೃಷಿ ವಿಜ್ಞಾನ ಕೇಂದ್ರದ ವಿಜ್ಞಾನಿ ಡಾ.ಗಿರೀಶ್ ಹೇಳಿದರು.</p>.<p>ಶೃಂಗೇರಿಯ ಜಿ.ಎಸ್.ಬಿ ಸಭಾಂಗಣ ದಲ್ಲಿ ಪಿಕಾರ್ಡ್ ಬ್ಯಾಂಕ್, ಮ್ಯಾಮ್ಕೋಸ್, ತಾಲ್ಲೂಕು ಕೃಷಿ ಸಮಾಜದ ಸಂಯುಕ್ತ ಆಶ್ರಯದಲ್ಲಿ ನಡೆದ ಎಲೆಚುಕ್ಕಿ ರೋಗದ ಬಗ್ಗೆ ಮಾಹಿತಿ ಕಾರ್ಯಾಗಾರದಲ್ಲಿ ಮಾತನಾಡಿದರು.</p>.<p>‘ರೋಗ ಹರಡಿಸುವ ಜೀವಾಣು 3 ವರ್ಷಗಳ ಕಾಲ ಭೂಮಿಯಲ್ಲಿ ಉಳಿದುಕೊಂಡಿರುತ್ತದೆ. ಹಾಗಾಗಿ, ರೋಗ ತಗಲಿದ ಅಡಿಕೆ ಗರಿಗಳನ್ನು ಕತ್ತರಿಸಿ ಸುಡಬೇಕು. ಭತ್ತದ ಗದ್ದೆಗಳನ್ನು ಅಡಿಕೆ ತೋಟವಾಗಿ ಪರಿವರ್ತಿಸಿದ ಜಾಗದಲ್ಲಿ ಹೆಚ್ಚಾಗಿ ಈ ರೋಗ ಕಾಣಿಸಿಕೊಂಡಿದೆ. ಸಾಫ್ ಅಥವಾ ಹೆಕ್ಸೋಜೋನಲ್ ರಾಸಾಯನಿಕ ಔಷಧಿಯನ್ನು ಸಿಂಪಡಿಸಬೇಕು. ಆಗ ರೋಗವನ್ನು ನಿಯಂತ್ರಿಸಲು ಸಾಧ್ಯ’ ಎಂದು ಹೇಳಿದರು.</p>.<p>ಮುಖ್ಯಮಂತ್ರಿ ರಾಜಕೀಯ ಮುಖ್ಯ ಕಾರ್ಯದರ್ಶಿ ಡಿ.ಎನ್ ಜೀವರಾಜ್ ಮಾತನಾಡಿ, ‘ರೈತರಿಗೆ ಅಡಿಕೆ ಬೆಳೆ ಉಳಿಸಿಕೊಳ್ಳುವುದು ಕಷ್ಟಕರವಾಗಿದೆ. ಅಡಿಕೆ ಹಳದಿ ರೋಗ ಹಾಗೂ ಎಲೆಚುಕ್ಕಿ ರೋಗಕ್ಕೆ ವಿಜ್ಞಾನಿಗಳು ಕೂಡಲೇ ಔಷಧಿ ಕಂಡು ಹಿಡಿಯಬೇಕು. ಸಂಕಷ್ಟ ಕಾಲದಲ್ಲಿ ಸರ್ಕಾರವು ಕೃಷಿಕರ ನೆರವಿಗೆ ಬರಬೇಕು’ ಎಂದರು.</p>.<p>ಬೆಂಗಳೂರಿನ ಸಿ.ಐ.ಐ.ಆರ್.ಸಿ ಸಂಸ್ಥೆಯ ವಿಜ್ಞಾನಿ ಡಾ.ಶ್ವೇತಾ ಮಾತನಾಡಿ, ‘ಅಡಿಕೆ ಮರಕ್ಕೆ ತಗಲುವ ಯಾವುದೇ ರೋಗಕ್ಕೆ ಬೇರಿನ ಮುಖಾಂತರ ಔಷಧಿ ನೀಡುವುದು ಉಪಯುಕ್ತ. ಶಾರದಾ ಮಠ ಸೇರಿದಂತೆ ಒಟ್ಟು 3 ತೋಟಗಳಲ್ಲಿ ಈ ಪ್ರಯೋಗ ನಡೆಸಲಾಗಿದ್ದು, ರೋಗ ಹತೋಟಿಗೆ ಬರುವ ಲಕ್ಷಣ ಕಾಣುತ್ತಿದೆ’ ಎಂದರು.</p>.<p>ಜಿಲ್ಲಾ ತೋಟಗಾರಿಕಾ ಇಲಾಖೆಯ ಉಪನಿರ್ದೇಶಕ ವೇದಮೂರ್ತಿ ಮಾತನಾಡಿ, ‘ಜಿಲ್ಲೆಯಲ್ಲಿ ಸುಮಾರು 5 ಸಾವಿರ ಲೀಟರ್ ರೋಗ ನಿಯಂತ್ರಣ ಔಷಧಿ ತಂದು ಇಲಾಖೆಯ ಮೂಲಕ ವಿತರಿಸಲಾಗುತ್ತಿದೆ. ಪ್ರತಿ ತಾಲ್ಲೂಕಿನಲ್ಲಿ 5 ಆಯ್ದ ತೋಟಗಳನ್ನು ರೋಗದ ನಿಯಂತ್ರಣಕ್ಕಾಗಿ ಪ್ರಯೋಗಾತ್ಮಕವಾಗಿ ಬಳಸಿಕೊಳ್ಳಲಾಗುವುದು’ ಎಂದರು.</p>.<p>ವಿಜ್ಞಾನಿಗಳಾದ ಡಾ.ಕೃಷ್ಣಮೂರ್ತಿ, ಸಿ.ಐ.ಐ.ಆರ್.ಸಿ ನಿರ್ದೇಶಕ ಡಾ.ಕೃಷ್ಣಮೂರ್ತಿ, ತಾಲ್ಲೂಕು ಕೃಷಿ ಸಮಾಜ ಅಧ್ಯಕ್ಷ ಎಂ.ಎಸ್ ರಂಗನಾಥ್, ಪಿಕಾರ್ಡ್ ಬ್ಯಾಂಕ್ ಅಧ್ಯಕ್ಷ ಎ.ಎಸ್ ನಯನ, ಜಿಲ್ಲಾ ಕೃಷಿಕ ಸಮಾಜ ಅಧ್ಯಕ್ಷ ಬಿ.ಸಿನರೇಂದ್ರ, ಮ್ಯಾಮ್ಕೋಸ್ ನಿರ್ದೇಶಕರಾದ ಸುರೇಶ್ಚಂದ್ರ, ಟಿ.ಕೆ.ಪರಾಶರ ಇದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p>ಶೃಂಗೇರಿ: ‘ಅತಿಯಾದ ಮಳೆ ಹಾಗೂ ತೇವಾಂಶದಿಂದ ಜಿಲ್ಲೆಯ 20 ಸಾವಿರಕ್ಕೂ ಹೆಚ್ಚು ಹೆಕ್ಟೇರ್ ತೋಟಗಳಿಗೆಎಲೆಚುಕ್ಕಿ ರೋಗ ವ್ಯಾಪಿಸಿದೆ. ಅಕ್ಕ ಪಕ್ಕದ ತೋಟಗಳಿಗೆ ಶೀಘ್ರವಾಗಿ ಗಾಳಿಯಿಂದ, ಮಳೆಯಿಂದ ರೋಗ ಹರಡುತ್ತದೆ’ ಎಂದು ಮೂಡಿಗೆರೆ ಕೃಷಿ ವಿಜ್ಞಾನ ಕೇಂದ್ರದ ವಿಜ್ಞಾನಿ ಡಾ.ಗಿರೀಶ್ ಹೇಳಿದರು.</p>.<p>ಶೃಂಗೇರಿಯ ಜಿ.ಎಸ್.ಬಿ ಸಭಾಂಗಣ ದಲ್ಲಿ ಪಿಕಾರ್ಡ್ ಬ್ಯಾಂಕ್, ಮ್ಯಾಮ್ಕೋಸ್, ತಾಲ್ಲೂಕು ಕೃಷಿ ಸಮಾಜದ ಸಂಯುಕ್ತ ಆಶ್ರಯದಲ್ಲಿ ನಡೆದ ಎಲೆಚುಕ್ಕಿ ರೋಗದ ಬಗ್ಗೆ ಮಾಹಿತಿ ಕಾರ್ಯಾಗಾರದಲ್ಲಿ ಮಾತನಾಡಿದರು.</p>.<p>‘ರೋಗ ಹರಡಿಸುವ ಜೀವಾಣು 3 ವರ್ಷಗಳ ಕಾಲ ಭೂಮಿಯಲ್ಲಿ ಉಳಿದುಕೊಂಡಿರುತ್ತದೆ. ಹಾಗಾಗಿ, ರೋಗ ತಗಲಿದ ಅಡಿಕೆ ಗರಿಗಳನ್ನು ಕತ್ತರಿಸಿ ಸುಡಬೇಕು. ಭತ್ತದ ಗದ್ದೆಗಳನ್ನು ಅಡಿಕೆ ತೋಟವಾಗಿ ಪರಿವರ್ತಿಸಿದ ಜಾಗದಲ್ಲಿ ಹೆಚ್ಚಾಗಿ ಈ ರೋಗ ಕಾಣಿಸಿಕೊಂಡಿದೆ. ಸಾಫ್ ಅಥವಾ ಹೆಕ್ಸೋಜೋನಲ್ ರಾಸಾಯನಿಕ ಔಷಧಿಯನ್ನು ಸಿಂಪಡಿಸಬೇಕು. ಆಗ ರೋಗವನ್ನು ನಿಯಂತ್ರಿಸಲು ಸಾಧ್ಯ’ ಎಂದು ಹೇಳಿದರು.</p>.<p>ಮುಖ್ಯಮಂತ್ರಿ ರಾಜಕೀಯ ಮುಖ್ಯ ಕಾರ್ಯದರ್ಶಿ ಡಿ.ಎನ್ ಜೀವರಾಜ್ ಮಾತನಾಡಿ, ‘ರೈತರಿಗೆ ಅಡಿಕೆ ಬೆಳೆ ಉಳಿಸಿಕೊಳ್ಳುವುದು ಕಷ್ಟಕರವಾಗಿದೆ. ಅಡಿಕೆ ಹಳದಿ ರೋಗ ಹಾಗೂ ಎಲೆಚುಕ್ಕಿ ರೋಗಕ್ಕೆ ವಿಜ್ಞಾನಿಗಳು ಕೂಡಲೇ ಔಷಧಿ ಕಂಡು ಹಿಡಿಯಬೇಕು. ಸಂಕಷ್ಟ ಕಾಲದಲ್ಲಿ ಸರ್ಕಾರವು ಕೃಷಿಕರ ನೆರವಿಗೆ ಬರಬೇಕು’ ಎಂದರು.</p>.<p>ಬೆಂಗಳೂರಿನ ಸಿ.ಐ.ಐ.ಆರ್.ಸಿ ಸಂಸ್ಥೆಯ ವಿಜ್ಞಾನಿ ಡಾ.ಶ್ವೇತಾ ಮಾತನಾಡಿ, ‘ಅಡಿಕೆ ಮರಕ್ಕೆ ತಗಲುವ ಯಾವುದೇ ರೋಗಕ್ಕೆ ಬೇರಿನ ಮುಖಾಂತರ ಔಷಧಿ ನೀಡುವುದು ಉಪಯುಕ್ತ. ಶಾರದಾ ಮಠ ಸೇರಿದಂತೆ ಒಟ್ಟು 3 ತೋಟಗಳಲ್ಲಿ ಈ ಪ್ರಯೋಗ ನಡೆಸಲಾಗಿದ್ದು, ರೋಗ ಹತೋಟಿಗೆ ಬರುವ ಲಕ್ಷಣ ಕಾಣುತ್ತಿದೆ’ ಎಂದರು.</p>.<p>ಜಿಲ್ಲಾ ತೋಟಗಾರಿಕಾ ಇಲಾಖೆಯ ಉಪನಿರ್ದೇಶಕ ವೇದಮೂರ್ತಿ ಮಾತನಾಡಿ, ‘ಜಿಲ್ಲೆಯಲ್ಲಿ ಸುಮಾರು 5 ಸಾವಿರ ಲೀಟರ್ ರೋಗ ನಿಯಂತ್ರಣ ಔಷಧಿ ತಂದು ಇಲಾಖೆಯ ಮೂಲಕ ವಿತರಿಸಲಾಗುತ್ತಿದೆ. ಪ್ರತಿ ತಾಲ್ಲೂಕಿನಲ್ಲಿ 5 ಆಯ್ದ ತೋಟಗಳನ್ನು ರೋಗದ ನಿಯಂತ್ರಣಕ್ಕಾಗಿ ಪ್ರಯೋಗಾತ್ಮಕವಾಗಿ ಬಳಸಿಕೊಳ್ಳಲಾಗುವುದು’ ಎಂದರು.</p>.<p>ವಿಜ್ಞಾನಿಗಳಾದ ಡಾ.ಕೃಷ್ಣಮೂರ್ತಿ, ಸಿ.ಐ.ಐ.ಆರ್.ಸಿ ನಿರ್ದೇಶಕ ಡಾ.ಕೃಷ್ಣಮೂರ್ತಿ, ತಾಲ್ಲೂಕು ಕೃಷಿ ಸಮಾಜ ಅಧ್ಯಕ್ಷ ಎಂ.ಎಸ್ ರಂಗನಾಥ್, ಪಿಕಾರ್ಡ್ ಬ್ಯಾಂಕ್ ಅಧ್ಯಕ್ಷ ಎ.ಎಸ್ ನಯನ, ಜಿಲ್ಲಾ ಕೃಷಿಕ ಸಮಾಜ ಅಧ್ಯಕ್ಷ ಬಿ.ಸಿನರೇಂದ್ರ, ಮ್ಯಾಮ್ಕೋಸ್ ನಿರ್ದೇಶಕರಾದ ಸುರೇಶ್ಚಂದ್ರ, ಟಿ.ಕೆ.ಪರಾಶರ ಇದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>