<p><strong>ಕೊಪ್ಪ</strong>: ‘ಶೃಂಗೇರಿ ಕ್ಷೇತ್ರದಲ್ಲಿ ಅಭಿವೃದ್ಧಿ ಸಂಪೂರ್ಣ ಕುಂಠಿತವಾಗಿದೆ’ ಎಂದು ರಾಜ್ಯ ಜೆಡಿಎಸ್ ಘಟಕದ ಉಪಾಧ್ಯಕ್ಷ ಸುಧಾಕರ ಎಸ್.ಶೆಟ್ಟಿ ದೂರಿದರು.</p>.<p>ಶನಿವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ‘ರಾಜ್ಯದಲ್ಲಿ ಕಾಂಗ್ರೆಸ್ ಮನೆಯೊಂದು 5 ಬಾಗಿಲು ಆಗಿದೆ. ಲಿಂಗಾಯತರ ಬಾಗಿಲು, ಉಪ ಮುಖ್ಯಮಂತ್ರಿ ಬಾಗಿಲು, ಮುಖ್ಯಮಂತ್ರಿಗಳ ಹಿಂದುಳಿದ ವರ್ಗಗಳ ಬಾಗಿಲು, ದಲಿತರ ಬಾಗಿಲು, ಅಲ್ಪ ಸಂಖ್ಯಾತರ ಬಾಗಿಲು ಇದೆ’ ಎಂದರು.</p>.<p>‘ರಾಜ್ಯದಲ್ಲಿ ಸರ್ಕಾರದಿಂದ ಅಭಿವೃದ್ಧಿ ಕೆಲಸಗಳಿಗೆ ಹಣಕಾಸು ಸಂಪೂರ್ಣ ನಿಲ್ಲಿಸಿ ಬಿಟ್ಟಿದೆ, ಮೂಲಸೌಕರ್ಯ ಒದಗಿಸಲು ವಿಫಲವಾಗಿದೆ. ಅಭಿವೃದ್ಧಿ ಕುಂಠಿತವಾಗಿದೆ, ವಿಶೇಷವಾಗಿ ಶೃಂಗೇರಿ ಕ್ಷೇತ್ರ’ ಎಂದು ದೂರಿದರು.</p>.<p>‘ಕ್ಷೇತ್ರದ ಶಾಸಕರು ಈ ಹಿಂದಿನ ಅವಧಿಯಲ್ಲಿ ಮುಖ್ಯಮಂತ್ರಿ ರಾಜಕೀಯ ಕಾರ್ಯದರ್ಶಿ ನನಗೆ ಕೆಲಸ ಮಾಡಲು ಬಿಡುತ್ತಿಲ್ಲ ಎಂದು ದೂರುತ್ತಿದ್ದರು. ಈಗ ರಾಜ್ಯದಲ್ಲಿ ಅವರದೇ ಪಕ್ಷದ ಬಹುಮತದ ಸರ್ಕಾರ ಇದೆ, ಅಧಿಕಾರಕ್ಕೆ ಬಂದು 5 ತಿಂಗಳು ಕಳೆದಿವೆ ಇನ್ನೂ ಒಂದೇ ಒಂದು ರಸ್ತೆಗೆ ಹಣ ಬಿಡುಗಡೆ ಮಾಡಿಲ್ಲ’ ಎಂದು ಟೀಕಿಸಿದರು.</p>.<p>‘ಅಗಳಗಂಡಿ, ಶೃಂಗೇರಿ, ಹೆಗ್ಗಾರುಕೊಡಿಗೆ ಭಾಗದಲ್ಲಿ ರಸ್ತೆ ಸೌಲಭ್ಯವಿಲ್ಲದಾಗಿದೆ. ಅರಣ್ಯ ಮತ್ತು ಕಂದಾಯ ಇಲಾಖೆ ಬಡವರನ್ನು ಶೋಷಣೆಗೆ ಒಳಪಡಿಸುತ್ತಿದೆ, ಕಾಂಗ್ರೆಸ್ ಅವಧಿಯಲ್ಲಿ ಬಡವರ ಮೇಲೆ ದಬ್ಬಾಳಿಕೆ ಹೆಚ್ಚಾಗಿದೆ. ಶಾಸಕರು ಕಾರ್ಯಕ್ರಮಗಳಿಗೆ ಸೀಮಿತವಾಗದೇ ಅಭಿವೃದ್ಧಿ ಕೆಲಸದತ್ತ ಮುಖ ಮಾಡಬೇಕು’ ಎಂದು ಹೇಳಿದರು.</p>.<p>ರಾಜ್ಯ ಜೆಡಿಎಸ್ ಮುಖಂಡ ಎಚ್.ಜಿ.ವೆಂಕಟೇಶ್, ಕ್ಷೇತ್ರ ಘಟಕದ ಅಧ್ಯಕ್ಷ ಭಂಡಿಗಡಿ ದಿವಾಕರ ಭಟ್, ನಗರ ಘಟಕದ ಅಧ್ಯಕ್ಷ ಫ್ರಾನ್ಸಿಸ್ ಕಾರ್ಡೋಜ ಮುಂತಾದವರು ಇದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಕೊಪ್ಪ</strong>: ‘ಶೃಂಗೇರಿ ಕ್ಷೇತ್ರದಲ್ಲಿ ಅಭಿವೃದ್ಧಿ ಸಂಪೂರ್ಣ ಕುಂಠಿತವಾಗಿದೆ’ ಎಂದು ರಾಜ್ಯ ಜೆಡಿಎಸ್ ಘಟಕದ ಉಪಾಧ್ಯಕ್ಷ ಸುಧಾಕರ ಎಸ್.ಶೆಟ್ಟಿ ದೂರಿದರು.</p>.<p>ಶನಿವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ‘ರಾಜ್ಯದಲ್ಲಿ ಕಾಂಗ್ರೆಸ್ ಮನೆಯೊಂದು 5 ಬಾಗಿಲು ಆಗಿದೆ. ಲಿಂಗಾಯತರ ಬಾಗಿಲು, ಉಪ ಮುಖ್ಯಮಂತ್ರಿ ಬಾಗಿಲು, ಮುಖ್ಯಮಂತ್ರಿಗಳ ಹಿಂದುಳಿದ ವರ್ಗಗಳ ಬಾಗಿಲು, ದಲಿತರ ಬಾಗಿಲು, ಅಲ್ಪ ಸಂಖ್ಯಾತರ ಬಾಗಿಲು ಇದೆ’ ಎಂದರು.</p>.<p>‘ರಾಜ್ಯದಲ್ಲಿ ಸರ್ಕಾರದಿಂದ ಅಭಿವೃದ್ಧಿ ಕೆಲಸಗಳಿಗೆ ಹಣಕಾಸು ಸಂಪೂರ್ಣ ನಿಲ್ಲಿಸಿ ಬಿಟ್ಟಿದೆ, ಮೂಲಸೌಕರ್ಯ ಒದಗಿಸಲು ವಿಫಲವಾಗಿದೆ. ಅಭಿವೃದ್ಧಿ ಕುಂಠಿತವಾಗಿದೆ, ವಿಶೇಷವಾಗಿ ಶೃಂಗೇರಿ ಕ್ಷೇತ್ರ’ ಎಂದು ದೂರಿದರು.</p>.<p>‘ಕ್ಷೇತ್ರದ ಶಾಸಕರು ಈ ಹಿಂದಿನ ಅವಧಿಯಲ್ಲಿ ಮುಖ್ಯಮಂತ್ರಿ ರಾಜಕೀಯ ಕಾರ್ಯದರ್ಶಿ ನನಗೆ ಕೆಲಸ ಮಾಡಲು ಬಿಡುತ್ತಿಲ್ಲ ಎಂದು ದೂರುತ್ತಿದ್ದರು. ಈಗ ರಾಜ್ಯದಲ್ಲಿ ಅವರದೇ ಪಕ್ಷದ ಬಹುಮತದ ಸರ್ಕಾರ ಇದೆ, ಅಧಿಕಾರಕ್ಕೆ ಬಂದು 5 ತಿಂಗಳು ಕಳೆದಿವೆ ಇನ್ನೂ ಒಂದೇ ಒಂದು ರಸ್ತೆಗೆ ಹಣ ಬಿಡುಗಡೆ ಮಾಡಿಲ್ಲ’ ಎಂದು ಟೀಕಿಸಿದರು.</p>.<p>‘ಅಗಳಗಂಡಿ, ಶೃಂಗೇರಿ, ಹೆಗ್ಗಾರುಕೊಡಿಗೆ ಭಾಗದಲ್ಲಿ ರಸ್ತೆ ಸೌಲಭ್ಯವಿಲ್ಲದಾಗಿದೆ. ಅರಣ್ಯ ಮತ್ತು ಕಂದಾಯ ಇಲಾಖೆ ಬಡವರನ್ನು ಶೋಷಣೆಗೆ ಒಳಪಡಿಸುತ್ತಿದೆ, ಕಾಂಗ್ರೆಸ್ ಅವಧಿಯಲ್ಲಿ ಬಡವರ ಮೇಲೆ ದಬ್ಬಾಳಿಕೆ ಹೆಚ್ಚಾಗಿದೆ. ಶಾಸಕರು ಕಾರ್ಯಕ್ರಮಗಳಿಗೆ ಸೀಮಿತವಾಗದೇ ಅಭಿವೃದ್ಧಿ ಕೆಲಸದತ್ತ ಮುಖ ಮಾಡಬೇಕು’ ಎಂದು ಹೇಳಿದರು.</p>.<p>ರಾಜ್ಯ ಜೆಡಿಎಸ್ ಮುಖಂಡ ಎಚ್.ಜಿ.ವೆಂಕಟೇಶ್, ಕ್ಷೇತ್ರ ಘಟಕದ ಅಧ್ಯಕ್ಷ ಭಂಡಿಗಡಿ ದಿವಾಕರ ಭಟ್, ನಗರ ಘಟಕದ ಅಧ್ಯಕ್ಷ ಫ್ರಾನ್ಸಿಸ್ ಕಾರ್ಡೋಜ ಮುಂತಾದವರು ಇದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>