<p><strong>ಮೂಡಿಗೆರೆ: </strong>ಪಟ್ಟಣದ ಡಿ.ಎಸ್. ಬಿಳೀಗೌಡ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನ ವಿದ್ಯಾರ್ಥಿಯೊಬ್ಬ ಸಾಮಾಜಿಕ ಜಾಲತಾಣದಲ್ಲಿ ಹರಿಬಿಡುವ ಸಲುವಾಗಿ ಕಾಲೇಜಿನ ಕಿಟಕಿಯನ್ನೇ ಒಡೆದಿರುವುದು ಸಾರ್ವಜನಿಕರ ಆಕ್ರೋಶಕ್ಕೆ ಕಾರಣವಾಗಿದೆ.</p>.<p>ಕಾಲೇಜಿನಲ್ಲಿ ದ್ವಿತೀಯ ಬಿ.ಎ. ಓದುತ್ತಿರುವ ವಿದ್ಯಾರ್ಥಿಯೊಬ್ಬ, ಸಾಮಾಜಿಕ ಜಾಲತಾಣದಲ್ಲಿ ಹರಿಬಿಡಲು ಕಾಲೇಜಿನ ಕಿಟಕಿ ಗಾಜನ್ನು ಸಿನಿಮೀಯ ರೀತಿಯಲ್ಲಿ, ಕೈಯ ಮುಷ್ಠಿಯಿಂದ ಗುದ್ದಿ ಒಡೆದಿದ್ದಾನೆ. ಈ ದೃಶ್ಯವನ್ನು ಮತ್ತೊಬ್ಬ ವಿದ್ಯಾರ್ಥಿ ಚಿತ್ರೀಕರಣ ಮಾಡಿಕೊಂಡಿದ್ದು, ಸಾಮಾಜಿಕ ಜಾಲತಾಣಕ್ಕೆ ಹರಿಬಿಟ್ಟಿದ್ದಾರೆ.</p>.<p>‘ಕಿಟಕಿ ಗಾಜು ಒಡೆದಿರುವ ವಿದ್ಯಾರ್ಥಿಯು, ಕಾಲೇಜಿಗೆ ಅಮಾವಾಸ್ಯೆ, ಹುಣ್ಣಿಮೆಗೆ ಬರುವ ವಿದ್ಯಾರ್ಥಿಯಾಗಿದ್ದು, ಆತನು ಕಿಟಕಿಯನ್ನು ಒಡೆದಿರುವ ದೃಶ್ಯವನ್ನು ವಿಡಿಯೊದಲ್ಲಿ ಗಮನಿಸಿದೆ. ಬಳಿಕ ಸಿಬ್ಬಂದಿ ಜತೆ ಚರ್ಚಿಸಿ ವಿದ್ಯಾರ್ಥಿಯ ಪೋಷಕರಿಗೆ ಮಾಹಿತಿಯನ್ನು ತಿಳಿಸಿ, ವಿದ್ಯಾರ್ಥಿಯನ್ನು ಕಾಲೇಜಿನಿಂದ ವಾರಗಳ ಕಾಲ ಅಮಾನತು ಮಾಡಲಾಗಿದೆ. ಈ ಕುರಿತು ಪೊಲೀಸರಿಗೂ ದೂರು ನೀಡಿ ಎಫ್ಐಆರ್ ದಾಖಲಿಸಲಾಗಿದೆ’ ಎಂದು ಕಾಲೇಜಿನ ಪ್ರಾಂಶುಪಾಲ ಬಸವರಾಜಪ್ಪ ತಿಳಿಸಿದರು.</p>.<p>ಕಿಟಕಿ ಗಾಜು ಒಡೆಯುವ ವಿಡಿಯೊ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದ್ದು, ಗಾಜನ್ನು ಒಡೆದ ಬಳಿಕ ವಿದ್ಯಾರ್ಥಿಯ ಮೂರೂ ಬೆರಳಿಗೆ ಗಾಯವಾಗಿ ರಕ್ತ ಜಿನುಗುತ್ತಿರುವ ದೃಶ್ಯವೂ ವಿಡಿಯೊದಲ್ಲಿದೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಮೂಡಿಗೆರೆ: </strong>ಪಟ್ಟಣದ ಡಿ.ಎಸ್. ಬಿಳೀಗೌಡ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನ ವಿದ್ಯಾರ್ಥಿಯೊಬ್ಬ ಸಾಮಾಜಿಕ ಜಾಲತಾಣದಲ್ಲಿ ಹರಿಬಿಡುವ ಸಲುವಾಗಿ ಕಾಲೇಜಿನ ಕಿಟಕಿಯನ್ನೇ ಒಡೆದಿರುವುದು ಸಾರ್ವಜನಿಕರ ಆಕ್ರೋಶಕ್ಕೆ ಕಾರಣವಾಗಿದೆ.</p>.<p>ಕಾಲೇಜಿನಲ್ಲಿ ದ್ವಿತೀಯ ಬಿ.ಎ. ಓದುತ್ತಿರುವ ವಿದ್ಯಾರ್ಥಿಯೊಬ್ಬ, ಸಾಮಾಜಿಕ ಜಾಲತಾಣದಲ್ಲಿ ಹರಿಬಿಡಲು ಕಾಲೇಜಿನ ಕಿಟಕಿ ಗಾಜನ್ನು ಸಿನಿಮೀಯ ರೀತಿಯಲ್ಲಿ, ಕೈಯ ಮುಷ್ಠಿಯಿಂದ ಗುದ್ದಿ ಒಡೆದಿದ್ದಾನೆ. ಈ ದೃಶ್ಯವನ್ನು ಮತ್ತೊಬ್ಬ ವಿದ್ಯಾರ್ಥಿ ಚಿತ್ರೀಕರಣ ಮಾಡಿಕೊಂಡಿದ್ದು, ಸಾಮಾಜಿಕ ಜಾಲತಾಣಕ್ಕೆ ಹರಿಬಿಟ್ಟಿದ್ದಾರೆ.</p>.<p>‘ಕಿಟಕಿ ಗಾಜು ಒಡೆದಿರುವ ವಿದ್ಯಾರ್ಥಿಯು, ಕಾಲೇಜಿಗೆ ಅಮಾವಾಸ್ಯೆ, ಹುಣ್ಣಿಮೆಗೆ ಬರುವ ವಿದ್ಯಾರ್ಥಿಯಾಗಿದ್ದು, ಆತನು ಕಿಟಕಿಯನ್ನು ಒಡೆದಿರುವ ದೃಶ್ಯವನ್ನು ವಿಡಿಯೊದಲ್ಲಿ ಗಮನಿಸಿದೆ. ಬಳಿಕ ಸಿಬ್ಬಂದಿ ಜತೆ ಚರ್ಚಿಸಿ ವಿದ್ಯಾರ್ಥಿಯ ಪೋಷಕರಿಗೆ ಮಾಹಿತಿಯನ್ನು ತಿಳಿಸಿ, ವಿದ್ಯಾರ್ಥಿಯನ್ನು ಕಾಲೇಜಿನಿಂದ ವಾರಗಳ ಕಾಲ ಅಮಾನತು ಮಾಡಲಾಗಿದೆ. ಈ ಕುರಿತು ಪೊಲೀಸರಿಗೂ ದೂರು ನೀಡಿ ಎಫ್ಐಆರ್ ದಾಖಲಿಸಲಾಗಿದೆ’ ಎಂದು ಕಾಲೇಜಿನ ಪ್ರಾಂಶುಪಾಲ ಬಸವರಾಜಪ್ಪ ತಿಳಿಸಿದರು.</p>.<p>ಕಿಟಕಿ ಗಾಜು ಒಡೆಯುವ ವಿಡಿಯೊ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದ್ದು, ಗಾಜನ್ನು ಒಡೆದ ಬಳಿಕ ವಿದ್ಯಾರ್ಥಿಯ ಮೂರೂ ಬೆರಳಿಗೆ ಗಾಯವಾಗಿ ರಕ್ತ ಜಿನುಗುತ್ತಿರುವ ದೃಶ್ಯವೂ ವಿಡಿಯೊದಲ್ಲಿದೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>