<p><strong>ಚಿಕ್ಕಮಗಳೂರು</strong>: ಎಸ್ಎಸ್ಎಲ್ಸಿ ಪರೀಕ್ಷೆ-2 ಶುಕ್ರವಾರದಿಂದ (ಜೂನ್ 14) 22ರ ವರೆಗೆ ಜಿಲ್ಲೆಯ 9 ಕೇಂದ್ರಗಳಲ್ಲಿ ನಡೆಯಲಿದೆ. ಜಿಲ್ಲೆಯ ಒಟ್ಟು 2,125 ವಿದ್ಯಾರ್ಥಿಗಳು ನೋಂದಾಯಿಸಿದ್ದು, ಸುಗಮವಾಗಿ ಪರೀಕ್ಷೆ ನಡೆಸಲು ಜಿಲ್ಲಾಡಳಿತ ಸಿದ್ಧತೆ ಕೈಗೊಂಡಿದೆ.</p>.<p>ತಾಲ್ಲೂಕು ಮತ್ತು ಜಿಲ್ಲಾ ಹಂತದ ಪರೀಕ್ಷಾ ಕೇಂದ್ರಗಳಲ್ಲಿ ಸಿದ್ಧತೆ ಕುರಿತು ಜಿಲ್ಲಾಪಂಚಾಯಿತಿ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಬಿ.ಗೋಪಾಲಕೃಷ್ಣ ಕ್ಷೇತ್ರ ಶಿಕ್ಷಣಾಧಿಕಾರಿಗಳು, ಪರೀಕ್ಷಾ ನೋಡಲ್ ಅಧಿಕಾರಿಗಳೊಂದಿಗೆ ಜಿಲ್ಲಾಪಂಚಾಯಿತಿ ಸಭಾಂಗಣದಲ್ಲಿ ಪೂರ್ವಭಾವಿ ಸಭೆ ನಡೆಸಿದರು.</p>.<p>ಪರೀಕ್ಷಾ ಕಾರ್ಯಕ್ಕೆ 9 ಅಧೀಕ್ಷಕರು, 2 ಉಪ ಅಧೀಕ್ಷಕರು, 8 ಕಸ್ಟೋಡಿಯನ್, 8 ಸ್ಥಾನಿಕ ಜಾಗೃತ ದಳ, 100 ಕೊಠಡಿ ಮೇಲ್ವಿಚಾರಕರು, 8 ಮೊಬೈಲ್ ಸ್ವಾಧೀನಾಧಿಕಾರಿಗಳು ಹಾಗೂ 10 ವಿಷಯ ನಿರ್ವಾಹಕರನ್ನು ನೇಮಿಸಲಾಗಿದೆ ಎಂದು ಡಿಡಿಪಿಐ(ಆಡಳಿತ) ಎಸ್.ಆರ್ ಮಂಜುನಾಥ್ ಸಭೆಗೆ ಮಾಹಿತಿ ನೀಡಿದರು.</p>.<p>ಜಿಲ್ಲಾ ಮತ್ತು ತಾಲ್ಲೂಕು ಜಾಗೃತ ದಳ ಹಾಗೂ ವೆಬ್ ಕ್ಯಾಮೆರಾ ವೀಕ್ಷಣಾ ತಂಡ, 8 ಮಾರ್ಗಾಧಿಕಾರಿಗಳು, ಚಾಲಕರು, 26 ಪೊಲೀಸ್ ಸಿಬ್ಬಂದಿ ಮತ್ತು 8 ಆರೋಗ್ಯ ಸಿಬ್ಬಂದಿ ಸೇರಿದಂತೆ ಒಟ್ಟು 170 ಅಧಿಕಾರಿ ಮತ್ತು ಸಿಬ್ಬಂದಿ ಪರೀಕ್ಷಾ ಕಾರ್ಯದಲ್ಲಿ ತೊಡಗಲಿದ್ದಾರೆ ಎಂದು ವಿವರಿಸಿದರು.</p>.<p>ಪರೀಕ್ಷಾ ಕಾರ್ಯದಲ್ಲಿ ಭಾಗವಹಿಸುವ ಎಲ್ಲಾ ಅಧಿಕಾರಿ ಮತ್ತು ಸಿಬ್ಬಂದಿಗೆ ತರಬೇತಿ ನೀಡಲಾಗಿದೆ. ಪರೀಕ್ಷಾ ಕೇಂದ್ರಗಳಲ್ಲಿ ಕುಡಿಯುವ ನೀರು, ಶೌಚಾಲಯ, ಆಸನ ವ್ಯವಸ್ಥೆ, ಕೊಠಡಿ ಸುರಕ್ಷತೆ ಪರಿಶೀಲಿಸಲಾಗಿದೆ. ಪರೀಕ್ಷಾ ಕೇಂದ್ರದ ಸುತ್ತ ಪರೀಕ್ಷಾ ದಿನದಂದು 144 ಸೆಕ್ಷನ್ ಜಾರಿಯಲ್ಲಿರಲಿದೆ ಎಂದು ತಿಳಿಸಿದರು.</p>.<p>ಪರೀಕ್ಷಾ ಕೇಂದ್ರಗಳ ಕೊಠಡಿಗಳಲ್ಲಿ ಸಿ.ಸಿಟಿವಿ ಕ್ಯಾಮೆರಾ ಅಳವಡಿಸಲಾಗಿದೆ. ಜಿಲ್ಲೆಯ 9 ಕೇಂದ್ರಗಳ ವೀಕ್ಷಣೆಗೆ ಜಿಲ್ಲಾ ಪಂಚಾಯಿತಿಯಲ್ಲಿ ವೆಬ್ ಕಾಸ್ಟಿಂಗ್ ವ್ಯವಸ್ಥೆ ಮಾಡಲಾಗಿದೆ ಎಂದು ಅವರು ಹೇಳಿದರು. ಸಭೆಯಲ್ಲಿ ಡಯಟ್ನ ಉಪನಿರ್ದೇಶಕ ಪ್ರಕಾಶ್ ಇದ್ದರು.</p>.<p>ವೇಳಾಪಟ್ಟಿ:</p>.<p>ಜೂ. 14ರಂದು ಪ್ರಥಮ ಭಾಷೆ, 15ರಂದು ತೃತೀಯ ಭಾಷೆ, 18ರಂದು ಗಣಿತ, 20ರಂದು ವಿಜ್ಞಾನ, 21ರಂದು ಇಂಗ್ಲಿಷ್ ಹಾಗೂ 22ರಂದು ಸಮಾಜ ವಿಜ್ಞಾನ ಪರೀಕ್ಷೆ ನಡೆಯಲಿದೆ.</p>.<p>Highlights - ವಿದ್ಯಾರ್ಥಿಗಳ ಮಾಹಿತಿ ಪರೀಕ್ಷೆ ಬರೆಯುವ ಒಟ್ಟು ವಿದ್ಯಾರ್ಥಿಗಳು;2125 ಪುನರಾವರ್ತಿತ ವಿದ್ಯಾರ್ಥಿಗಳು;1841 ಖಾಸಗಿ ಹೊಸ ವಿದ್ಯಾರ್ಥಿಗಳು;70 ಅಂಕ ಉತ್ತಮಪಡಿಸಿಕೊಳ್ಳಲು ಪರೀಕ್ಷೆ ಬರೆಯುತ್ತಿರುವವರು;214 </p>.<p>Quote - ‘ಪರೀಕ್ಷೆಯನ್ನು ಪಾರದರ್ಶಕವಾಗಿ ನಡೆಸಬೇಕು. ಸಿ.ಸಿ ಟಿವಿ ಕ್ಯಾಮೆರಾ ನಿರಂತರವಾಗಿ ಕಾರ್ಯನಿರ್ವಹಿಸುವಂತೆ ಯುಪಿ.ಎಸ್ ವ್ಯವಸ್ಥೆ ಇರಬೇಕು.ಅಹಿತಕರ ಘಟನೆಗಳು ಸಂಭವಿಸಿದಲ್ಲಿ ನಿರ್ಧಾಕ್ಷಿಣ್ಯ ಕ್ರಮವಹಿಸಲಾಗುವುದು – ಬಿ.ಗೋಪಾಲಕೃಷ್ಣ ಜಿಲ್ಲಾಪಂಚಾಯಿತಿ ಮುಖ್ಯಕಾರ್ಯನಿರ್ವಹಣಾಧಿಕಾರಿ</p>.<p>Cut-off box - ಪರೀಕ್ಷಾ ಕೇಂದ್ರಗಳು: ಬೀರೂರಿನ ಕೆ.ಎಲ್.ಕೆ ಸರ್ಕಾರಿ ಪ್ರೌಢಶಾಲೆ ಚಿಕ್ಕಮಗಳೂರಿನ ಸರ್ಕಾರಿ ಬಾಲಕಿಯರ ಪದವಿ ಪೂರ್ವ ಕಾಲೇಜು[ಪ್ರೌಢಶಾಲಾ ವಿಭಾಗ] ಸರ್ಕಾರಿ ಬಾಲಕರ ಪದವಿ ಪೂರ್ವ ಕಾಲೇಜು[ಪ್ರೌಢಶಾಲಾ ವಿಭಾಗ] ಚಿಕ್ಕಮಗಳೂರು(ಕಡೂರು ಬ್ಲಾಕ್) ಕೆ.ಪಿ.ಎಸ್ ಪ್ರೌಢಶಾಲೆ ಕೊಪ್ಪ ಮತ್ತು ನರಸಿಂಹರಾಜಪುರ ಸರ್ಕಾರಿ ಬಾಲಕರ ಪದವಿ ಪೂರ್ವ ಕಾಲೇಜು[ಪ್ರೌಢಶಾಲಾ ವಿಭಾಗ] ಮೂಡಿಗೆರೆ ಸರ್ಕಾರಿ ಪಿಯು ಕಾಲೇಜು[ಪ್ರೌಢಶಾಲಾ ವಿಭಾಗ] ಶೃಂಗೇರಿ ಸರ್ಕಾರಿ ಬಾಲಕರ ಪದವಿಪೂರ್ವ ಕಾಲೇಜು[ಪ್ರೌಢಶಾಲಾ ವಿಭಾಗ] ತರೀಕೆರೆ ಹಾಗೂ ಅಜ್ಜಂಪುರದ ಶೆಟ್ರು ಸಿದ್ದಪ್ಪ ಸರ್ಕಾರಿ ಪದವಿಪೂರ್ವ ಕಾಲೇಜಿನಲ್ಲಿ ನಿತ್ಯ ಬೆಳಿಗ್ಗೆ 10.15 ರಿಂದ ಮಧ್ಯಾಹ್ನ 1.30 ರವರೆಗೆ ಪರೀಕ್ಷೆ ನಡೆಯಲಿದೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಚಿಕ್ಕಮಗಳೂರು</strong>: ಎಸ್ಎಸ್ಎಲ್ಸಿ ಪರೀಕ್ಷೆ-2 ಶುಕ್ರವಾರದಿಂದ (ಜೂನ್ 14) 22ರ ವರೆಗೆ ಜಿಲ್ಲೆಯ 9 ಕೇಂದ್ರಗಳಲ್ಲಿ ನಡೆಯಲಿದೆ. ಜಿಲ್ಲೆಯ ಒಟ್ಟು 2,125 ವಿದ್ಯಾರ್ಥಿಗಳು ನೋಂದಾಯಿಸಿದ್ದು, ಸುಗಮವಾಗಿ ಪರೀಕ್ಷೆ ನಡೆಸಲು ಜಿಲ್ಲಾಡಳಿತ ಸಿದ್ಧತೆ ಕೈಗೊಂಡಿದೆ.</p>.<p>ತಾಲ್ಲೂಕು ಮತ್ತು ಜಿಲ್ಲಾ ಹಂತದ ಪರೀಕ್ಷಾ ಕೇಂದ್ರಗಳಲ್ಲಿ ಸಿದ್ಧತೆ ಕುರಿತು ಜಿಲ್ಲಾಪಂಚಾಯಿತಿ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಬಿ.ಗೋಪಾಲಕೃಷ್ಣ ಕ್ಷೇತ್ರ ಶಿಕ್ಷಣಾಧಿಕಾರಿಗಳು, ಪರೀಕ್ಷಾ ನೋಡಲ್ ಅಧಿಕಾರಿಗಳೊಂದಿಗೆ ಜಿಲ್ಲಾಪಂಚಾಯಿತಿ ಸಭಾಂಗಣದಲ್ಲಿ ಪೂರ್ವಭಾವಿ ಸಭೆ ನಡೆಸಿದರು.</p>.<p>ಪರೀಕ್ಷಾ ಕಾರ್ಯಕ್ಕೆ 9 ಅಧೀಕ್ಷಕರು, 2 ಉಪ ಅಧೀಕ್ಷಕರು, 8 ಕಸ್ಟೋಡಿಯನ್, 8 ಸ್ಥಾನಿಕ ಜಾಗೃತ ದಳ, 100 ಕೊಠಡಿ ಮೇಲ್ವಿಚಾರಕರು, 8 ಮೊಬೈಲ್ ಸ್ವಾಧೀನಾಧಿಕಾರಿಗಳು ಹಾಗೂ 10 ವಿಷಯ ನಿರ್ವಾಹಕರನ್ನು ನೇಮಿಸಲಾಗಿದೆ ಎಂದು ಡಿಡಿಪಿಐ(ಆಡಳಿತ) ಎಸ್.ಆರ್ ಮಂಜುನಾಥ್ ಸಭೆಗೆ ಮಾಹಿತಿ ನೀಡಿದರು.</p>.<p>ಜಿಲ್ಲಾ ಮತ್ತು ತಾಲ್ಲೂಕು ಜಾಗೃತ ದಳ ಹಾಗೂ ವೆಬ್ ಕ್ಯಾಮೆರಾ ವೀಕ್ಷಣಾ ತಂಡ, 8 ಮಾರ್ಗಾಧಿಕಾರಿಗಳು, ಚಾಲಕರು, 26 ಪೊಲೀಸ್ ಸಿಬ್ಬಂದಿ ಮತ್ತು 8 ಆರೋಗ್ಯ ಸಿಬ್ಬಂದಿ ಸೇರಿದಂತೆ ಒಟ್ಟು 170 ಅಧಿಕಾರಿ ಮತ್ತು ಸಿಬ್ಬಂದಿ ಪರೀಕ್ಷಾ ಕಾರ್ಯದಲ್ಲಿ ತೊಡಗಲಿದ್ದಾರೆ ಎಂದು ವಿವರಿಸಿದರು.</p>.<p>ಪರೀಕ್ಷಾ ಕಾರ್ಯದಲ್ಲಿ ಭಾಗವಹಿಸುವ ಎಲ್ಲಾ ಅಧಿಕಾರಿ ಮತ್ತು ಸಿಬ್ಬಂದಿಗೆ ತರಬೇತಿ ನೀಡಲಾಗಿದೆ. ಪರೀಕ್ಷಾ ಕೇಂದ್ರಗಳಲ್ಲಿ ಕುಡಿಯುವ ನೀರು, ಶೌಚಾಲಯ, ಆಸನ ವ್ಯವಸ್ಥೆ, ಕೊಠಡಿ ಸುರಕ್ಷತೆ ಪರಿಶೀಲಿಸಲಾಗಿದೆ. ಪರೀಕ್ಷಾ ಕೇಂದ್ರದ ಸುತ್ತ ಪರೀಕ್ಷಾ ದಿನದಂದು 144 ಸೆಕ್ಷನ್ ಜಾರಿಯಲ್ಲಿರಲಿದೆ ಎಂದು ತಿಳಿಸಿದರು.</p>.<p>ಪರೀಕ್ಷಾ ಕೇಂದ್ರಗಳ ಕೊಠಡಿಗಳಲ್ಲಿ ಸಿ.ಸಿಟಿವಿ ಕ್ಯಾಮೆರಾ ಅಳವಡಿಸಲಾಗಿದೆ. ಜಿಲ್ಲೆಯ 9 ಕೇಂದ್ರಗಳ ವೀಕ್ಷಣೆಗೆ ಜಿಲ್ಲಾ ಪಂಚಾಯಿತಿಯಲ್ಲಿ ವೆಬ್ ಕಾಸ್ಟಿಂಗ್ ವ್ಯವಸ್ಥೆ ಮಾಡಲಾಗಿದೆ ಎಂದು ಅವರು ಹೇಳಿದರು. ಸಭೆಯಲ್ಲಿ ಡಯಟ್ನ ಉಪನಿರ್ದೇಶಕ ಪ್ರಕಾಶ್ ಇದ್ದರು.</p>.<p>ವೇಳಾಪಟ್ಟಿ:</p>.<p>ಜೂ. 14ರಂದು ಪ್ರಥಮ ಭಾಷೆ, 15ರಂದು ತೃತೀಯ ಭಾಷೆ, 18ರಂದು ಗಣಿತ, 20ರಂದು ವಿಜ್ಞಾನ, 21ರಂದು ಇಂಗ್ಲಿಷ್ ಹಾಗೂ 22ರಂದು ಸಮಾಜ ವಿಜ್ಞಾನ ಪರೀಕ್ಷೆ ನಡೆಯಲಿದೆ.</p>.<p>Highlights - ವಿದ್ಯಾರ್ಥಿಗಳ ಮಾಹಿತಿ ಪರೀಕ್ಷೆ ಬರೆಯುವ ಒಟ್ಟು ವಿದ್ಯಾರ್ಥಿಗಳು;2125 ಪುನರಾವರ್ತಿತ ವಿದ್ಯಾರ್ಥಿಗಳು;1841 ಖಾಸಗಿ ಹೊಸ ವಿದ್ಯಾರ್ಥಿಗಳು;70 ಅಂಕ ಉತ್ತಮಪಡಿಸಿಕೊಳ್ಳಲು ಪರೀಕ್ಷೆ ಬರೆಯುತ್ತಿರುವವರು;214 </p>.<p>Quote - ‘ಪರೀಕ್ಷೆಯನ್ನು ಪಾರದರ್ಶಕವಾಗಿ ನಡೆಸಬೇಕು. ಸಿ.ಸಿ ಟಿವಿ ಕ್ಯಾಮೆರಾ ನಿರಂತರವಾಗಿ ಕಾರ್ಯನಿರ್ವಹಿಸುವಂತೆ ಯುಪಿ.ಎಸ್ ವ್ಯವಸ್ಥೆ ಇರಬೇಕು.ಅಹಿತಕರ ಘಟನೆಗಳು ಸಂಭವಿಸಿದಲ್ಲಿ ನಿರ್ಧಾಕ್ಷಿಣ್ಯ ಕ್ರಮವಹಿಸಲಾಗುವುದು – ಬಿ.ಗೋಪಾಲಕೃಷ್ಣ ಜಿಲ್ಲಾಪಂಚಾಯಿತಿ ಮುಖ್ಯಕಾರ್ಯನಿರ್ವಹಣಾಧಿಕಾರಿ</p>.<p>Cut-off box - ಪರೀಕ್ಷಾ ಕೇಂದ್ರಗಳು: ಬೀರೂರಿನ ಕೆ.ಎಲ್.ಕೆ ಸರ್ಕಾರಿ ಪ್ರೌಢಶಾಲೆ ಚಿಕ್ಕಮಗಳೂರಿನ ಸರ್ಕಾರಿ ಬಾಲಕಿಯರ ಪದವಿ ಪೂರ್ವ ಕಾಲೇಜು[ಪ್ರೌಢಶಾಲಾ ವಿಭಾಗ] ಸರ್ಕಾರಿ ಬಾಲಕರ ಪದವಿ ಪೂರ್ವ ಕಾಲೇಜು[ಪ್ರೌಢಶಾಲಾ ವಿಭಾಗ] ಚಿಕ್ಕಮಗಳೂರು(ಕಡೂರು ಬ್ಲಾಕ್) ಕೆ.ಪಿ.ಎಸ್ ಪ್ರೌಢಶಾಲೆ ಕೊಪ್ಪ ಮತ್ತು ನರಸಿಂಹರಾಜಪುರ ಸರ್ಕಾರಿ ಬಾಲಕರ ಪದವಿ ಪೂರ್ವ ಕಾಲೇಜು[ಪ್ರೌಢಶಾಲಾ ವಿಭಾಗ] ಮೂಡಿಗೆರೆ ಸರ್ಕಾರಿ ಪಿಯು ಕಾಲೇಜು[ಪ್ರೌಢಶಾಲಾ ವಿಭಾಗ] ಶೃಂಗೇರಿ ಸರ್ಕಾರಿ ಬಾಲಕರ ಪದವಿಪೂರ್ವ ಕಾಲೇಜು[ಪ್ರೌಢಶಾಲಾ ವಿಭಾಗ] ತರೀಕೆರೆ ಹಾಗೂ ಅಜ್ಜಂಪುರದ ಶೆಟ್ರು ಸಿದ್ದಪ್ಪ ಸರ್ಕಾರಿ ಪದವಿಪೂರ್ವ ಕಾಲೇಜಿನಲ್ಲಿ ನಿತ್ಯ ಬೆಳಿಗ್ಗೆ 10.15 ರಿಂದ ಮಧ್ಯಾಹ್ನ 1.30 ರವರೆಗೆ ಪರೀಕ್ಷೆ ನಡೆಯಲಿದೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>