<p><strong>ನರಸಿಂಹರಾಜಪುರ: </strong>‘ಮುಂದಿನ ವಿಧಾನಸಭಾ ಚುನಾವಣೆಗೆ ಶೃಂಗೇರಿ ಕ್ಷೇತ್ರದ ಬಿಜೆಪಿ ಟಿಕೆಟ್ನ ಪ್ರಬಲ ಆಕಾಂಕ್ಷಿಯಾಗಿದ್ದೇನೆ’ ಎಂದು ಬಿಜೆಪಿ ಜಿಲ್ಲಾ ಘಟಕದ ಮಾಜಿ ಕಾರ್ಯದರ್ಶಿ ಎಂ.ಆರ್.ರವಿಶಂಕರ್ ತಿಳಿಸಿದರು.</p>.<p>ಸೋಮವಾರ ಪತ್ರಿಕಾಗೋಷ್ಠಿ ಯಲ್ಲಿ ಮಾತನಾಡಿದ ಅವರು, ‘ಬಿಜೆಪಿಯ ಸಾಮಾನ್ಯ ಕಾರ್ಯಕರ್ತ ನಾಗಿ ಈ ಹಿಂದೆ ಪಕ್ಷ ನೀಡಿದ ಎಲ್ಲ ಜವಾಬ್ದಾರಿಯನ್ನು ನಿಷ್ಠೆ ಮತ್ತು ಪ್ರಾಮಾಣಿಕತೆಯಿಂದ ನಿರ್ವಹಿಸಲಾಗಿದೆ. ಟಿಕೆಟ್ ನೀಡಿದರೆ ಸ್ಪರ್ಧೆಗೆ ಸಿದ್ಧನಿದ್ದೇನೆ. ಒಂದು ವೇಳೆ ಪಕ್ಷ ಬೇರೆಯವರಿಗೆ ಟಿಕೆಟ್ ನೀಡಿದರೆ ಪಕ್ಷದ ಅಭ್ಯರ್ಥಿಯ ಗೆಲುವಿಗೆ ಶ್ರಮವಹಿಸಿ ಕೆಲಸ ಮಾಡಲಾಗುವುದು’ ಎಂದರು.</p>.<p>‘ಶೃಂಗೇರಿ ಕ್ಷೇತ್ರದಲ್ಲಿನ ಹಿಂದೂ ಬ್ರಿಗೇಡ್ಗೂ ತಮಗೂ ಸಂಬಂಧವಿಲ್ಲ. ಜಿಲ್ಲಾ ಬಿಜೆಪಿ ಘಟಕದ ಅಧ್ಯಕ್ಷರು ಮಾಹಿತಿ ಕೊರತೆಯಿಂದ ಹಿಂದೂ ಬ್ರಿಗೇಡ್ಗೆ ನನ್ನ ಹೆಸರನ್ನು ತಳಕು ಹಾಕುವ ಕೆಲಸ ಮಾಡಿದ್ದಾರೆ. ಈ ಬಗ್ಗೆ ಶೀಘ್ರದಲ್ಲೇ ಭೇಟಿ ಮಾಡಿ ಸ್ಪಷ್ಟನೆ ನೀಡಲಾಗುವುದು’ ಎಂದರು.</p>.<p>‘ಈಗಾಗಲೇ ನರಸಿಂಹರಾಜ ಪುರ ತಾಲ್ಲೂಕು ಬಿಜೆಪಿ ಘಟಕದ ಅಧ್ಯಕ್ಷರನ್ನು ಭೇಟಿ ಮಾಡಿ ಹಿಂದೂ ಬ್ರಿಗೇಡ್ನ ಹೇಳಿಕೆಗೂ ನಮಗಾಗಲಿ ಅಥವಾ ಕಾರ್ಯಕರ್ತರಿಗಾಗಲಿ ಯಾವುದೇ ಸಂಬಂಧವಿಲ್ಲ ಎಂಬ ಅಂಶವನ್ನು ಗಮನಕ್ಕೆ ತರಲಾಗಿದೆ’ ಎಂದರು.</p>.<p>‘ಕ್ಷೇತ್ರದ ಮೂರು ತಾಲ್ಲೂಕಿನ ಬಿಜೆಪಿ ಘಟಕದ ಅಧ್ಯಕ್ಷರನ್ನು ಭೇಟಿ ಮಾಡಿ ಹಿಂದುತ್ವದ ಆಧಾರದ ಮೇಲೆ ಮುಂದಿನ ಚುನಾವಣೆ ಯಲ್ಲಿ ಬಿಜೆಪಿ ಅಭ್ಯರ್ಥಿಯನ್ನು ಗೆಲ್ಲಿಸ ಬೇಕೆಂದು ಮನವಿ ಮಾಡಿದ್ದೇವೆ. ಪಕ್ಷದ ಸಂಘಟನೆ ಮುಂದಿನ ಒಂದು ವರ್ಷ ತೊಡಗಿಸಿಕೊಳ್ಳುವ ಬಗ್ಗೆ ಚರ್ಚಿಸಲಾಗಿದೆ’ ಎಂದರು.</p>.<p>ಪಕ್ಷದ ಜಿಲ್ಲಾಧ್ಯಕ್ಷರು, ಸಂಘಟನೆಯ ಹಿರಿಯರನ್ನು ಭೇಟಿ ಮಾಡಿ ಹಿಂದೂ ಬ್ರಿಗೇಡ್ ನಲ್ಲಿರುವ ಪಕ್ಷಕ್ಕೆ ದುಡಿದ ವ್ಯಕ್ತಿಗಳ ಅಭಿಪ್ರಾಯ ಸಂಗ್ರಹಿಸಿ ಅವರಿಗಿರುವ ಭಿನ್ನಾಭಿಪ್ರಾಯ ಸರಿಪಡಿಸಿ, ಪಕ್ಷ ಸಂಘಟನೆಗೆ ತೊಡಗಿಸಿಕೊಳ್ಳಲಾಗುವುದು ಎಂದರು.</p>.<p>ಬಿಜೆಪಿ ಎಸ್ಟಿ ಮೊರ್ಚಾದ ಮಾಜಿ ತಾಲ್ಲೂಕು ಅಧ್ಯಕ್ಷ ಜಯರಾಮ್, ಹಿಂದುಳಿದ ವರ್ಗಗಳ ಮಾಜಿ ಅಧ್ಯಕ್ಷ ಎಂ.ವಿ.ರಮೇಶ್, ಮುಖಂಡ ಗೋಪಿ ಇದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ನರಸಿಂಹರಾಜಪುರ: </strong>‘ಮುಂದಿನ ವಿಧಾನಸಭಾ ಚುನಾವಣೆಗೆ ಶೃಂಗೇರಿ ಕ್ಷೇತ್ರದ ಬಿಜೆಪಿ ಟಿಕೆಟ್ನ ಪ್ರಬಲ ಆಕಾಂಕ್ಷಿಯಾಗಿದ್ದೇನೆ’ ಎಂದು ಬಿಜೆಪಿ ಜಿಲ್ಲಾ ಘಟಕದ ಮಾಜಿ ಕಾರ್ಯದರ್ಶಿ ಎಂ.ಆರ್.ರವಿಶಂಕರ್ ತಿಳಿಸಿದರು.</p>.<p>ಸೋಮವಾರ ಪತ್ರಿಕಾಗೋಷ್ಠಿ ಯಲ್ಲಿ ಮಾತನಾಡಿದ ಅವರು, ‘ಬಿಜೆಪಿಯ ಸಾಮಾನ್ಯ ಕಾರ್ಯಕರ್ತ ನಾಗಿ ಈ ಹಿಂದೆ ಪಕ್ಷ ನೀಡಿದ ಎಲ್ಲ ಜವಾಬ್ದಾರಿಯನ್ನು ನಿಷ್ಠೆ ಮತ್ತು ಪ್ರಾಮಾಣಿಕತೆಯಿಂದ ನಿರ್ವಹಿಸಲಾಗಿದೆ. ಟಿಕೆಟ್ ನೀಡಿದರೆ ಸ್ಪರ್ಧೆಗೆ ಸಿದ್ಧನಿದ್ದೇನೆ. ಒಂದು ವೇಳೆ ಪಕ್ಷ ಬೇರೆಯವರಿಗೆ ಟಿಕೆಟ್ ನೀಡಿದರೆ ಪಕ್ಷದ ಅಭ್ಯರ್ಥಿಯ ಗೆಲುವಿಗೆ ಶ್ರಮವಹಿಸಿ ಕೆಲಸ ಮಾಡಲಾಗುವುದು’ ಎಂದರು.</p>.<p>‘ಶೃಂಗೇರಿ ಕ್ಷೇತ್ರದಲ್ಲಿನ ಹಿಂದೂ ಬ್ರಿಗೇಡ್ಗೂ ತಮಗೂ ಸಂಬಂಧವಿಲ್ಲ. ಜಿಲ್ಲಾ ಬಿಜೆಪಿ ಘಟಕದ ಅಧ್ಯಕ್ಷರು ಮಾಹಿತಿ ಕೊರತೆಯಿಂದ ಹಿಂದೂ ಬ್ರಿಗೇಡ್ಗೆ ನನ್ನ ಹೆಸರನ್ನು ತಳಕು ಹಾಕುವ ಕೆಲಸ ಮಾಡಿದ್ದಾರೆ. ಈ ಬಗ್ಗೆ ಶೀಘ್ರದಲ್ಲೇ ಭೇಟಿ ಮಾಡಿ ಸ್ಪಷ್ಟನೆ ನೀಡಲಾಗುವುದು’ ಎಂದರು.</p>.<p>‘ಈಗಾಗಲೇ ನರಸಿಂಹರಾಜ ಪುರ ತಾಲ್ಲೂಕು ಬಿಜೆಪಿ ಘಟಕದ ಅಧ್ಯಕ್ಷರನ್ನು ಭೇಟಿ ಮಾಡಿ ಹಿಂದೂ ಬ್ರಿಗೇಡ್ನ ಹೇಳಿಕೆಗೂ ನಮಗಾಗಲಿ ಅಥವಾ ಕಾರ್ಯಕರ್ತರಿಗಾಗಲಿ ಯಾವುದೇ ಸಂಬಂಧವಿಲ್ಲ ಎಂಬ ಅಂಶವನ್ನು ಗಮನಕ್ಕೆ ತರಲಾಗಿದೆ’ ಎಂದರು.</p>.<p>‘ಕ್ಷೇತ್ರದ ಮೂರು ತಾಲ್ಲೂಕಿನ ಬಿಜೆಪಿ ಘಟಕದ ಅಧ್ಯಕ್ಷರನ್ನು ಭೇಟಿ ಮಾಡಿ ಹಿಂದುತ್ವದ ಆಧಾರದ ಮೇಲೆ ಮುಂದಿನ ಚುನಾವಣೆ ಯಲ್ಲಿ ಬಿಜೆಪಿ ಅಭ್ಯರ್ಥಿಯನ್ನು ಗೆಲ್ಲಿಸ ಬೇಕೆಂದು ಮನವಿ ಮಾಡಿದ್ದೇವೆ. ಪಕ್ಷದ ಸಂಘಟನೆ ಮುಂದಿನ ಒಂದು ವರ್ಷ ತೊಡಗಿಸಿಕೊಳ್ಳುವ ಬಗ್ಗೆ ಚರ್ಚಿಸಲಾಗಿದೆ’ ಎಂದರು.</p>.<p>ಪಕ್ಷದ ಜಿಲ್ಲಾಧ್ಯಕ್ಷರು, ಸಂಘಟನೆಯ ಹಿರಿಯರನ್ನು ಭೇಟಿ ಮಾಡಿ ಹಿಂದೂ ಬ್ರಿಗೇಡ್ ನಲ್ಲಿರುವ ಪಕ್ಷಕ್ಕೆ ದುಡಿದ ವ್ಯಕ್ತಿಗಳ ಅಭಿಪ್ರಾಯ ಸಂಗ್ರಹಿಸಿ ಅವರಿಗಿರುವ ಭಿನ್ನಾಭಿಪ್ರಾಯ ಸರಿಪಡಿಸಿ, ಪಕ್ಷ ಸಂಘಟನೆಗೆ ತೊಡಗಿಸಿಕೊಳ್ಳಲಾಗುವುದು ಎಂದರು.</p>.<p>ಬಿಜೆಪಿ ಎಸ್ಟಿ ಮೊರ್ಚಾದ ಮಾಜಿ ತಾಲ್ಲೂಕು ಅಧ್ಯಕ್ಷ ಜಯರಾಮ್, ಹಿಂದುಳಿದ ವರ್ಗಗಳ ಮಾಜಿ ಅಧ್ಯಕ್ಷ ಎಂ.ವಿ.ರಮೇಶ್, ಮುಖಂಡ ಗೋಪಿ ಇದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>