<p><strong>ಚಿಕ್ಕಮಗಳೂರು: </strong>ಕನ್ನಡ ಸಾಹಿತ್ಯಪರಿಷತ್ತಿನ(ಕಸಾಪ) ಜಿಲ್ಲಾಘಟಕ, ಕುಂಭಕ ಸಾಂಸ್ಕೃತಿಕ ಪ್ರತಿಷ್ಠಾನ ಸಹಯೋಗದಲ್ಲಿ ತಾಲ್ಲೂಕಿನ ಮಳಲೂರಿನಲ್ಲಿ ಆಯೋಜಿಸಿದ್ದ ‘ಸುಗ್ಗಿ ಕುಣಿತ’ ಸ್ಪರ್ಧೆ ಹಾಗೂ ಜಾನಪದ ಕಲಾಪ್ರದರ್ಶನ ಭಾನುವಾರ ಸಂಭ್ರಮದಿಂದ ಜರುಗಿತು.</p>.<p>ಗ್ರಾಮದಲ್ಲಿ ಹಬ್ಬದ ವಾತಾವರಣ ನಿರ್ಮಾಣವಾಗಿತ್ತು. ಮೂಡಿಗೆರೆ ಶಾಸಕ ಎಂ.ಪಿ.ಕುಮಾರಸ್ವಾಮಿ ಅವರು ಜಾನಪದವಾದ್ಯವನ್ನು ಸಾಂಕೇತಿಕವಾಗಿ ನುಡಿಸುವ ಮೂಲಕ ಸ್ಪರ್ಧೆಗೆ ಚಾಲನೆ ನೀಡಿದರು.</p>.<p>ಸುಗ್ಗಿ ಕುಣಿತ ಆರಂಭವಾಗುತ್ತಿದ್ದಂತೆ ವೇದಿಕೆ ಬಳಿ ಜನಜಾತ್ರೆ ನೆರೆಯಿತು. ಗ್ರಾಮೀಣ ವಾದ್ಯಗಳ ನಿನಾದಕ್ಕೆ, ಪುರುಷರು, ಮಹಿಳೆಯರು, ಮಕ್ಕಳು, ವೃದ್ದರು ಕುಣಿದು ಕುಪ್ಪಳಿಸಿದರು.</p>.<p>ವಿಧಾನ ಪರಿಷತ್ತಿನ ಸದಸ್ಯ ಎಂ.ಕೆ.ಪ್ರಾಣೇಶ್ ಮಾತನಾಡಿ, ಗ್ರಾಮೀಣ ಜನರ ಬದುಕಿನಲ್ಲಿ ಜಾನಪದ ಸಂಸ್ಕೃತಿ ಹಾಸುಹೊಕ್ಕಾಗಿದೆ. ಜಾನಪದ ಕಲೆಗಳು ನಶಿಸಲು ಬಿಡಬಾರದು. ಜಾನಪದ ಕಲಾವಿದರಿಗೆ ಪ್ರೋತ್ಸಾಹಿಸಬೇಕು. ದೇಸಿ ಸಂಸ್ಕೃತಿ ಉಳಿಸಬೇಕು ಎಂದರು.</p>.<p>ಜಾನಪದ ಪರಿಷತ್ತಿನ ರಾಜ್ಯಘಟಕದ ಅಧ್ಯಕ್ಷ ಟಿ.ತಿಮ್ಮೇಗೌಡ ಮಾತನಾಡಿ, ಜಾನಪದ ಕಲೆ ಸಂಸ್ಕೃತಿ ಪ್ರತೀಕವಾಗಿದೆ. ಅದನ್ನು ಯುವಪೀಳಿಗೆ ಮುಂದುವರಿಸಬೇಕು ಎಂದರು.</p>.<p>ಕನ್ನಡ ಸಾಹಿತ್ಯ ಪರಿಷತ್ತಿನ ಜಿಲ್ಲಾಘಟಕದ ಅಧ್ಯಕ್ಷ ಕುಂದೂರು ಅಶೋಕ್ ‘ಪ್ರಜಾವಾಣಿ’ ಜೊತೆ ಮಾತನಾಡಿ, ಪ್ರಚಾರ ಕಡಿಮೆ ಇದ್ದರೂ ಸಹ, ಸುತ್ತಲ ಹಳ್ಳಿಗಳ ಜನರು ಸುಗ್ಗಿ ಕುಣಿತಕ್ಕೆ ಉತ್ತಮ ಸ್ಪಂದನೆ ನೀಡಿದ್ದಾರೆ ಎಂದರು.</p>.<p>ಜಿಲ್ಲೆಯ ಕಲ್ಲಳ್ಳಿ ಮತ್ತು ಮಳಲೂರಿನ ಮಹಿಳಾ ತಂಡಗಳು ಒಳಗೊಂಡಂತೆ, ಕೊಟ್ಟಿಗೆಹಾರ, ಆಲ್ದೂರು, ದೊಡ್ಡಮಾಗರವಳ್ಳಿ, ಇಂದಾವರ, ಕುಂದೂರು, ಹಾದಿಹಳ್ಳಿಯಿಂದ ಒಟ್ಟು 16 ತಂಡಗಳು ಸ್ಪರ್ಧೆಯಲ್ಲಿ ಭಾಗವಹಿಸಿದ್ದವು.</p>.<p>ಜಿಲ್ಲಾ ಪಂಚಾಯಿತಿ ಸಾಮಾಜಿಕ ನ್ಯಾಯ ಸ್ಥಾಯಿ ಸಮಿತಿ ಅಧ್ಯಕ್ಷ ಹಿರಿಗಯ್ಯ, ಗ್ರಾಮ ಪಂಚಾಯಿತಿ ಅಧ್ಯಕ್ಷೆ ಶೋಭಾ ಸಂತೋಷ್, ಸದಸ್ಯ ಪ್ರಸನ್ನ ಕುಮಾರ್, ರೈತ ಸಂಘದ ಮುಖಂಡ ಕೆ.ಕೆ.ಕೃಷ್ಣೇಗೌಡ, ಎಂ.ಬಿ.ರುದ್ರೇಗೌಡ, ಆಶಾ ಕಿರಣ ಅಂಧಮಕ್ಕಳ ಶಾಲೆಯ ಅಧ್ಯಕ್ಷ ಡಾ. ಜೆ.ಪಿ.ಕೃಷ್ಣೇಗೌಡ ಇದ್ದರು.</p>.<p><strong>ಮಳಲೂರು ಏತನೀರಾವರಿ ಯೋಜನೆಯ ಕಾಮಗಾರಿ ಪೂರ್ಣಕ್ಕೆ ಒತ್ತಾಯ</strong><br />ಕಾರ್ಯಕ್ರಮಕ್ಕೆ ಬಂದಿದ್ದ ಶಾಸಕ ಎಂ.ಪಿ.ಕುಮಾರಸ್ವಾಮಿ ಅವರಿಗೆ ಮಳಲೂರು ಏತನೀರಾವರಿ ಯೋಜನೆಯ ಕಾಮಗಾರಿ ಪೂರ್ಣಕ್ಕೆ ಒತ್ತಾಯಿಸಿ ಮಳಲೂರು ಗ್ರಾಮಸ್ಥರು ಮನವಿ ಸಲ್ಲಿಸಿದರು.<br />ಕಾಮಗಾರಿ ಆರಂಭವಾದಾಗ ರಾಜ್ಯ ಸರ್ಕಾರ ₹6 ಕೋಟಿ ಅನುದಾನ ಬಿಡುಗಡೆ ಮಾಡಿತ್ತು. ನಂತರದ ದಿನಗಳಲ್ಲಿ ಕಾಮಗಾರಿ ನೆನೆಗುದಿಗೆ ಬಿದ್ದಿತ್ತು. ಈಗ ಕಾಮಗಾರಿ ಪೂರ್ಣಕ್ಕೆ ಕ್ರಮವಹಿಸುತ್ತೇನೆ. ರಾಜ್ಯ ಸರ್ಕಾರ, ಜಿಲ್ಲಾಧಿಕಾರಿ ಜೊತೆ ಈ ಬಗ್ಗೆ ಚರ್ಚಿಸುತ್ತೇನೆ ಎಂದು ಶಾಸಕ ಕುಮಾರಸ್ವಾಮಿ ಭರವಸೆ ನೀಡಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಚಿಕ್ಕಮಗಳೂರು: </strong>ಕನ್ನಡ ಸಾಹಿತ್ಯಪರಿಷತ್ತಿನ(ಕಸಾಪ) ಜಿಲ್ಲಾಘಟಕ, ಕುಂಭಕ ಸಾಂಸ್ಕೃತಿಕ ಪ್ರತಿಷ್ಠಾನ ಸಹಯೋಗದಲ್ಲಿ ತಾಲ್ಲೂಕಿನ ಮಳಲೂರಿನಲ್ಲಿ ಆಯೋಜಿಸಿದ್ದ ‘ಸುಗ್ಗಿ ಕುಣಿತ’ ಸ್ಪರ್ಧೆ ಹಾಗೂ ಜಾನಪದ ಕಲಾಪ್ರದರ್ಶನ ಭಾನುವಾರ ಸಂಭ್ರಮದಿಂದ ಜರುಗಿತು.</p>.<p>ಗ್ರಾಮದಲ್ಲಿ ಹಬ್ಬದ ವಾತಾವರಣ ನಿರ್ಮಾಣವಾಗಿತ್ತು. ಮೂಡಿಗೆರೆ ಶಾಸಕ ಎಂ.ಪಿ.ಕುಮಾರಸ್ವಾಮಿ ಅವರು ಜಾನಪದವಾದ್ಯವನ್ನು ಸಾಂಕೇತಿಕವಾಗಿ ನುಡಿಸುವ ಮೂಲಕ ಸ್ಪರ್ಧೆಗೆ ಚಾಲನೆ ನೀಡಿದರು.</p>.<p>ಸುಗ್ಗಿ ಕುಣಿತ ಆರಂಭವಾಗುತ್ತಿದ್ದಂತೆ ವೇದಿಕೆ ಬಳಿ ಜನಜಾತ್ರೆ ನೆರೆಯಿತು. ಗ್ರಾಮೀಣ ವಾದ್ಯಗಳ ನಿನಾದಕ್ಕೆ, ಪುರುಷರು, ಮಹಿಳೆಯರು, ಮಕ್ಕಳು, ವೃದ್ದರು ಕುಣಿದು ಕುಪ್ಪಳಿಸಿದರು.</p>.<p>ವಿಧಾನ ಪರಿಷತ್ತಿನ ಸದಸ್ಯ ಎಂ.ಕೆ.ಪ್ರಾಣೇಶ್ ಮಾತನಾಡಿ, ಗ್ರಾಮೀಣ ಜನರ ಬದುಕಿನಲ್ಲಿ ಜಾನಪದ ಸಂಸ್ಕೃತಿ ಹಾಸುಹೊಕ್ಕಾಗಿದೆ. ಜಾನಪದ ಕಲೆಗಳು ನಶಿಸಲು ಬಿಡಬಾರದು. ಜಾನಪದ ಕಲಾವಿದರಿಗೆ ಪ್ರೋತ್ಸಾಹಿಸಬೇಕು. ದೇಸಿ ಸಂಸ್ಕೃತಿ ಉಳಿಸಬೇಕು ಎಂದರು.</p>.<p>ಜಾನಪದ ಪರಿಷತ್ತಿನ ರಾಜ್ಯಘಟಕದ ಅಧ್ಯಕ್ಷ ಟಿ.ತಿಮ್ಮೇಗೌಡ ಮಾತನಾಡಿ, ಜಾನಪದ ಕಲೆ ಸಂಸ್ಕೃತಿ ಪ್ರತೀಕವಾಗಿದೆ. ಅದನ್ನು ಯುವಪೀಳಿಗೆ ಮುಂದುವರಿಸಬೇಕು ಎಂದರು.</p>.<p>ಕನ್ನಡ ಸಾಹಿತ್ಯ ಪರಿಷತ್ತಿನ ಜಿಲ್ಲಾಘಟಕದ ಅಧ್ಯಕ್ಷ ಕುಂದೂರು ಅಶೋಕ್ ‘ಪ್ರಜಾವಾಣಿ’ ಜೊತೆ ಮಾತನಾಡಿ, ಪ್ರಚಾರ ಕಡಿಮೆ ಇದ್ದರೂ ಸಹ, ಸುತ್ತಲ ಹಳ್ಳಿಗಳ ಜನರು ಸುಗ್ಗಿ ಕುಣಿತಕ್ಕೆ ಉತ್ತಮ ಸ್ಪಂದನೆ ನೀಡಿದ್ದಾರೆ ಎಂದರು.</p>.<p>ಜಿಲ್ಲೆಯ ಕಲ್ಲಳ್ಳಿ ಮತ್ತು ಮಳಲೂರಿನ ಮಹಿಳಾ ತಂಡಗಳು ಒಳಗೊಂಡಂತೆ, ಕೊಟ್ಟಿಗೆಹಾರ, ಆಲ್ದೂರು, ದೊಡ್ಡಮಾಗರವಳ್ಳಿ, ಇಂದಾವರ, ಕುಂದೂರು, ಹಾದಿಹಳ್ಳಿಯಿಂದ ಒಟ್ಟು 16 ತಂಡಗಳು ಸ್ಪರ್ಧೆಯಲ್ಲಿ ಭಾಗವಹಿಸಿದ್ದವು.</p>.<p>ಜಿಲ್ಲಾ ಪಂಚಾಯಿತಿ ಸಾಮಾಜಿಕ ನ್ಯಾಯ ಸ್ಥಾಯಿ ಸಮಿತಿ ಅಧ್ಯಕ್ಷ ಹಿರಿಗಯ್ಯ, ಗ್ರಾಮ ಪಂಚಾಯಿತಿ ಅಧ್ಯಕ್ಷೆ ಶೋಭಾ ಸಂತೋಷ್, ಸದಸ್ಯ ಪ್ರಸನ್ನ ಕುಮಾರ್, ರೈತ ಸಂಘದ ಮುಖಂಡ ಕೆ.ಕೆ.ಕೃಷ್ಣೇಗೌಡ, ಎಂ.ಬಿ.ರುದ್ರೇಗೌಡ, ಆಶಾ ಕಿರಣ ಅಂಧಮಕ್ಕಳ ಶಾಲೆಯ ಅಧ್ಯಕ್ಷ ಡಾ. ಜೆ.ಪಿ.ಕೃಷ್ಣೇಗೌಡ ಇದ್ದರು.</p>.<p><strong>ಮಳಲೂರು ಏತನೀರಾವರಿ ಯೋಜನೆಯ ಕಾಮಗಾರಿ ಪೂರ್ಣಕ್ಕೆ ಒತ್ತಾಯ</strong><br />ಕಾರ್ಯಕ್ರಮಕ್ಕೆ ಬಂದಿದ್ದ ಶಾಸಕ ಎಂ.ಪಿ.ಕುಮಾರಸ್ವಾಮಿ ಅವರಿಗೆ ಮಳಲೂರು ಏತನೀರಾವರಿ ಯೋಜನೆಯ ಕಾಮಗಾರಿ ಪೂರ್ಣಕ್ಕೆ ಒತ್ತಾಯಿಸಿ ಮಳಲೂರು ಗ್ರಾಮಸ್ಥರು ಮನವಿ ಸಲ್ಲಿಸಿದರು.<br />ಕಾಮಗಾರಿ ಆರಂಭವಾದಾಗ ರಾಜ್ಯ ಸರ್ಕಾರ ₹6 ಕೋಟಿ ಅನುದಾನ ಬಿಡುಗಡೆ ಮಾಡಿತ್ತು. ನಂತರದ ದಿನಗಳಲ್ಲಿ ಕಾಮಗಾರಿ ನೆನೆಗುದಿಗೆ ಬಿದ್ದಿತ್ತು. ಈಗ ಕಾಮಗಾರಿ ಪೂರ್ಣಕ್ಕೆ ಕ್ರಮವಹಿಸುತ್ತೇನೆ. ರಾಜ್ಯ ಸರ್ಕಾರ, ಜಿಲ್ಲಾಧಿಕಾರಿ ಜೊತೆ ಈ ಬಗ್ಗೆ ಚರ್ಚಿಸುತ್ತೇನೆ ಎಂದು ಶಾಸಕ ಕುಮಾರಸ್ವಾಮಿ ಭರವಸೆ ನೀಡಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>