ಹುಸಿಯಾದ ನಿಗಮ ಮಂಡಳಿ
ಬಾಳೆಹೊನ್ನೂರು: ಬಜೆಟ್ನಲ್ಲಿ ನಾರಾಯಣಗುರು ನಿಗಮ ಮಂಡಳಿ ಸ್ಥಾಪಿಸುವ ಆಶ್ವಾಸನೆ ನೀಡಿದ್ದ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ, ಆ ಭರವಸೆಯನ್ನು ಹುಸಿಗೊಳಿಸಿದ್ದಾರೆ. ಇದರಿಂದ ಬಿಲ್ಲವ, ಈಡಿಗ, ನಾಮದಾರಿ ಸಮುದಾಯಗಳಿಗೆ ಅನ್ಯಾಯವಾಗಿದೆ. ಬಹುಸಂಖ್ಯಾತರ ಬೇಡಿಕೆ ಈಡೇರಿಲ್ಲ.ಸಮುದಾಯ ಚುನಾವಣೆ ಬಹಿಷ್ಕಾರದ ಮೊರೆಹೋಗುವುದು ಅನಿವಾರ್ಯ ಆಗಲಿದೆ ಎಂದು ಬ್ರಹ್ಮಶ್ರೀ ಶ್ರೀನಾರಾಯಣ ಗುರು ಒಕ್ಕೂಟದ ಜಿಲ್ಲಾ ಘಟಕದ ಅಧ್ಯಕ್ಷ ಎಚ್.ಎಂ.ಸತೀಶ್ ಹೇಳಿದ್ದಾರೆ.