ಪಟ್ಟಣ ಸಮೀಪದ ಹುಲುಮಕ್ಕಿ (ದಾಸಮಠ)ಯಲ್ಲಿರುವ ಬಿ.ಜಿ.ಎಸ್.ವೆಂಕಟೇಶ್ವರ ವಿದ್ಯಾಮಂದಿರದ ವಿದ್ಯಾರ್ಥಿನಿಯಾಗಿರುವ ಮಾನ್ಯಶ್ರೀ, ತಾಲ್ಲೂಕಿನ ಹಿರೇಕೊಡಿಗೆ ಗ್ರಾಮದ ತಾವಳ್ಳಿ ಕೊಕ್ಕೋಡು ನಿವಾಸಿ ಪ್ರಭಾಕರ ಶೆಟ್ಟಿ ಮತ್ತು ಸಂಧ್ಯಾ ಶೆಟ್ಟಿ ಅವರ ಪುತ್ರಿ. ಮಾನ್ಯಶ್ರೀ ಕೇವಲ ಓದಿನಲ್ಲಿ ಅಷ್ಟೇ ಅಲ್ಲದೆ ಕ್ರೀಡೆ, ಸಾಂಸ್ಕೃತಿಕ, ವಿವಿಧ ಸ್ಪರ್ಧೆಯಲ್ಲೂ ತೊಡಗಿಸಿಕೊಂಡಿದ್ದಾರೆ. ಪ್ರಾಥಮಿಕ ಶಾಲೆ ಹಂತದಲ್ಲಿದ್ದಾಗ ಸಾಮಾನ್ಯ ಜ್ಞಾನ ಸ್ಪರ್ಧೆಯಲ್ಲಿ ರಾಷ್ಟ್ರ ಮಟ್ಟದಲ್ಲಿ 21ನೇ ರ್ಯಾಂಕ್ ಪಡೆದಿದ್ದರು.