ಕೆರೆಕಟ್ಟೆ ರಸ್ತೆ ಶೃಂಗೇರಿ ಕ್ಷೇತ್ರದ ಪಾಲಿಗೆ ಜೀವನಾಡಿ. ರೈತರು, ವರ್ತಕರು, ಶೃಂಗೇರಿ ಮಠಕ್ಕೆ ಬರುವ ಯಾತ್ರಾರ್ಥಿಗಳು, ಆಸ್ಪತ್ರೆಗೆ ಹೋಗುವ ರೋಗಿಗಳು ಹೀಗೆ ಸಾವಿರಾರು ಜನ ಅನಿವಾರ್ಯವಾಗಿ ಇದೇ ರಸ್ತೆಯನ್ನು ನಿತ್ಯ ಬಳಸುತ್ತಾರೆ. ಕಾರ್ಕಳ ಮತ್ತು ಮಂಗಳೂರಿನಿಂದ ಇಟ್ಟಿಗೆ, ಟೈಲ್ಸ್, ಗ್ಯಾಸ್ ಸಿಲಿಂಡರ್ ಮುಂತಾದ ದಿನನಿತ್ಯದ ವಸ್ತುಗಳನ್ನು ತರಲು ಸಾವಿರಾರು ಲಾರಿಗಳು ಈ ರಸ್ತೆ ಮತ್ತು ಸೇತುವೆಯನ್ನು ಬಳಸುತ್ತಾರೆ. ಮಳೆಗಾಲದಲ್ಲಿ ಈ ರಸ್ತೆಯಲ್ಲಿ ರೋಗಿಯನ್ನು ಕರೆದುಕೊಂಡು ಬರುವ ಸ್ಥಿತಿ ಬಂದರೆ ಪ್ರಯಾಣ ಮಾಡುವುದು ಅತ್ಯಂತ ಪ್ರಯಾಸ ಎಂದು ಖಾಸಗಿ ಆಂಬುಲೆನ್ಸ್ ಚಾಲಕ ಸುರೇಶ್ ಹೇಳುತ್ತಾರೆ.