‘ಬೆಲೆ ಏರಿಕೆಯ ಬರೆ ಎಳೆಯಲು ರಾಜ್ಯದ ಜನ ಕಾಂಗ್ರೆಸ್ಗೆ ಅಧಿಕಾರ ನೀಡಿಲ್ಲ. ಹಾಲಿನ ದರ, ಅಬಕಾರಿ ಸುಂಕ ಏರಿಕೆ ಮಾಡುವ ಮೂಲಕ ಜನರಿಗೆ ಮೋಸ ಮಾಡಲಾಗಿದೆ. ಚುನಾವಣೆ ವೇಳೆ ಅಮಿತ್ ಶಾ ಅವರು ನೀಡಿದ್ದ ಹೇಳಿಕೆಯನ್ನು ತಪ್ಪಾಗಿ ಪ್ರಚಾರ ಮಾಡಲಾಯಿತು. ರೈತರಿಗೆ ಸಹಾಯ ಮಾಡುವ ಉದ್ದೇಶದಿಂದ ಅಮೂಲ್ ಮತ್ತು ನಂದಿನಿ ಪರಸ್ಪರ ತಾಂತ್ರಿಕ ಸಹಕಾರ ಪಡೆದು ಕೆಲಸ ಮಾಡಬೇಕು ಎಂದಷ್ಟೇ ಹೇಳಿದ್ದರು. ಅದನ್ನು ತಪ್ಪಾಗಿ ಬಿಂಬಿಸುವ ಕೆಲಸ ನಡೆಯಿತು’ ಎಂದು ಹೇಳಿದರು.