<p>ಶೃಂಗೇರಿ ವಿಧಾನಸಭಾ ಕ್ಷೇತ್ರ. ಒಂದೇ ಅವಧಿಯಲ್ಲಿ ಎರಡು ಭಿನ್ನ ಫಲಿತಾಂಶ ಕಾಣುವ ಮೂಲಕ ಚುನಾವಣಾ ಇತಿಹಾಸದಲ್ಲಿಯೇ ಹೊಸ ದಾಖಲೆ ಸೃಷ್ಟಿಸಿದ ಕ್ಷೇತ್ರವಿದು. ಈ ಕ್ಷೇತ್ರದ ನೂತನ ಶಾಸಕರಾಗಿ, ಬಿಜೆಪಿಯ ಡಿ.ಎನ್. ಜೀವರಾಜ್ ಬುಧವಾರ ಪ್ರಮಾಣ ವಚನ ಸ್ವೀಕರಿಸಿದ್ದಾರೆ. ಆದರೆ, 2023ರಿಂದ ಈ ಕ್ಷೇತ್ರವನ್ನು ಪ್ರತಿನಿಧಿಸಿದ್ದವರು ಕಾಂಗ್ರೆಸ್ನ ಟಿ.ಡಿ. ರಾಜೇಗೌಡ. 2023ರ ವಿಧಾನಸಭಾ ಚುನಾವಣೆಯಲ್ಲಿ ರಾಜೇಗೌಡ ಅವರು ಇಲ್ಲಿ ಗೆದ್ದದ್ದು ಕೇವಲ 201 ಮತಗಳಿಂದ ! ಈ ಫಲಿತಾಂಶ ಹೊರ ಬೀಳುತ್ತಿದ್ದಂತೆ, ಇವರ ಪ್ರತಿಸ್ಪರ್ಧಿ ಬಿಜೆಪಿಯ ಜೀವರಾಜ್, 1822ರ ಅಂಚೆ ಮತಗಳ ಮರು ಎಣಿಕೆ ಮಾಡುವಂತೆ ಕೋರಿ, ಹೈಕೋರ್ಟ್ ಮೆಟ್ಟಿಲೇರಿದರು. ಮರು ಎಣಿಕೆ ನಂತರ, ಜೀವರಾಜ್ ಶಾಸಕರಾಗಿ ಪ್ರಮಾಣ ವಚನ ಸ್ವೀಕರಿಸಿದ್ದಾರೆ. ಗುರುವಾರ ನ್ಯಾಯಾಲಯದಲ್ಲಿ ಮತ್ತೊಮ್ಮೆ ಈ ವಿಷಯ ವಿಚಾರಣೆಗೆ ಬರಲಿದೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>