<p><strong>ಚಿಕ್ಕಮಗಳೂರು:</strong> ಸಾಂಸ್ಕೃತಿಕ ಕಾರ್ಯಕ್ರಮಗಳಲ್ಲಿ ಸೋಲು-ಗೆಲುವು ಸಹಜ. ವಿದ್ಯಾರ್ಥಿಗಳು ಧೃತಿಗೆಡದೇ ಆತ್ಮವಿಶ್ವಾಸದಿಂದ ಮುಂದೆ ಸಾಗಬೇಕು. ಮುಂದಿನ ಯತ್ನಕ್ಕೆ ಕಟಿಬದ್ಧರಾಗಬೇಕು ಎಂದು ಮಂಡ್ಯ ಆದಿಚುಂಚನಗಿರಿ ವಿಶ್ವವಿದ್ಯಾಲಯದ ಕುಲಸಚಿವ ಸಿ.ಕೆ.ಸುಬ್ಬರಾಯ ಹೇಳಿದರು.</p>.<p>ನಗರದ ಎಐಟಿ ಕಾಲೇಜಿನಲ್ಲಿ ಶನಿವಾರ ನಡೆದ ಆದಿಚುಂಚನಗಿರಿ ತಾಂತ್ರಿಕ ಮಹಾವಿದ್ಯಾಲಯದ ವಿದ್ಯಾರ್ಥಿ ಸಾಂಸ್ಕೃತಿಕ ಹಬ್ಬದ ಚುಂಚನ–2025 ಕಾರ್ಯಕ್ರಮದ ಸಮಾರೋಪ ಸಮಾರಂಭದಲ್ಲಿ ಅವರು ಮಾತನಾಡಿದರು.</p>.<p>ಸ್ಪರ್ಧೆಗಳು ಸ್ನೇಹ ಮನೋಭಾವದಿಂದ ಕೂಡಿರಬೇಕು. ವಿಜೇತರು ಉದ್ರೇಕಕ್ಕೆ ಒಳಗಾಗದೇ ಸಮಾಧಾನ ವಹಿಸಬೇಕು. ಸೋತವರು ದ್ವೇಷಕ್ಕೆ ಎಡೆಮಾಡಿಕೊಡದೇ ಸ್ನೇಹತ್ವವನ್ನು ಹೊಂದಬೇಕು. ಸ್ಪರ್ಧೆಗಳು ಗೆಲುವಿಗಿಂತ, ಭಾಗವಹಿಸಿದ ಅನುಭವವನ್ನೇ ದೊಡ್ಡಗೆಲುವೆಂದು ಭಾವಿಸಬೇಕು ಎಂದು ತಿಳಿಸಿದರು.</p>.<p>ಅಂತಿಮ ವರ್ಷದ ಪರೀಕ್ಷೆಗಳನ್ನು ಎದುರಿಸಲು ಕಠಿಣ ಅಭ್ಯಾಸವಿರಬೇಕು. ಆ ನಿಟ್ಟಿನಲ್ಲಿ ಯುವಕ-ಯುವತಿಯರು ಓದಿನ ಕಡೆ ಗಮನಹರಿಸಬೇಕು ಎಂದರು.</p>.<p>ಐಎಎಸ್-ಕೆಎಎಸ್ ಮತ್ತು ಸ್ಪರ್ಧಾತ್ಮಕ ಪರೀಕ್ಷೆಗಳ ಸಂಸ್ಥೆ ನಿರ್ದೇಶಕ ಜಿ.ತುಳಸಿದಾಸ್ ಮಾತನಾಡಿ, ಐಎಎಸ್, ಕೆಎಎಸ್ ಹಾಗೂ ಬ್ಯಾಂಕಿಂಗ್ ಪರೀಕ್ಷೆಗಳನ್ನು ಎದುರಿಸಲು ಈ ವಯಸ್ಸಿನಿಂದಲೇ ವಿದ್ಯಾರ್ಥಿಗಳು ನಿರ್ಣಯ ಕೈಗೊಳ್ಳಬೇಕು. ಅದಕ್ಕೆ ತಕ್ಕ ಅಭ್ಯಾಸ ನಡೆಸಬೇಕು ಎಂದು ಕಿವಿಮಾತು ಹೇಳಿದರು.</p>.<p>ಎಐಟಿ ಕಾಲೇಜು ಪ್ರಾಂಶುಪಾಲ ಸಿ.ಟಿ.ಜಯದೇವ್ ಅಧ್ಯಕ್ಷತೆ ವಹಿಸಿದ್ದರು. ಇದೇ ವೇಳೆ ವಿಜೇತ ತಂಡಗಳಿಗೆ ಬಹುಮಾನ ವಿತರಿಸಲಾಯಿತು.</p>.<p>ಕಾರ್ಯಕ್ರಮದಲ್ಲಿ ಎಐಟಿ ಆಡಳಿತ ಮಂಡಳಿ ಸದಸ್ಯ ಕೆ.ಮೋಹನ್, ವಿದ್ಯಾರ್ಥಿ ಕ್ಷೇಮಾಭಿವೃದ್ದಿ ಸಂಘದ ಸಂಗಾರೆಡ್ಡಿ, ಮೆಕ್ಯಾನಿಕಲ್ ವಿಭಾಗದ ಜಿ.ಎಂ.ಸತ್ಯನಾರಾಯಣ್, ಮಾಹಿತಿ ತಂತ್ರಜ್ಞಾನದ ಮುಖ್ಯಸ್ಥ ಸಂಪತ್, ಎನ್.ಡಿ.ದಿನೇಶ್, ಜಿ.ಆರ್.ವೀರೇಂದ್ರ, ಗೌತಮ್, ಪುಷ್ಪ, ಕಿರಣ್, ಮಲ್ಲಿಕಾರ್ಜುನ್ ಹಾಜರಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಚಿಕ್ಕಮಗಳೂರು:</strong> ಸಾಂಸ್ಕೃತಿಕ ಕಾರ್ಯಕ್ರಮಗಳಲ್ಲಿ ಸೋಲು-ಗೆಲುವು ಸಹಜ. ವಿದ್ಯಾರ್ಥಿಗಳು ಧೃತಿಗೆಡದೇ ಆತ್ಮವಿಶ್ವಾಸದಿಂದ ಮುಂದೆ ಸಾಗಬೇಕು. ಮುಂದಿನ ಯತ್ನಕ್ಕೆ ಕಟಿಬದ್ಧರಾಗಬೇಕು ಎಂದು ಮಂಡ್ಯ ಆದಿಚುಂಚನಗಿರಿ ವಿಶ್ವವಿದ್ಯಾಲಯದ ಕುಲಸಚಿವ ಸಿ.ಕೆ.ಸುಬ್ಬರಾಯ ಹೇಳಿದರು.</p>.<p>ನಗರದ ಎಐಟಿ ಕಾಲೇಜಿನಲ್ಲಿ ಶನಿವಾರ ನಡೆದ ಆದಿಚುಂಚನಗಿರಿ ತಾಂತ್ರಿಕ ಮಹಾವಿದ್ಯಾಲಯದ ವಿದ್ಯಾರ್ಥಿ ಸಾಂಸ್ಕೃತಿಕ ಹಬ್ಬದ ಚುಂಚನ–2025 ಕಾರ್ಯಕ್ರಮದ ಸಮಾರೋಪ ಸಮಾರಂಭದಲ್ಲಿ ಅವರು ಮಾತನಾಡಿದರು.</p>.<p>ಸ್ಪರ್ಧೆಗಳು ಸ್ನೇಹ ಮನೋಭಾವದಿಂದ ಕೂಡಿರಬೇಕು. ವಿಜೇತರು ಉದ್ರೇಕಕ್ಕೆ ಒಳಗಾಗದೇ ಸಮಾಧಾನ ವಹಿಸಬೇಕು. ಸೋತವರು ದ್ವೇಷಕ್ಕೆ ಎಡೆಮಾಡಿಕೊಡದೇ ಸ್ನೇಹತ್ವವನ್ನು ಹೊಂದಬೇಕು. ಸ್ಪರ್ಧೆಗಳು ಗೆಲುವಿಗಿಂತ, ಭಾಗವಹಿಸಿದ ಅನುಭವವನ್ನೇ ದೊಡ್ಡಗೆಲುವೆಂದು ಭಾವಿಸಬೇಕು ಎಂದು ತಿಳಿಸಿದರು.</p>.<p>ಅಂತಿಮ ವರ್ಷದ ಪರೀಕ್ಷೆಗಳನ್ನು ಎದುರಿಸಲು ಕಠಿಣ ಅಭ್ಯಾಸವಿರಬೇಕು. ಆ ನಿಟ್ಟಿನಲ್ಲಿ ಯುವಕ-ಯುವತಿಯರು ಓದಿನ ಕಡೆ ಗಮನಹರಿಸಬೇಕು ಎಂದರು.</p>.<p>ಐಎಎಸ್-ಕೆಎಎಸ್ ಮತ್ತು ಸ್ಪರ್ಧಾತ್ಮಕ ಪರೀಕ್ಷೆಗಳ ಸಂಸ್ಥೆ ನಿರ್ದೇಶಕ ಜಿ.ತುಳಸಿದಾಸ್ ಮಾತನಾಡಿ, ಐಎಎಸ್, ಕೆಎಎಸ್ ಹಾಗೂ ಬ್ಯಾಂಕಿಂಗ್ ಪರೀಕ್ಷೆಗಳನ್ನು ಎದುರಿಸಲು ಈ ವಯಸ್ಸಿನಿಂದಲೇ ವಿದ್ಯಾರ್ಥಿಗಳು ನಿರ್ಣಯ ಕೈಗೊಳ್ಳಬೇಕು. ಅದಕ್ಕೆ ತಕ್ಕ ಅಭ್ಯಾಸ ನಡೆಸಬೇಕು ಎಂದು ಕಿವಿಮಾತು ಹೇಳಿದರು.</p>.<p>ಎಐಟಿ ಕಾಲೇಜು ಪ್ರಾಂಶುಪಾಲ ಸಿ.ಟಿ.ಜಯದೇವ್ ಅಧ್ಯಕ್ಷತೆ ವಹಿಸಿದ್ದರು. ಇದೇ ವೇಳೆ ವಿಜೇತ ತಂಡಗಳಿಗೆ ಬಹುಮಾನ ವಿತರಿಸಲಾಯಿತು.</p>.<p>ಕಾರ್ಯಕ್ರಮದಲ್ಲಿ ಎಐಟಿ ಆಡಳಿತ ಮಂಡಳಿ ಸದಸ್ಯ ಕೆ.ಮೋಹನ್, ವಿದ್ಯಾರ್ಥಿ ಕ್ಷೇಮಾಭಿವೃದ್ದಿ ಸಂಘದ ಸಂಗಾರೆಡ್ಡಿ, ಮೆಕ್ಯಾನಿಕಲ್ ವಿಭಾಗದ ಜಿ.ಎಂ.ಸತ್ಯನಾರಾಯಣ್, ಮಾಹಿತಿ ತಂತ್ರಜ್ಞಾನದ ಮುಖ್ಯಸ್ಥ ಸಂಪತ್, ಎನ್.ಡಿ.ದಿನೇಶ್, ಜಿ.ಆರ್.ವೀರೇಂದ್ರ, ಗೌತಮ್, ಪುಷ್ಪ, ಕಿರಣ್, ಮಲ್ಲಿಕಾರ್ಜುನ್ ಹಾಜರಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>