<p><strong>ಚಿಕ್ಕಮಗಳೂರು:</strong> ‘ಹಿಜಾಬ್ ಪ್ರಕರಣ ಕುರಿತು ಹೈಕೋರ್ಟ್ ನೀಡಿರುವ ಆದೇಶಕ್ಕೆ ಕೆಲವರು ಅಸಮಾಧಾನ ವ್ಯಕ್ತಪಡಿಸಿದ್ದಾರೆ. ಆದೇಶ ಉಲ್ಲಂಘಿಸಿದವರ ವಿರುದ್ಧ ಗೃಹ ಇಲಾಖೆ ಕ್ರಮ ವಹಿಸಲಿದೆ’ ಎಂದು ಗೃಹ ಸಚಿವ ಆರಗ ಜ್ಞಾನೇಂದ್ರ ಪ್ರತಿಕ್ರಿಯಿಸಿದರು.</p>.<p>ಬಾಳೆಹೊನ್ನೂರಿನಲ್ಲಿ ಬುಧವಾರ ಸುದ್ದಿಗಾರರೊಂದಿಗೆ ಮಾತನಾಡಿ, ನಿಷೇಧಾಜ್ಞೆ ನಡುವೆಯೂ ಪ್ರತಿರೋಧ ತೋರಿದ್ದಾರೆ. ಎಲ್ಲವನ್ನು ಸರ್ಕಾರ ಗಮನಿಸುತ್ತಿದೆ, ಕ್ರಮ ಕೈಗೊಳ್ಳುತ್ತೇವೆ ಎಂದು ಉತ್ತರಿಸಿದರು.</p>.<p>‘ಕೋರ್ಟ್ ಆದೇಶದ ವಿರುದ್ಧ ಪ್ರತಿಭಟನೆ ಮಾಡುವುದು ಕಾನೂನಿನ ಉಲ್ಲಂಘನೆ, ನ್ಯಾಯಾಂಗ ನಿಂದನೆಯಾಗುತ್ತದೆ. ಆದೇಶ ಪ್ರಶ್ನಿಸಿ ಅವರು ಸುಪ್ರೀ ಕೋರ್ಟ್ ಮೆಟ್ಟಿಲು ಏರಲು ಅವಕಾಶ ಇದೆ’ ಎಂದರು.<br />‘ಭ್ರಷ್ಟಾಚಾರ ನಿಗ್ರಹ ದಳ (ಎಸಿಬಿ) ತಂಡದವರು ಭ್ರಷ್ಟಾಚಾರಿಗಳ ಮುಖಡವಾಡ ಕಳಚುವ ಕೆಲಸದಲ್ಲಿ ತೊಡಗಿದ್ದಾರೆ. ಅದು ಮುಂದುವರಿಯಲಿದೆ’ ಎಂದು ಹೇಳಿದರು.</p>.<p>ಇದನ್ನೂ ಓದಿ.. <a href="https://www.prajavani.net/district/udupi/nine-students-returned-without-attending-exam-after-opposing-to-remove-hijab-in-udupi-919858.html"><strong>ಕಾಪು: ಹಿಜಾಬ್ ತೆಗೆಯಲು ನಿರಾಕರಣೆ– ಪರೀಕ್ಷೆ ಬರೆಯದೆ 9 ವಿದ್ಯಾರ್ಥಿನಿಯರು ವಾಪಸ್</strong></a></p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಚಿಕ್ಕಮಗಳೂರು:</strong> ‘ಹಿಜಾಬ್ ಪ್ರಕರಣ ಕುರಿತು ಹೈಕೋರ್ಟ್ ನೀಡಿರುವ ಆದೇಶಕ್ಕೆ ಕೆಲವರು ಅಸಮಾಧಾನ ವ್ಯಕ್ತಪಡಿಸಿದ್ದಾರೆ. ಆದೇಶ ಉಲ್ಲಂಘಿಸಿದವರ ವಿರುದ್ಧ ಗೃಹ ಇಲಾಖೆ ಕ್ರಮ ವಹಿಸಲಿದೆ’ ಎಂದು ಗೃಹ ಸಚಿವ ಆರಗ ಜ್ಞಾನೇಂದ್ರ ಪ್ರತಿಕ್ರಿಯಿಸಿದರು.</p>.<p>ಬಾಳೆಹೊನ್ನೂರಿನಲ್ಲಿ ಬುಧವಾರ ಸುದ್ದಿಗಾರರೊಂದಿಗೆ ಮಾತನಾಡಿ, ನಿಷೇಧಾಜ್ಞೆ ನಡುವೆಯೂ ಪ್ರತಿರೋಧ ತೋರಿದ್ದಾರೆ. ಎಲ್ಲವನ್ನು ಸರ್ಕಾರ ಗಮನಿಸುತ್ತಿದೆ, ಕ್ರಮ ಕೈಗೊಳ್ಳುತ್ತೇವೆ ಎಂದು ಉತ್ತರಿಸಿದರು.</p>.<p>‘ಕೋರ್ಟ್ ಆದೇಶದ ವಿರುದ್ಧ ಪ್ರತಿಭಟನೆ ಮಾಡುವುದು ಕಾನೂನಿನ ಉಲ್ಲಂಘನೆ, ನ್ಯಾಯಾಂಗ ನಿಂದನೆಯಾಗುತ್ತದೆ. ಆದೇಶ ಪ್ರಶ್ನಿಸಿ ಅವರು ಸುಪ್ರೀ ಕೋರ್ಟ್ ಮೆಟ್ಟಿಲು ಏರಲು ಅವಕಾಶ ಇದೆ’ ಎಂದರು.<br />‘ಭ್ರಷ್ಟಾಚಾರ ನಿಗ್ರಹ ದಳ (ಎಸಿಬಿ) ತಂಡದವರು ಭ್ರಷ್ಟಾಚಾರಿಗಳ ಮುಖಡವಾಡ ಕಳಚುವ ಕೆಲಸದಲ್ಲಿ ತೊಡಗಿದ್ದಾರೆ. ಅದು ಮುಂದುವರಿಯಲಿದೆ’ ಎಂದು ಹೇಳಿದರು.</p>.<p>ಇದನ್ನೂ ಓದಿ.. <a href="https://www.prajavani.net/district/udupi/nine-students-returned-without-attending-exam-after-opposing-to-remove-hijab-in-udupi-919858.html"><strong>ಕಾಪು: ಹಿಜಾಬ್ ತೆಗೆಯಲು ನಿರಾಕರಣೆ– ಪರೀಕ್ಷೆ ಬರೆಯದೆ 9 ವಿದ್ಯಾರ್ಥಿನಿಯರು ವಾಪಸ್</strong></a></p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>