<p>ಕೊಪ್ಪ: ‘ಅತಿವೃಷ್ಟಿ, ನಿರುದ್ಯೋಗ, ಅಡಿಕೆ ಹಳದಿಎಲೆ ರೋಗ, ಎಲೆಚುಕ್ಕಿ ರೋಗ ಮುಂತಾದ ಸಮಸ್ಯೆಗಳು ಕ್ಷೇತ್ರದ ಜನರನ್ನು, ರೈತಾಪಿ ವರ್ಗವನ್ನು ಹೈರಾಣಾಗಿಸಿವೆ. ಸಮಸ್ಯೆಗೆ ಪರಿಹಾರ ದೊರಕಿಸಿಕೊಡಬೇಕಾದ ಸರ್ಕಾರ, ವಿರೋಧ ಪಕ್ಷಗಳನ್ನು ಟೀಕಿಸುವು ದರಲ್ಲೇ ಕಾಲ ಕಳೆಯುತ್ತಿದೆ’ ಎಂದು ಜೆಡಿಎಸ್ ರಾಜ್ಯ ಘಟಕದ ಉಪಾಧ್ಯಕ್ಷ ಸುಧಾಕರ ಎಸ್.ಶೆಟ್ಟಿ ಹೇಳಿದರು.</p>.<p>ಶುಕ್ರವಾರ ಸುದ್ದಿಗೋಷ್ಠಿಯಲ್ಲಿ ಅವರು ಮಾತನಾಡಿ, ‘ಯಾವುದೋ ಸುಧಾಕರ ಶೆಟ್ಟಿ ಎಂಬ ವ್ಯಕ್ತಿ ಹೆಸರಿನ ಜತೆಗೆ ಜೆಡಿಎಸ್ ಅನ್ನು ತಳುಕುಹಾಕಿ ಬಿಜೆಪಿಯವರು ಸಾಮಾಜಿಕ ಜಾಲತಾಣ ದಲ್ಲಿ ಹರಿಬಿಟ್ಟು ನನ್ನನ್ನು ತೇಜೋವಧೆ ಮಾಡುತ್ತಿದ್ದಾರೆ. ಈ ಮೂಲಕ ರಾಜ ಕೀಯ ಲಾಭ ಗಳಿಸಬಹುದು ಎಂದು ಕೊಂಡಿದ್ದರೆ ಅದು ತಪ್ಪು’ ಎಂದರು.</p>.<p>‘ಅಡಿಕೆಗೆ ಹಳದಿ ಎಲೆರೋಗ, ಎಲೆಚುಕ್ಕಿ ರೋಗ ಬಾಧಿಸಿದೆ. ಸಂಶೋಧನಾ ಕೇಂದ್ರವನ್ನು ಕೊಪ್ಪದಲ್ಲಿ ತೆರೆಯಬೇಕು. ಅತಿವೃಷ್ಟಿಯಿಂದ ರಸ್ತೆ, ಮನೆಗಳಿಗೆ ಹಾನಿಯಾಗಿದೆ. ಶೇ 10ರಷ್ಟು ಮನೆಗಳಿಗೆ ಮಾತ್ರ ಪರಿಹಾರ ಸಿಕ್ಕಿದೆ, ಬಾಕಿ ಮನೆಗಳಿಗೆ ದಾಖಲೆಯಿಲ್ಲವೆಂದು ಪರಿಹಾರ ನೀಡಿಲ್ಲ, ಬಡವರಿಗೆ ಸಮಸ್ಯೆಯಾಗಿದೆ. ರಸ್ತೆಹಾನಿಯಿಂದಾಗಿ ₹ 100 ಕೋಟಿಗೂ ಅಧಿಕ ನಷ್ಟವಾಗಿದೆ. ಸರ್ಕಾರ ನೀಡಿದ ಅನುದಾನ ಸಾಕಾಗುವುದಿಲ್ಲ. ಆಡಳಿತ ನಡೆಸುವವರು ಇದರ ಬಗ್ಗೆ ಗಮನ ಹರಿಸಬೇಕು’ ಎಂದರು.</p>.<p>‘ಶೃಂಗೇರಿ, ಬಾಳೆಹೊನ್ನೂರಿನಲ್ಲಿ ಸುಸಜ್ಜಿತ ಆಸ್ಪತ್ರೆಗೆ ಬೇಡಿಕೆ ಇಟ್ಟು ಪ್ರತಿಭಟಿಸಿದ್ದರೂ ಈವರೆಗೆ ಈಡೇರಿಲ್ಲ. ಗುಣಮಟ್ಟದ ಚಿಕಿತ್ಸೆ ಸಿಗದೇ ಬಡವರು ಪರದಾಡು ತ್ತಿದ್ದಾರೆ. ಮುಖ್ಯಮಂತ್ರಿ ರಾಜಕೀಯ ಕಾರ್ಯದರ್ಶಿ ಜೀವರಾಜ್, ಶಾಸಕ ರಾಜೇಗೌಡ ಅವರು ಅಭಿವೃದ್ಧಿಗೆ ಒತ್ತುಕೊಡಬೇಕು’ ಎಂದು ಹೇಳಿದರು.</p>.<p>ಕ್ಷೇತ್ರ ಜೆಡಿಎಸ್ ಘಟಕದ ಅಧ್ಯಕ್ಷ ಭಂಡಿಗಡಿ ದಿವಾಕರ ಭಟ್, ತಾಲ್ಲೂಕು ಘಟಕದ ಅಧ್ಯಕ್ಷ ಕಗ್ಗಾ ರಾಮಸ್ವಾಮಿ, ಶಿವಕರ ಶೆಟ್ಟಿ, ವಾಸಪ್ಪ ಕುಂಚೂರು, ವಾಸುದೇವ, ವಿನಯ್ ಕಣಿವೆ, ಎಚ್.ಆರ್.ಆನಂದ, ಫ್ರಾನ್ಸಿಸ್ ಕಾರ್ಡೋಜ, ಸುರೇಶ್ ಶೆಟ್ಟಿ, ಈ.ನಾಗೇಂದ್ರ ಇದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p>ಕೊಪ್ಪ: ‘ಅತಿವೃಷ್ಟಿ, ನಿರುದ್ಯೋಗ, ಅಡಿಕೆ ಹಳದಿಎಲೆ ರೋಗ, ಎಲೆಚುಕ್ಕಿ ರೋಗ ಮುಂತಾದ ಸಮಸ್ಯೆಗಳು ಕ್ಷೇತ್ರದ ಜನರನ್ನು, ರೈತಾಪಿ ವರ್ಗವನ್ನು ಹೈರಾಣಾಗಿಸಿವೆ. ಸಮಸ್ಯೆಗೆ ಪರಿಹಾರ ದೊರಕಿಸಿಕೊಡಬೇಕಾದ ಸರ್ಕಾರ, ವಿರೋಧ ಪಕ್ಷಗಳನ್ನು ಟೀಕಿಸುವು ದರಲ್ಲೇ ಕಾಲ ಕಳೆಯುತ್ತಿದೆ’ ಎಂದು ಜೆಡಿಎಸ್ ರಾಜ್ಯ ಘಟಕದ ಉಪಾಧ್ಯಕ್ಷ ಸುಧಾಕರ ಎಸ್.ಶೆಟ್ಟಿ ಹೇಳಿದರು.</p>.<p>ಶುಕ್ರವಾರ ಸುದ್ದಿಗೋಷ್ಠಿಯಲ್ಲಿ ಅವರು ಮಾತನಾಡಿ, ‘ಯಾವುದೋ ಸುಧಾಕರ ಶೆಟ್ಟಿ ಎಂಬ ವ್ಯಕ್ತಿ ಹೆಸರಿನ ಜತೆಗೆ ಜೆಡಿಎಸ್ ಅನ್ನು ತಳುಕುಹಾಕಿ ಬಿಜೆಪಿಯವರು ಸಾಮಾಜಿಕ ಜಾಲತಾಣ ದಲ್ಲಿ ಹರಿಬಿಟ್ಟು ನನ್ನನ್ನು ತೇಜೋವಧೆ ಮಾಡುತ್ತಿದ್ದಾರೆ. ಈ ಮೂಲಕ ರಾಜ ಕೀಯ ಲಾಭ ಗಳಿಸಬಹುದು ಎಂದು ಕೊಂಡಿದ್ದರೆ ಅದು ತಪ್ಪು’ ಎಂದರು.</p>.<p>‘ಅಡಿಕೆಗೆ ಹಳದಿ ಎಲೆರೋಗ, ಎಲೆಚುಕ್ಕಿ ರೋಗ ಬಾಧಿಸಿದೆ. ಸಂಶೋಧನಾ ಕೇಂದ್ರವನ್ನು ಕೊಪ್ಪದಲ್ಲಿ ತೆರೆಯಬೇಕು. ಅತಿವೃಷ್ಟಿಯಿಂದ ರಸ್ತೆ, ಮನೆಗಳಿಗೆ ಹಾನಿಯಾಗಿದೆ. ಶೇ 10ರಷ್ಟು ಮನೆಗಳಿಗೆ ಮಾತ್ರ ಪರಿಹಾರ ಸಿಕ್ಕಿದೆ, ಬಾಕಿ ಮನೆಗಳಿಗೆ ದಾಖಲೆಯಿಲ್ಲವೆಂದು ಪರಿಹಾರ ನೀಡಿಲ್ಲ, ಬಡವರಿಗೆ ಸಮಸ್ಯೆಯಾಗಿದೆ. ರಸ್ತೆಹಾನಿಯಿಂದಾಗಿ ₹ 100 ಕೋಟಿಗೂ ಅಧಿಕ ನಷ್ಟವಾಗಿದೆ. ಸರ್ಕಾರ ನೀಡಿದ ಅನುದಾನ ಸಾಕಾಗುವುದಿಲ್ಲ. ಆಡಳಿತ ನಡೆಸುವವರು ಇದರ ಬಗ್ಗೆ ಗಮನ ಹರಿಸಬೇಕು’ ಎಂದರು.</p>.<p>‘ಶೃಂಗೇರಿ, ಬಾಳೆಹೊನ್ನೂರಿನಲ್ಲಿ ಸುಸಜ್ಜಿತ ಆಸ್ಪತ್ರೆಗೆ ಬೇಡಿಕೆ ಇಟ್ಟು ಪ್ರತಿಭಟಿಸಿದ್ದರೂ ಈವರೆಗೆ ಈಡೇರಿಲ್ಲ. ಗುಣಮಟ್ಟದ ಚಿಕಿತ್ಸೆ ಸಿಗದೇ ಬಡವರು ಪರದಾಡು ತ್ತಿದ್ದಾರೆ. ಮುಖ್ಯಮಂತ್ರಿ ರಾಜಕೀಯ ಕಾರ್ಯದರ್ಶಿ ಜೀವರಾಜ್, ಶಾಸಕ ರಾಜೇಗೌಡ ಅವರು ಅಭಿವೃದ್ಧಿಗೆ ಒತ್ತುಕೊಡಬೇಕು’ ಎಂದು ಹೇಳಿದರು.</p>.<p>ಕ್ಷೇತ್ರ ಜೆಡಿಎಸ್ ಘಟಕದ ಅಧ್ಯಕ್ಷ ಭಂಡಿಗಡಿ ದಿವಾಕರ ಭಟ್, ತಾಲ್ಲೂಕು ಘಟಕದ ಅಧ್ಯಕ್ಷ ಕಗ್ಗಾ ರಾಮಸ್ವಾಮಿ, ಶಿವಕರ ಶೆಟ್ಟಿ, ವಾಸಪ್ಪ ಕುಂಚೂರು, ವಾಸುದೇವ, ವಿನಯ್ ಕಣಿವೆ, ಎಚ್.ಆರ್.ಆನಂದ, ಫ್ರಾನ್ಸಿಸ್ ಕಾರ್ಡೋಜ, ಸುರೇಶ್ ಶೆಟ್ಟಿ, ಈ.ನಾಗೇಂದ್ರ ಇದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>