<p><strong>ಶೃಂಗೇರಿ:</strong> ರೈತರ ವಿವಿಧ ಬೇಡಿಕೆ ಈಡೇರಿಸುವಂತೆ ಒತ್ತಾಯಿಸಿ ತಾಲ್ಲೂಕು ರೈತ ಸಂಘದಿಂದ ಸೋಮವಾರ ತಹಶೀಲ್ದಾರ್ ಅವರಿಗೆ ಮನವಿ ಸಲ್ಲಿಸಲಾಯಿತು.</p>.<p>ಬಳಿಕ ಮಾತನಾಡಿದ ತಾಲ್ಲೂಕು ರೈತ ಸಂಘದ ಅಧ್ಯಕ್ಷ ಕಾನೋಳ್ಳಿ ಚಂದ್ರಶೇಖರ್,</p>.<p>ಎಸ್ಐಟಿ, ಅರಣ್ಯ ಹಕ್ಕು ಸಮಿತಿ, ಡೀಮ್ಡ್ ಫಾರೆಸ್ಟ್, ಅರಣ್ಯ ಪ್ರಸ್ತಾಪಿತ ಸರ್ವೆ ಹಾಗೂ ಕಂದಾಯ ಮತ್ತು ಅರಣ್ಯ ಇಲಾಖೆಯಿಂದ ಜಂಟಿ ಸರ್ವೆ ನಡೆಯುತ್ತಿದ್ದು, ಇದರ ಬಗ್ಗೆ ರೈತರ ಮತ್ತು ಸಾರ್ವಜನಿಕರ ಗಮನಕ್ಕೆ ತರದಿರುವುದು ಸರಿಯಲ್ಲ. ಈ ಎಲ್ಲಾ ಸರ್ವೆಗಳ ಬಗ್ಗೆ ಸಂಬಂಧಪಟ್ಟ ಅಧಿಕಾರಿಗಳು ಸಾರ್ವಜನಿಕ ಸಭೆ ಕರೆದು ಮಾಹಿತಿ ನೀಡಬೇಕು' ಎಂದು ಒತ್ತಾಯಿಸಿದರು.</p>.<p>‘ಈ ಸರ್ವೆಯಿಂದ ರೈತರ ಸಾಗುವಳಿ ಭೂಮಿ ಮತ್ತು ವಸತಿಗೆ ಯಾವುದೇ ರೀತಿಯ ತೊಂದರೆ ಆಗಬಾರದು. ಅರಣ್ಯ ವ್ಯವಸ್ಥಾಪನಾ ಅಧಿಕಾರಿಯ ಅವಧಿ ಮುಗಿದಿರುವುದರಿಂದ ತಾಲ್ಲೂಕಿನಲ್ಲಿ ತುಂಬಾ ಅರ್ಜಿಗಳು ಬಾಕಿ ಉಳಿದಿದ್ದು, ತಕ್ಷಣ ಅರಣ್ಯ ವ್ಯವಸ್ಥಾಪನಾಧಿಕಾರಿಯನ್ನು ನೇಮಕ ಮಾಡಿ, ರೈತರ ಎಲ್ಲಾ ಅರ್ಜಿಗಳನ್ನು ವಿಲೇವಾರಿ ಮಾಡಬೇಕು' ಎಂದು ಒತ್ತಾಯಿಸಿದರು.</p>.<p>ನಮೂನೆ 53ರ ಅಡಿ ಜಮೀನಿಗೆ ಪಡೆದ ಸಾಗುವಳಿ ಚೀಟಿಗಳಿಗೆ ಪಕ್ಕಾಪೋಡಿ ಮಾಡಲು ಸರ್ಕಾರದ ಆದೇಶವಿದ್ದರೂ ಸೊಪ್ಪಿನಬೆಟ್ಟ ಪ್ರದೇಶ ಎಂದು ಸಬೂಬು ಹೇಳದೇ ಪಕ್ಕಾಪೋಡಿ ಮಾಡಿ ಹಕ್ಕು ಪತ್ರವನ್ನು ನೀಡಬೇಕು ಎಂದು ಆಗ್ರಹಿಸಿದರು.</p>.<p>ರೈತ ಸಂಘದ ಗೌರವ ಅಧ್ಯಕ್ಷ ಕೆಲವಳ್ಳಿ ಗುಂಡಪ್ಪ ಮಾತನಾಡಿ, `ಪಟ್ಟಣದ ಅಂಚೆ ಕಚೇರಿಯಲ್ಲಿ ವಾರದಲ್ಲಿ ಒಂದು ದಿನ ಮಾತ್ರ ಆಧಾರ್ ತಿದ್ದುಪಡಿ ಮತ್ತು ಹೊಸ ನೋಂದಣಿ ಮಾಡುತ್ತಿದ್ದು, ಬೆಳಿಗ್ಗೆ ಬೇಗ ಬಂದು ಸರತಿಯಲ್ಲಿ ಟೋಕನ್ ಪಡೆದು, ಮಧ್ಯಾಹ್ನದ ವೇಳೆ ಆಧಾರ್ ತಿದ್ದುಪಡಿ ಪ್ರಕ್ರಿಯೆ ಮಾಡುತ್ತಿದ್ದಾರೆ. ಇದರಿಂದಾಗಿ ಸಾರ್ವಜನಿಕರಿಗೆ ತೊಂದರೆಯಾಗುತ್ತಿದೆ. ಕೂಡಲೇ ತಾಲ್ಲೂಕು ಕಚೇರಿಯಲ್ಲಿ ಕಾಯಂ ಆಗಿ ಆಧಾರ್ ಕಾರ್ಡ್ ಸೇವಾ ಕೇಂದ್ರವನ್ನು ತೆರದು ಪ್ರತಿ ದಿನ ಆಧಾರ್ ಕಾರ್ಡ್ ತಿದ್ದುಪಡಿ ಮತ್ತು ಹೊಸ ನೋಂದಣಿ ಪ್ರಕ್ರಿಯೆ ಪ್ರಾರಂಭಿಸಬೇಕು' ಎಂದು ಒತ್ತಾಯಿಸಿದರು.</p>.<p>ಮನವಿ ಸ್ವೀಕರಿಸಿದ ತಹಶೀಲ್ದಾರ್ ಅನೂಪ್ ಸಂಜೋಗ್, ಎಸ್ಐಟಿ ಸರ್ವೆ ಮತ್ತು ಜಂಟಿ ಸರ್ವೆ ಮಾಡಿ ವರದಿ ಮತ್ತು ನಕ್ಷೆಯನ್ನು ಸರ್ಕಾರ ಮತ್ತು ಸುಪ್ರೀಂ ಕೋರ್ಟ್ಗೆ ಸಲ್ಲಿಸಲಾಗುವುದು. ಸರ್ಕಾರವೇ ಸರ್ವೆಗೆ ಆದೇಶ ಮಾಡಿರುವುದರಿಂದ ವರದಿಗೆ ಸ್ಪಂದಿಸುತ್ತದೆ. ಈಗಾಗಲೇ 35 ಗ್ರಾಮಗಳ ಸರ್ವೆ ಪೂರ್ಣಗೊಂಡಿದೆ. ಈ ಸರ್ವೆಯಿಂದ ಪ್ರಸ್ತುತ ಮಲೆನಾಡಿನಲ್ಲಿರುವ ಸಮಸ್ಯೆಗಳು ಬಗೆಹರಿಯಲಿವೆ. ಹೊಸದಾಗಿ ಒತ್ತುವರಿಗೆ ಯಾವುದೇ ರೀತಿಯ ಅವಕಾಶವಿ ಇರುವುದಿಲ್ಲ' ಎಂದು ಹೇಳಿದರು.</p>.<p>ಈ ಸಂದರ್ಭದಲ್ಲಿ ರೈತ ಸಂಘದ ಚೆನ್ನಕೇಶವ, ಅನಂತಯ್ಯ, ಚಂದ್ರಪ್ಪ, ಜಗದೀಶ, ಶ್ರೀನಿವಾಸ, ನಾಗೇಶ, ಅಯ್ಯನಗೌಡ, ನಾಗೇಂದ್ರ, ಚಂದ್ರಶೇಖರ ಇದ್ದರು.</p>.<p><em>ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ</em><br />260526-126-1514162667</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಶೃಂಗೇರಿ:</strong> ರೈತರ ವಿವಿಧ ಬೇಡಿಕೆ ಈಡೇರಿಸುವಂತೆ ಒತ್ತಾಯಿಸಿ ತಾಲ್ಲೂಕು ರೈತ ಸಂಘದಿಂದ ಸೋಮವಾರ ತಹಶೀಲ್ದಾರ್ ಅವರಿಗೆ ಮನವಿ ಸಲ್ಲಿಸಲಾಯಿತು.</p>.<p>ಬಳಿಕ ಮಾತನಾಡಿದ ತಾಲ್ಲೂಕು ರೈತ ಸಂಘದ ಅಧ್ಯಕ್ಷ ಕಾನೋಳ್ಳಿ ಚಂದ್ರಶೇಖರ್,</p>.<p>ಎಸ್ಐಟಿ, ಅರಣ್ಯ ಹಕ್ಕು ಸಮಿತಿ, ಡೀಮ್ಡ್ ಫಾರೆಸ್ಟ್, ಅರಣ್ಯ ಪ್ರಸ್ತಾಪಿತ ಸರ್ವೆ ಹಾಗೂ ಕಂದಾಯ ಮತ್ತು ಅರಣ್ಯ ಇಲಾಖೆಯಿಂದ ಜಂಟಿ ಸರ್ವೆ ನಡೆಯುತ್ತಿದ್ದು, ಇದರ ಬಗ್ಗೆ ರೈತರ ಮತ್ತು ಸಾರ್ವಜನಿಕರ ಗಮನಕ್ಕೆ ತರದಿರುವುದು ಸರಿಯಲ್ಲ. ಈ ಎಲ್ಲಾ ಸರ್ವೆಗಳ ಬಗ್ಗೆ ಸಂಬಂಧಪಟ್ಟ ಅಧಿಕಾರಿಗಳು ಸಾರ್ವಜನಿಕ ಸಭೆ ಕರೆದು ಮಾಹಿತಿ ನೀಡಬೇಕು' ಎಂದು ಒತ್ತಾಯಿಸಿದರು.</p>.<p>‘ಈ ಸರ್ವೆಯಿಂದ ರೈತರ ಸಾಗುವಳಿ ಭೂಮಿ ಮತ್ತು ವಸತಿಗೆ ಯಾವುದೇ ರೀತಿಯ ತೊಂದರೆ ಆಗಬಾರದು. ಅರಣ್ಯ ವ್ಯವಸ್ಥಾಪನಾ ಅಧಿಕಾರಿಯ ಅವಧಿ ಮುಗಿದಿರುವುದರಿಂದ ತಾಲ್ಲೂಕಿನಲ್ಲಿ ತುಂಬಾ ಅರ್ಜಿಗಳು ಬಾಕಿ ಉಳಿದಿದ್ದು, ತಕ್ಷಣ ಅರಣ್ಯ ವ್ಯವಸ್ಥಾಪನಾಧಿಕಾರಿಯನ್ನು ನೇಮಕ ಮಾಡಿ, ರೈತರ ಎಲ್ಲಾ ಅರ್ಜಿಗಳನ್ನು ವಿಲೇವಾರಿ ಮಾಡಬೇಕು' ಎಂದು ಒತ್ತಾಯಿಸಿದರು.</p>.<p>ನಮೂನೆ 53ರ ಅಡಿ ಜಮೀನಿಗೆ ಪಡೆದ ಸಾಗುವಳಿ ಚೀಟಿಗಳಿಗೆ ಪಕ್ಕಾಪೋಡಿ ಮಾಡಲು ಸರ್ಕಾರದ ಆದೇಶವಿದ್ದರೂ ಸೊಪ್ಪಿನಬೆಟ್ಟ ಪ್ರದೇಶ ಎಂದು ಸಬೂಬು ಹೇಳದೇ ಪಕ್ಕಾಪೋಡಿ ಮಾಡಿ ಹಕ್ಕು ಪತ್ರವನ್ನು ನೀಡಬೇಕು ಎಂದು ಆಗ್ರಹಿಸಿದರು.</p>.<p>ರೈತ ಸಂಘದ ಗೌರವ ಅಧ್ಯಕ್ಷ ಕೆಲವಳ್ಳಿ ಗುಂಡಪ್ಪ ಮಾತನಾಡಿ, `ಪಟ್ಟಣದ ಅಂಚೆ ಕಚೇರಿಯಲ್ಲಿ ವಾರದಲ್ಲಿ ಒಂದು ದಿನ ಮಾತ್ರ ಆಧಾರ್ ತಿದ್ದುಪಡಿ ಮತ್ತು ಹೊಸ ನೋಂದಣಿ ಮಾಡುತ್ತಿದ್ದು, ಬೆಳಿಗ್ಗೆ ಬೇಗ ಬಂದು ಸರತಿಯಲ್ಲಿ ಟೋಕನ್ ಪಡೆದು, ಮಧ್ಯಾಹ್ನದ ವೇಳೆ ಆಧಾರ್ ತಿದ್ದುಪಡಿ ಪ್ರಕ್ರಿಯೆ ಮಾಡುತ್ತಿದ್ದಾರೆ. ಇದರಿಂದಾಗಿ ಸಾರ್ವಜನಿಕರಿಗೆ ತೊಂದರೆಯಾಗುತ್ತಿದೆ. ಕೂಡಲೇ ತಾಲ್ಲೂಕು ಕಚೇರಿಯಲ್ಲಿ ಕಾಯಂ ಆಗಿ ಆಧಾರ್ ಕಾರ್ಡ್ ಸೇವಾ ಕೇಂದ್ರವನ್ನು ತೆರದು ಪ್ರತಿ ದಿನ ಆಧಾರ್ ಕಾರ್ಡ್ ತಿದ್ದುಪಡಿ ಮತ್ತು ಹೊಸ ನೋಂದಣಿ ಪ್ರಕ್ರಿಯೆ ಪ್ರಾರಂಭಿಸಬೇಕು' ಎಂದು ಒತ್ತಾಯಿಸಿದರು.</p>.<p>ಮನವಿ ಸ್ವೀಕರಿಸಿದ ತಹಶೀಲ್ದಾರ್ ಅನೂಪ್ ಸಂಜೋಗ್, ಎಸ್ಐಟಿ ಸರ್ವೆ ಮತ್ತು ಜಂಟಿ ಸರ್ವೆ ಮಾಡಿ ವರದಿ ಮತ್ತು ನಕ್ಷೆಯನ್ನು ಸರ್ಕಾರ ಮತ್ತು ಸುಪ್ರೀಂ ಕೋರ್ಟ್ಗೆ ಸಲ್ಲಿಸಲಾಗುವುದು. ಸರ್ಕಾರವೇ ಸರ್ವೆಗೆ ಆದೇಶ ಮಾಡಿರುವುದರಿಂದ ವರದಿಗೆ ಸ್ಪಂದಿಸುತ್ತದೆ. ಈಗಾಗಲೇ 35 ಗ್ರಾಮಗಳ ಸರ್ವೆ ಪೂರ್ಣಗೊಂಡಿದೆ. ಈ ಸರ್ವೆಯಿಂದ ಪ್ರಸ್ತುತ ಮಲೆನಾಡಿನಲ್ಲಿರುವ ಸಮಸ್ಯೆಗಳು ಬಗೆಹರಿಯಲಿವೆ. ಹೊಸದಾಗಿ ಒತ್ತುವರಿಗೆ ಯಾವುದೇ ರೀತಿಯ ಅವಕಾಶವಿ ಇರುವುದಿಲ್ಲ' ಎಂದು ಹೇಳಿದರು.</p>.<p>ಈ ಸಂದರ್ಭದಲ್ಲಿ ರೈತ ಸಂಘದ ಚೆನ್ನಕೇಶವ, ಅನಂತಯ್ಯ, ಚಂದ್ರಪ್ಪ, ಜಗದೀಶ, ಶ್ರೀನಿವಾಸ, ನಾಗೇಶ, ಅಯ್ಯನಗೌಡ, ನಾಗೇಂದ್ರ, ಚಂದ್ರಶೇಖರ ಇದ್ದರು.</p>.<p><em>ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ</em><br />260526-126-1514162667</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>