<p><strong>ಚಿಕ್ಕಮಗಳೂರು</strong>: ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಶುಕ್ರವಾರ ಮಂಡಿಸಿದ 2023–24ನೇ ಸಾಲಿನ ಬಜೆಟ್ನಲ್ಲಿ ಕಾಫಿನಾಡಿಗೆ ಮೆಗಾ ಜವಳಿ ಪಾರ್ಕ್, ಹೊಸ ವಿಶ್ವವಿದ್ಯಾಲಯ ಸಹಿತ ಹಲವು ಕೊಡುಗೆ ನೀಡಿದ್ದಾರೆ.</p>.<p>ಚಿಕ್ಕಮಗಳೂರು ಸಹಿತ ನಾಲ್ಕು ಜಿಲ್ಲೆಗಳಿಗೆ ಮೆಗಾ ಜವಳಿ ಪಾರ್ಕ್ ಘೋಷಿಸಲಾಗಿದೆ. ಈ ಪಾರ್ಕ್ ಸ್ಥಾಪನೆಯಾದರೆ ಉದ್ಯೋಗ ಸೃಷ್ಟಿಯಾಗಲಿವೆ ಎಂಬ ನಿರೀಕ್ಷೆಗಳು ಗರಿಗೆದರಿವೆ.</p>.<p>ಹೊಸ ವಿಶ್ವವಿದ್ಯಾಲಯ: ಚಿಕ್ಕಮಗಳೂರಿನಲ್ಲಿ ಗರಿಷ್ಠ ತಂತ್ರಜ್ಞಾನ ಮತ್ತು ಕಡಿಮೆ ಮಾನವ ಸಂಪನ್ಮೂಲ ಒಳಗೊಂಡಂತೆ ವಿಶ್ವವಿದ್ಯಾಲಯ ಸ್ಥಾಪನೆ ಘೋಷಣೆ ಮಾಡಲಾಗಿದೆ.</p>.<p>ಹೊಸ ವಿಶ್ವವಿದ್ಯಾಲಯ ಸ್ಥಾಪನೆಯಾದರೆ ಜಿಲ್ಲೆಯ ವಿದ್ಯಾರ್ಥಿಗಳಿಗೆ ಇಲ್ಲಿಯೇ ಉನ್ನತ ವ್ಯಾಸಂಗದ, ಸಂಶೋಧನಾ ಅಧ್ಯಯನ ಮೊದಲಾದ ಶೈಕ್ಷಣಿಕ ಚಟುವಟಿಕೆಗಳಿಗೆ ಅನುಕೂಲವಾಗಲಿದೆ.</p>.<p>ಪಿಎಂ– ಎಬಿಎಚ್ಐಎಂ ನಡಿ ತೃತೀಯ ಹಂತದ ಆರೈಕೆ ಒದಗಿಸಲು ಚಿಕ್ಕಮಗಳೂರು ಜಿಲ್ಲಾ ಆಸ್ಪತ್ರೆಯಲ್ಲಿ 50 ಹಾಸಿಗೆ ಸಾಮರ್ಥ್ಯದ ಕ್ರಿಟಿಕಲ್ ಕೇಋರ್ ಬ್ಲಾಕ್ ಸ್ಥಾಪನೆ ಪ್ರಸ್ತಾಪಿಸಲಾಗಿದೆ. ಶೃಂಗೇರಿಯ ಸಮುದಾಯ ಆರೋಗ್ಯ ಕೇಂದ್ರವನ್ನು 100 ಹಾಸಿಗೆ ಸಾಮರ್ಥ್ಯದ ತಾಲ್ಲೂಕು ಆಸ್ಪತ್ರೆಯನ್ನಾಗಿ ಹಂತಹಂತವಾಗಿ ಮೇಲ್ದರ್ಜೆಗೇರಿಸುವುದಾಗಿ ಘೋಷಿಸಲಾಗಿದೆ.</p>.<p>ಮಾನವ– ಪ್ರಾಣಿ ಸಂಘರ್ಷ ಕ್ಷೇತ್ರದಲ್ಲಿ ಸೆರೆ ಹಿಡಿದ ವನ್ಯಪ್ರಾಣಿಗಳನ್ನು ಅವುಗಳ ನೈಸರ್ಗಿಕ ಆವಾಸ ಸ್ಥಾನ ಪ್ರದೇಶ ಗುರುತಿಸಿ ಬಿಡುಗಡೆ ಮಾಡಲು ಭದ್ರಾ ಅರಣ್ಯದಲ್ಲಿ<br />ವ್ಯವಸ್ಥೆ ಕಲ್ಪಿಸಲಾಗುವುದು ಎಂದು ಪ್ರಸ್ತಾಪಿಸಲಾಗಿದೆ.</p>.<p>ಕಾಡಾನೆ ಹಾವಳಿ ತಡೆ ನಿಟ್ಟಿನಲ್ಲಿ ರಚಿಸಿರುವ ಕಾರ್ಯಪಡೆ ಪರಿಣಾಮಕಾರಿಯಾಗಿ ಕಾರ್ಯನಿರ್ವಹಿಸಲು ಹೆಚ್ಚುವರಿಯಾಗಿ 199 ಸಿಬ್ಬಂದಿ ನೇಮಕಕ್ಕೆ ಅನುಮೋದನೆ ನೀಡಿರುವ ಪ್ರಸ್ತಾಪ ಇದೆ.</p>.<p>ದಶಕಗಳಿಂದ ಬೆಳಗಾರರು ಒತ್ತುವರಿ ಮಾಡಿರುವ ಜಮೀನನ್ನು (25 ಎಕರೆ ಮಿತಿ) 30 ವರ್ಷ ಅವಧಿಗೆ ಗುತ್ತಿಗೆ ನೀಡುವ ನಿಟ್ಟಿನಲ್ಲಿ ಕಂದಾಯ ಕಾಯ್ದೆಗೆ ತಿದ್ದುಪಡಿ ಮಾಡಲಾಗಿದೆ. 2023–24ನೇ ಸಾಲಿನಲ್ಲಿ ಕಾಯ್ದೆ ಜಾರಿಗೊಳಿಸಲು ನಿಯಮ ರೂಪಿಸಲಾಗುವುದು ಎಂದು ಪ್ರಸ್ತಾಪಿಸಲಾಗಿದೆ.</p>.<p>ಚಿಕ್ಕಮಗಳೂರು– ಬೇಲೂರು ಸಹಿತ ನಾಲ್ಕು ರೈಲ್ವೆ ಮಾರ್ಗಗಳಿಗೆ ಹೆಚ್ಚುವರಿಯಾಗಿ ₹ 960 ಕೋಟಿ ಅನುದಾನವನ್ನು ರಾಜ್ಯ ಸರ್ಕಾರದ ವತಿಯಿಂದ ಒದಗಿಸಲಾಗುವುದು ಎಂದು ಪ್ರಸ್ತಾಪಿಸಲಾಗಿದೆ. ಸಹ್ಯಾದ್ರಿ ಸಿರಿ ಯೋಜನೆ, ಕಾಲು ಸಂಕ ನಿರ್ಮಾಣ ಯೋಜನೆಗಳಲ್ಲೂ ಜಿಲ್ಲೆಗೆ ಪಾಲು ಇರಬಹುದು ಎಂಬ ಆಶಾಭಾವ ಇದೆ.</p>.<p>ಹುಸಿಯಾದ ನಿಗಮ ಮಂಡಳಿ<br />ಬಾಳೆಹೊನ್ನೂರು: ಬಜೆಟ್ನಲ್ಲಿ ನಾರಾಯಣಗುರು ನಿಗಮ ಮಂಡಳಿ ಸ್ಥಾಪಿಸುವ ಆಶ್ವಾಸನೆ ನೀಡಿದ್ದ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ, ಆ ಭರವಸೆಯನ್ನು ಹುಸಿಗೊಳಿಸಿದ್ದಾರೆ. ಇದರಿಂದ ಬಿಲ್ಲವ, ಈಡಿಗ, ನಾಮದಾರಿ ಸಮುದಾಯಗಳಿಗೆ ಅನ್ಯಾಯವಾಗಿದೆ. ಬಹುಸಂಖ್ಯಾತರ ಬೇಡಿಕೆ ಈಡೇರಿಲ್ಲ.ಸಮುದಾಯ ಚುನಾವಣೆ ಬಹಿಷ್ಕಾರದ ಮೊರೆಹೋಗುವುದು ಅನಿವಾರ್ಯ ಆಗಲಿದೆ ಎಂದು ಬ್ರಹ್ಮಶ್ರೀ ಶ್ರೀನಾರಾಯಣ ಗುರು ಒಕ್ಕೂಟದ ಜಿಲ್ಲಾ ಘಟಕದ ಅಧ್ಯಕ್ಷ ಎಚ್.ಎಂ.ಸತೀಶ್ ಹೇಳಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಚಿಕ್ಕಮಗಳೂರು</strong>: ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಶುಕ್ರವಾರ ಮಂಡಿಸಿದ 2023–24ನೇ ಸಾಲಿನ ಬಜೆಟ್ನಲ್ಲಿ ಕಾಫಿನಾಡಿಗೆ ಮೆಗಾ ಜವಳಿ ಪಾರ್ಕ್, ಹೊಸ ವಿಶ್ವವಿದ್ಯಾಲಯ ಸಹಿತ ಹಲವು ಕೊಡುಗೆ ನೀಡಿದ್ದಾರೆ.</p>.<p>ಚಿಕ್ಕಮಗಳೂರು ಸಹಿತ ನಾಲ್ಕು ಜಿಲ್ಲೆಗಳಿಗೆ ಮೆಗಾ ಜವಳಿ ಪಾರ್ಕ್ ಘೋಷಿಸಲಾಗಿದೆ. ಈ ಪಾರ್ಕ್ ಸ್ಥಾಪನೆಯಾದರೆ ಉದ್ಯೋಗ ಸೃಷ್ಟಿಯಾಗಲಿವೆ ಎಂಬ ನಿರೀಕ್ಷೆಗಳು ಗರಿಗೆದರಿವೆ.</p>.<p>ಹೊಸ ವಿಶ್ವವಿದ್ಯಾಲಯ: ಚಿಕ್ಕಮಗಳೂರಿನಲ್ಲಿ ಗರಿಷ್ಠ ತಂತ್ರಜ್ಞಾನ ಮತ್ತು ಕಡಿಮೆ ಮಾನವ ಸಂಪನ್ಮೂಲ ಒಳಗೊಂಡಂತೆ ವಿಶ್ವವಿದ್ಯಾಲಯ ಸ್ಥಾಪನೆ ಘೋಷಣೆ ಮಾಡಲಾಗಿದೆ.</p>.<p>ಹೊಸ ವಿಶ್ವವಿದ್ಯಾಲಯ ಸ್ಥಾಪನೆಯಾದರೆ ಜಿಲ್ಲೆಯ ವಿದ್ಯಾರ್ಥಿಗಳಿಗೆ ಇಲ್ಲಿಯೇ ಉನ್ನತ ವ್ಯಾಸಂಗದ, ಸಂಶೋಧನಾ ಅಧ್ಯಯನ ಮೊದಲಾದ ಶೈಕ್ಷಣಿಕ ಚಟುವಟಿಕೆಗಳಿಗೆ ಅನುಕೂಲವಾಗಲಿದೆ.</p>.<p>ಪಿಎಂ– ಎಬಿಎಚ್ಐಎಂ ನಡಿ ತೃತೀಯ ಹಂತದ ಆರೈಕೆ ಒದಗಿಸಲು ಚಿಕ್ಕಮಗಳೂರು ಜಿಲ್ಲಾ ಆಸ್ಪತ್ರೆಯಲ್ಲಿ 50 ಹಾಸಿಗೆ ಸಾಮರ್ಥ್ಯದ ಕ್ರಿಟಿಕಲ್ ಕೇಋರ್ ಬ್ಲಾಕ್ ಸ್ಥಾಪನೆ ಪ್ರಸ್ತಾಪಿಸಲಾಗಿದೆ. ಶೃಂಗೇರಿಯ ಸಮುದಾಯ ಆರೋಗ್ಯ ಕೇಂದ್ರವನ್ನು 100 ಹಾಸಿಗೆ ಸಾಮರ್ಥ್ಯದ ತಾಲ್ಲೂಕು ಆಸ್ಪತ್ರೆಯನ್ನಾಗಿ ಹಂತಹಂತವಾಗಿ ಮೇಲ್ದರ್ಜೆಗೇರಿಸುವುದಾಗಿ ಘೋಷಿಸಲಾಗಿದೆ.</p>.<p>ಮಾನವ– ಪ್ರಾಣಿ ಸಂಘರ್ಷ ಕ್ಷೇತ್ರದಲ್ಲಿ ಸೆರೆ ಹಿಡಿದ ವನ್ಯಪ್ರಾಣಿಗಳನ್ನು ಅವುಗಳ ನೈಸರ್ಗಿಕ ಆವಾಸ ಸ್ಥಾನ ಪ್ರದೇಶ ಗುರುತಿಸಿ ಬಿಡುಗಡೆ ಮಾಡಲು ಭದ್ರಾ ಅರಣ್ಯದಲ್ಲಿ<br />ವ್ಯವಸ್ಥೆ ಕಲ್ಪಿಸಲಾಗುವುದು ಎಂದು ಪ್ರಸ್ತಾಪಿಸಲಾಗಿದೆ.</p>.<p>ಕಾಡಾನೆ ಹಾವಳಿ ತಡೆ ನಿಟ್ಟಿನಲ್ಲಿ ರಚಿಸಿರುವ ಕಾರ್ಯಪಡೆ ಪರಿಣಾಮಕಾರಿಯಾಗಿ ಕಾರ್ಯನಿರ್ವಹಿಸಲು ಹೆಚ್ಚುವರಿಯಾಗಿ 199 ಸಿಬ್ಬಂದಿ ನೇಮಕಕ್ಕೆ ಅನುಮೋದನೆ ನೀಡಿರುವ ಪ್ರಸ್ತಾಪ ಇದೆ.</p>.<p>ದಶಕಗಳಿಂದ ಬೆಳಗಾರರು ಒತ್ತುವರಿ ಮಾಡಿರುವ ಜಮೀನನ್ನು (25 ಎಕರೆ ಮಿತಿ) 30 ವರ್ಷ ಅವಧಿಗೆ ಗುತ್ತಿಗೆ ನೀಡುವ ನಿಟ್ಟಿನಲ್ಲಿ ಕಂದಾಯ ಕಾಯ್ದೆಗೆ ತಿದ್ದುಪಡಿ ಮಾಡಲಾಗಿದೆ. 2023–24ನೇ ಸಾಲಿನಲ್ಲಿ ಕಾಯ್ದೆ ಜಾರಿಗೊಳಿಸಲು ನಿಯಮ ರೂಪಿಸಲಾಗುವುದು ಎಂದು ಪ್ರಸ್ತಾಪಿಸಲಾಗಿದೆ.</p>.<p>ಚಿಕ್ಕಮಗಳೂರು– ಬೇಲೂರು ಸಹಿತ ನಾಲ್ಕು ರೈಲ್ವೆ ಮಾರ್ಗಗಳಿಗೆ ಹೆಚ್ಚುವರಿಯಾಗಿ ₹ 960 ಕೋಟಿ ಅನುದಾನವನ್ನು ರಾಜ್ಯ ಸರ್ಕಾರದ ವತಿಯಿಂದ ಒದಗಿಸಲಾಗುವುದು ಎಂದು ಪ್ರಸ್ತಾಪಿಸಲಾಗಿದೆ. ಸಹ್ಯಾದ್ರಿ ಸಿರಿ ಯೋಜನೆ, ಕಾಲು ಸಂಕ ನಿರ್ಮಾಣ ಯೋಜನೆಗಳಲ್ಲೂ ಜಿಲ್ಲೆಗೆ ಪಾಲು ಇರಬಹುದು ಎಂಬ ಆಶಾಭಾವ ಇದೆ.</p>.<p>ಹುಸಿಯಾದ ನಿಗಮ ಮಂಡಳಿ<br />ಬಾಳೆಹೊನ್ನೂರು: ಬಜೆಟ್ನಲ್ಲಿ ನಾರಾಯಣಗುರು ನಿಗಮ ಮಂಡಳಿ ಸ್ಥಾಪಿಸುವ ಆಶ್ವಾಸನೆ ನೀಡಿದ್ದ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ, ಆ ಭರವಸೆಯನ್ನು ಹುಸಿಗೊಳಿಸಿದ್ದಾರೆ. ಇದರಿಂದ ಬಿಲ್ಲವ, ಈಡಿಗ, ನಾಮದಾರಿ ಸಮುದಾಯಗಳಿಗೆ ಅನ್ಯಾಯವಾಗಿದೆ. ಬಹುಸಂಖ್ಯಾತರ ಬೇಡಿಕೆ ಈಡೇರಿಲ್ಲ.ಸಮುದಾಯ ಚುನಾವಣೆ ಬಹಿಷ್ಕಾರದ ಮೊರೆಹೋಗುವುದು ಅನಿವಾರ್ಯ ಆಗಲಿದೆ ಎಂದು ಬ್ರಹ್ಮಶ್ರೀ ಶ್ರೀನಾರಾಯಣ ಗುರು ಒಕ್ಕೂಟದ ಜಿಲ್ಲಾ ಘಟಕದ ಅಧ್ಯಕ್ಷ ಎಚ್.ಎಂ.ಸತೀಶ್ ಹೇಳಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>