<p><strong>ಬಾಳೆಹೊನ್ನೂರು:</strong> ವಿದ್ಯಾರ್ಥಿಗಳು ಕನ್ನಡಾಭಿಮಾನ ಬೆಳೆಸಿಕೊಳ್ಳಬೇಕು. ಕನ್ನಡ ಉಳಿಸಿ ಬೆಳೆಸುವ ಮಹತ್ತರ ಜವಾಬ್ದಾರಿ ವಿದ್ಯಾರ್ಥಿಗಳ ಮೇಲಿದೆ ಎಂದು ತಾಲ್ಲೂಕು ಕನ್ನಡ ಸಾಹಿತ್ಯ ಪರಿಷತ್ ಅಧ್ಯಕ್ಷ ಪೂರ್ಣೇಶ್ ತಿಳಿಸಿದರು.</p>.<p>ಮೇಲ್ಪಾಲ್ ಸರ್ಕಾರಿ ಪ್ರೌಢಶಾಲೆಯಲ್ಲಿ ತಾಲ್ಲೂಕು ಕನ್ನಡ ಸಾಹಿತ್ಯ ಪರಿಷತ್ ವತಿಯಿಂದ ಆಯೋಜಿಸಿದ್ದ ಕನ್ನಡಾಧಿಪತಿ ಮಕ್ಕಳು ಎಂಬ ರಸಪ್ರಶ್ನೆ ಕಾರ್ಯಕ್ರಮ ಉದ್ಘಾಟಿಸಿ ಅವರು ಮಾತನಾಡಿದರು.</p>.<p>ಶಾಲೆಗಳಲ್ಲಿ ಪಠ್ಯದ ಜತೆಗೆ ರಸಪ್ರಶ್ನೆ, ಸಾಮಾನ್ಯ ಜ್ಞಾನ ಹಾಗೂ ಕೌಶಲಾಭಿವೃದ್ಧಿಯಂಥ ಕಾರ್ಯಕ್ರಮಗಳನ್ನು ಹಮ್ಮಿಕೊಂಡಾಗ ವಿದ್ಯಾರ್ಥಿಗಳು ಜ್ಞಾನವಂತರಾಗುತ್ತಾರೆ ಎಂದರು.</p>.<p>ಹೋಬಳಿ ಕನ್ನಡ ಸಾಹಿತ್ಯ ಪರಿಷತ್ ಅಧ್ಯಕ್ಷ ಕಾರ್ತಿಕ್ ಕಾರ್ಗದ್ದೆ ಮಾತನಾಡಿ, ನಾಡಗೀತೆಗೆ ನೂರು ವರ್ಷ ತುಂಬಿದ ಕಾರಣ ಶಾಲಾ ಕಾಲೇಜುಗಳಲ್ಲಿ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳಲಾಗುವುದು. ಕನ್ನಡದ ಉಳಿವಿಗಾಗಿ ಸಾಹಿತ್ಯ ಪರಿಷತ್ತು ದತ್ತಿ ಉಪನ್ಯಾಸ, ಸಾಹಿತ್ಯ ಸಮ್ಮೇಳನದಂಥ ವಿಶೇಷ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳುತ್ತಿದೆ ಎಂದರು.</p>.<p>ಶಾಲೆಯ ಅಭಿವೃದ್ದಿಗೆ ವಿಶೇಷ ಕೊಡುಗೆ ನೀಡಿದ ಮುಖ್ಯಶಿಕ್ಷಕ ಎಚ್.ವಿ.ಸುರೇಶ್ ಅವರನ್ನು ಗೌರವಿಸಲಾಯಿತು. ರಸಪ್ರಶ್ನೆಯಲ್ಲಿ ವಿಜೇತರಾದ ಅನಿಶ್, ನಿಶಾಂತ್, ಆತ್ಮಿಕ, ಸುಜಯ್ ಅವರಿಗೆ ‘ಕನ್ನಡಾಧಿಪತಿ ಮಕ್ಕಳು’ ಎಂಬ ಬಿರುದಿನ ಜೊತೆಗೆ ಬಹುಮಾನ ವಿತರಿಸಲಾಯಿತು.</p>.<p>ನೌಕರರ ಸಂಘದ ಅಧ್ಯಕ್ಷ ರಾಘವೇಂದ್ರ, ಶಿಕ್ಷಕ ವಿಶ್ವನಾಥ್ ರಾಮಣ್ಣನವರ್, ರೇಖಾಗಣಿ, ವೆಂಕಟೇಶ್ ಮೂರ್ತಿ, ಶಾಲಾಭಿವೃದ್ಧಿ ಮತ್ತು ಮೇಲುಸ್ತುವಾರಿ ಸಮಿತಿ ಅಧ್ಯಕ್ಷೆ ಮಮತಾ ಭಾಗವಹಿಸಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಬಾಳೆಹೊನ್ನೂರು:</strong> ವಿದ್ಯಾರ್ಥಿಗಳು ಕನ್ನಡಾಭಿಮಾನ ಬೆಳೆಸಿಕೊಳ್ಳಬೇಕು. ಕನ್ನಡ ಉಳಿಸಿ ಬೆಳೆಸುವ ಮಹತ್ತರ ಜವಾಬ್ದಾರಿ ವಿದ್ಯಾರ್ಥಿಗಳ ಮೇಲಿದೆ ಎಂದು ತಾಲ್ಲೂಕು ಕನ್ನಡ ಸಾಹಿತ್ಯ ಪರಿಷತ್ ಅಧ್ಯಕ್ಷ ಪೂರ್ಣೇಶ್ ತಿಳಿಸಿದರು.</p>.<p>ಮೇಲ್ಪಾಲ್ ಸರ್ಕಾರಿ ಪ್ರೌಢಶಾಲೆಯಲ್ಲಿ ತಾಲ್ಲೂಕು ಕನ್ನಡ ಸಾಹಿತ್ಯ ಪರಿಷತ್ ವತಿಯಿಂದ ಆಯೋಜಿಸಿದ್ದ ಕನ್ನಡಾಧಿಪತಿ ಮಕ್ಕಳು ಎಂಬ ರಸಪ್ರಶ್ನೆ ಕಾರ್ಯಕ್ರಮ ಉದ್ಘಾಟಿಸಿ ಅವರು ಮಾತನಾಡಿದರು.</p>.<p>ಶಾಲೆಗಳಲ್ಲಿ ಪಠ್ಯದ ಜತೆಗೆ ರಸಪ್ರಶ್ನೆ, ಸಾಮಾನ್ಯ ಜ್ಞಾನ ಹಾಗೂ ಕೌಶಲಾಭಿವೃದ್ಧಿಯಂಥ ಕಾರ್ಯಕ್ರಮಗಳನ್ನು ಹಮ್ಮಿಕೊಂಡಾಗ ವಿದ್ಯಾರ್ಥಿಗಳು ಜ್ಞಾನವಂತರಾಗುತ್ತಾರೆ ಎಂದರು.</p>.<p>ಹೋಬಳಿ ಕನ್ನಡ ಸಾಹಿತ್ಯ ಪರಿಷತ್ ಅಧ್ಯಕ್ಷ ಕಾರ್ತಿಕ್ ಕಾರ್ಗದ್ದೆ ಮಾತನಾಡಿ, ನಾಡಗೀತೆಗೆ ನೂರು ವರ್ಷ ತುಂಬಿದ ಕಾರಣ ಶಾಲಾ ಕಾಲೇಜುಗಳಲ್ಲಿ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳಲಾಗುವುದು. ಕನ್ನಡದ ಉಳಿವಿಗಾಗಿ ಸಾಹಿತ್ಯ ಪರಿಷತ್ತು ದತ್ತಿ ಉಪನ್ಯಾಸ, ಸಾಹಿತ್ಯ ಸಮ್ಮೇಳನದಂಥ ವಿಶೇಷ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳುತ್ತಿದೆ ಎಂದರು.</p>.<p>ಶಾಲೆಯ ಅಭಿವೃದ್ದಿಗೆ ವಿಶೇಷ ಕೊಡುಗೆ ನೀಡಿದ ಮುಖ್ಯಶಿಕ್ಷಕ ಎಚ್.ವಿ.ಸುರೇಶ್ ಅವರನ್ನು ಗೌರವಿಸಲಾಯಿತು. ರಸಪ್ರಶ್ನೆಯಲ್ಲಿ ವಿಜೇತರಾದ ಅನಿಶ್, ನಿಶಾಂತ್, ಆತ್ಮಿಕ, ಸುಜಯ್ ಅವರಿಗೆ ‘ಕನ್ನಡಾಧಿಪತಿ ಮಕ್ಕಳು’ ಎಂಬ ಬಿರುದಿನ ಜೊತೆಗೆ ಬಹುಮಾನ ವಿತರಿಸಲಾಯಿತು.</p>.<p>ನೌಕರರ ಸಂಘದ ಅಧ್ಯಕ್ಷ ರಾಘವೇಂದ್ರ, ಶಿಕ್ಷಕ ವಿಶ್ವನಾಥ್ ರಾಮಣ್ಣನವರ್, ರೇಖಾಗಣಿ, ವೆಂಕಟೇಶ್ ಮೂರ್ತಿ, ಶಾಲಾಭಿವೃದ್ಧಿ ಮತ್ತು ಮೇಲುಸ್ತುವಾರಿ ಸಮಿತಿ ಅಧ್ಯಕ್ಷೆ ಮಮತಾ ಭಾಗವಹಿಸಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>