<p><strong>ಶೃಂಗೇರಿ</strong>: ಶೃಂಗೇರಿಯಲ್ಲಿ ಶನಿವಾರ ಶಾರದಾಂಬೆಯ ರಥೋತ್ಸವ ಶಾರದಾ ಮಠದ ಒಳಗಡೆ ವಿದ್ಯಾಶಂಕರ ದೇವಾಲಯ ಸುತ್ತ ನಡೆಯಿತು.</p>.<p>ಜಯಘೋಷ, ವಿಪ್ರರ ವೇದ ಘೋಷ, ಮಂತ್ರ ಪಠಣದೊಂದಿಗೆ ಸೇರಿದ ಭಕ್ತರು ರಥೋತ್ಸವದಲ್ಲಿ ಭಾಗಿಯಾದರು. ನವರಾತ್ರಿಯ ಒಂಬತ್ತು ದಿನ ವಿವಿಧ ಅಲಂಕಾರಗಳಲ್ಲಿ ಕಂಗೊಳಿಸಿದ ಶಾರದೆಗೆ, ಶನಿವಾರ ಗಜಲಕ್ಷ್ಮೀ ಅಲಂಕಾರ ಮಾಡಲಾಗಿತ್ತು.</p>.<p>ಶಾರದಾ ಮಠದ ಗುರುಗಳಾದ ಭಾರತಿ ತೀರ್ಥ ಸ್ವಾಮೀಜಿ ಬೆಳಗಿನ ಆಹ್ನಿಕ ಮುಗಿಸಿ, ಶಾರದಾಂಬೆಗೆ ವಿಶೇಷ ಪೂಜೆ ಸಲ್ಲಿಸಿದರು.</p>.<p>ಕಿರಿಯ ಗುರುಗಳಾದ ವಿಧುಶೇಖರ ಭಾರತಿ ಸ್ವಾಮೀಜಿ ಗುರುನಿವಾಸದಲ್ಲಿ ಚಂದ್ರಮೌಳೇಶ್ವರ ಸ್ವಾಮಿಗೆ ಪೂಜೆ ಸಲ್ಲಿಸಿ, ಕಾಲ್ನಡಿಗೆಯಲ್ಲಿ ಆಗಮಿಸಿ, ತುಂಗಾ ನದಿಯನ್ನು ದೋಣಿಯಲ್ಲಿ ದಾಟಿ, ಗಂಗಾ ಪೂಜೆ ನೆರವೇರಿಸಿದರು. ನಂತರ ಶಾರದ ಮಠದ ಹೊರ ಪ್ರಾಕಾರದ ಎಲ್ಲ ದೇವಾಲಯ, ಮಂದಿರಗಳಿಗಳಲ್ಲಿ ಪೂಜೆ ಸಲ್ಲಿಸಿದರು.</p>.<p>ಪ್ರತಿ ವರ್ಷ ನಡೆಯುವ ವಿಧುಶೇಖರಭಾರತಿ ಸ್ವಾಮೀಜಿಯವರ ಅಡ್ಡಪಲ್ಲಕ್ಕಿ ಉತ್ಸವ ಮತ್ತು ಭಾರತಿ ಬೀದಿಯ ಮಹಾರಥೋತ್ಸವ ಕೋವಿಡ್ ಕಾರಣದಿಂದ ನಡೆಸಲಿಲ್ಲ. ಶಾರದಾ ಸನ್ನಿಧಿಯಲ್ಲಿ ಹಗಲು ದರ್ಬಾರ್ ನಡೆಯಿತು. ವಿಧುಶೇಖರ ಭಾರತಿ ಸ್ವಾಮೀಜಿ ಸಿಂಹಾಸನದಿಂದ ಭಕ್ತರನ್ನು ಆಶೀರ್ವದಿಸಿದರು.</p>.<p>ಚಾತುರ್ವೇದ ಪಾರಾಯಣ, ವಾಲ್ಮಿಕಿ ರಾಮಾಯಣ, ದೇವಿ ಭಾಗವತ, ಶಂಕರ ದಿಗ್ವಿಜಯ ಪಾರಾಯಣಗಳು ನಡೆದವು. ದೇವಿ ಸಪ್ತಶತಿಯ ಕೊನೆಯ 13ನೇ ಅಧ್ಯಾಯವನ್ನು ಮಠದ ವಿದ್ವಾಂಸ ಶಿವಕುಮಾರ ಶರ್ಮ ವಾಚಿಸಿದರು. ಚಿನ್ನದ ರಥದಲ್ಲಿ ಶಾರದ ದೇವಿಯನ್ನು ಪ್ರತಿಷ್ಠಾಪಿಸಿ, ದೇವಸ್ಥಾನದ ಒಳ ಪ್ರಾಂಗಣದಲ್ಲಿ ಪ್ರದಕ್ಷಿಣೆ ಹಾಕಲಾಯಿತು.</p>.<p>ಸಾವಿರಾರು ಭಕ್ತರು ಶಾರದಾ ಮಠಕ್ಕೆ ಭೇಟಿ ನೀಡಿ ಶಾರದೆ ದರ್ಶನ, ಭಾರತೀತೀರ್ಥ ಸ್ವಾಮೀಜಿ, ವಿಧುಶೇಖರಭಾರತಿ ಸ್ವಾಮೀಜಿಯವರ ಆಶೀರ್ವಾದ ಪಡೆದರು.</p>.<p>ಮಠದ ಆಡಳಿತಾಧಿಕಾರಿ ಡಾ.ವಿ.ಆರ್ ಗೌರಿಶಂಕರ್, ಶಾಸಕ ಟಿ.ಡಿ ರಾಜೇಗೌಡ, ಮಠದ ಅಧಿಕಾರಿಗಳು ಇದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಶೃಂಗೇರಿ</strong>: ಶೃಂಗೇರಿಯಲ್ಲಿ ಶನಿವಾರ ಶಾರದಾಂಬೆಯ ರಥೋತ್ಸವ ಶಾರದಾ ಮಠದ ಒಳಗಡೆ ವಿದ್ಯಾಶಂಕರ ದೇವಾಲಯ ಸುತ್ತ ನಡೆಯಿತು.</p>.<p>ಜಯಘೋಷ, ವಿಪ್ರರ ವೇದ ಘೋಷ, ಮಂತ್ರ ಪಠಣದೊಂದಿಗೆ ಸೇರಿದ ಭಕ್ತರು ರಥೋತ್ಸವದಲ್ಲಿ ಭಾಗಿಯಾದರು. ನವರಾತ್ರಿಯ ಒಂಬತ್ತು ದಿನ ವಿವಿಧ ಅಲಂಕಾರಗಳಲ್ಲಿ ಕಂಗೊಳಿಸಿದ ಶಾರದೆಗೆ, ಶನಿವಾರ ಗಜಲಕ್ಷ್ಮೀ ಅಲಂಕಾರ ಮಾಡಲಾಗಿತ್ತು.</p>.<p>ಶಾರದಾ ಮಠದ ಗುರುಗಳಾದ ಭಾರತಿ ತೀರ್ಥ ಸ್ವಾಮೀಜಿ ಬೆಳಗಿನ ಆಹ್ನಿಕ ಮುಗಿಸಿ, ಶಾರದಾಂಬೆಗೆ ವಿಶೇಷ ಪೂಜೆ ಸಲ್ಲಿಸಿದರು.</p>.<p>ಕಿರಿಯ ಗುರುಗಳಾದ ವಿಧುಶೇಖರ ಭಾರತಿ ಸ್ವಾಮೀಜಿ ಗುರುನಿವಾಸದಲ್ಲಿ ಚಂದ್ರಮೌಳೇಶ್ವರ ಸ್ವಾಮಿಗೆ ಪೂಜೆ ಸಲ್ಲಿಸಿ, ಕಾಲ್ನಡಿಗೆಯಲ್ಲಿ ಆಗಮಿಸಿ, ತುಂಗಾ ನದಿಯನ್ನು ದೋಣಿಯಲ್ಲಿ ದಾಟಿ, ಗಂಗಾ ಪೂಜೆ ನೆರವೇರಿಸಿದರು. ನಂತರ ಶಾರದ ಮಠದ ಹೊರ ಪ್ರಾಕಾರದ ಎಲ್ಲ ದೇವಾಲಯ, ಮಂದಿರಗಳಿಗಳಲ್ಲಿ ಪೂಜೆ ಸಲ್ಲಿಸಿದರು.</p>.<p>ಪ್ರತಿ ವರ್ಷ ನಡೆಯುವ ವಿಧುಶೇಖರಭಾರತಿ ಸ್ವಾಮೀಜಿಯವರ ಅಡ್ಡಪಲ್ಲಕ್ಕಿ ಉತ್ಸವ ಮತ್ತು ಭಾರತಿ ಬೀದಿಯ ಮಹಾರಥೋತ್ಸವ ಕೋವಿಡ್ ಕಾರಣದಿಂದ ನಡೆಸಲಿಲ್ಲ. ಶಾರದಾ ಸನ್ನಿಧಿಯಲ್ಲಿ ಹಗಲು ದರ್ಬಾರ್ ನಡೆಯಿತು. ವಿಧುಶೇಖರ ಭಾರತಿ ಸ್ವಾಮೀಜಿ ಸಿಂಹಾಸನದಿಂದ ಭಕ್ತರನ್ನು ಆಶೀರ್ವದಿಸಿದರು.</p>.<p>ಚಾತುರ್ವೇದ ಪಾರಾಯಣ, ವಾಲ್ಮಿಕಿ ರಾಮಾಯಣ, ದೇವಿ ಭಾಗವತ, ಶಂಕರ ದಿಗ್ವಿಜಯ ಪಾರಾಯಣಗಳು ನಡೆದವು. ದೇವಿ ಸಪ್ತಶತಿಯ ಕೊನೆಯ 13ನೇ ಅಧ್ಯಾಯವನ್ನು ಮಠದ ವಿದ್ವಾಂಸ ಶಿವಕುಮಾರ ಶರ್ಮ ವಾಚಿಸಿದರು. ಚಿನ್ನದ ರಥದಲ್ಲಿ ಶಾರದ ದೇವಿಯನ್ನು ಪ್ರತಿಷ್ಠಾಪಿಸಿ, ದೇವಸ್ಥಾನದ ಒಳ ಪ್ರಾಂಗಣದಲ್ಲಿ ಪ್ರದಕ್ಷಿಣೆ ಹಾಕಲಾಯಿತು.</p>.<p>ಸಾವಿರಾರು ಭಕ್ತರು ಶಾರದಾ ಮಠಕ್ಕೆ ಭೇಟಿ ನೀಡಿ ಶಾರದೆ ದರ್ಶನ, ಭಾರತೀತೀರ್ಥ ಸ್ವಾಮೀಜಿ, ವಿಧುಶೇಖರಭಾರತಿ ಸ್ವಾಮೀಜಿಯವರ ಆಶೀರ್ವಾದ ಪಡೆದರು.</p>.<p>ಮಠದ ಆಡಳಿತಾಧಿಕಾರಿ ಡಾ.ವಿ.ಆರ್ ಗೌರಿಶಂಕರ್, ಶಾಸಕ ಟಿ.ಡಿ ರಾಜೇಗೌಡ, ಮಠದ ಅಧಿಕಾರಿಗಳು ಇದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>