ಚಿಕ್ಕಮಗಳೂರು: ನಗರದ ಜಿಲ್ಲಾ ಕಾರಾಗೃಹದಲ್ಲಿ ಆರೋಪಿ ಸತೀಶ ಭಾನುವಾರ ರಾತ್ರಿ ಆತ್ಮ ಹತ್ಯೆಗೆ ಯತ್ನಿಸಿದ್ದಾನೆ. ರಾತ್ರಿ 11.30ರವೇಳೆಗೆ ವುಲ್ಲನ್ ಸ್ವೆಟರ್ ಮತ್ತು ಟೊಪ್ಪಿಯಿಂದ ಆತ್ಮಹತ್ಯೆಗೆ ಯತ್ನಿಸಿದ್ದಾನೆ.
ಕಾರಾಗೃಹ ಸಿಬ್ಬಂದಿ ಆತನನ್ನು ಜಿಲ್ಲಾಸ್ಪತ್ರೆಯಲ್ಲಿ ಪ್ರಥಮ ಚಿಕಿತ್ಸೆ ಕೊಡಿಸಿ, ಹೆಚ್ಚಿನ ಚಿಕಿತ್ಸೆಗಾಗಿ ಹಾಸನ ಜಿಲ್ಲಾಸ್ಪತ್ರೆಗೆ ಕರೆದೊಯ್ಯಲಾಗಿತ್ತು. ವೈದ್ಯರ ಶಿಫಾರಸಿನಂತೆ ಸತೀಶನನ್ನು ಬೆಂಗಳೂರಿನ ನಿಮ್ಹಾನ್ಸ್ ಆಸ್ಪತ್ರೆಗೆ ಸೋಮವಾರ ದಾಖಲು ಮಾಡಲಾಗಿದೆ.
ಹೆಂಡತಿ ತಲೆ ಕಡಿದು, ಅಜ್ಜಂಪುರ ಪೊಲೀಸ್ ಠಾಣೆಗೆ ಚೀಲದಲ್ಲಿ ತಂದು ಸತೀಶ ಶರಣಗಾತನಾಗಿದ್ದ. ಆ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿತ್ತು.