<p><strong>ಚಿಕ್ಕಮಗಳೂರು</strong>: ನಗರಸಭೆ ಅಧ್ಯಕ್ಷರ ಚುನಾವಣೆಯಲ್ಲಿ ಬಿಜೆಪಿ ಮುಖಂಡರು ಕಪ್ಪ ಕಾಣಿಕೆ ಪಡೆದಿದ್ದಾರೆ ಎಂದು ನಗರಸಭೆ ಸದಸ್ಯ ವರಸಿದ್ದಿ ವೇಣುಗೋಪಾಲ್ ನೀಡಿರುವ ಹೇಳಿಕೆಯಲ್ಲಿ ಸತ್ಯಾಂಶ ಇಲ್ಲ ಎಂದು ನಗರಸಭೆ ಮಾಜಿ ಅಧ್ಯಕ್ಷೆ ಸುಜಾತಾ ಶಿವಕುಮಾರ್ ಹೇಳಿದರು.</p>.<p>‘ಪಕ್ಷದ ಸಿದ್ಧಾಂತ, ಶಿಸ್ತು ಉಲ್ಲಂಘನೆ ಮಾಡಿದ್ದರಿಂದ ವೇಣುಗೋಪಾಲ್ ಅವರನ್ನು ಪಕ್ಷದಿಂದ ಅಮಾನತುಗೊಳಿಸಲಾಗಿದೆ. ಪಕ್ಷದ ಮುಖಂಡರು ಹಾಗೂ ಪಕ್ಷಕ್ಕೆ ಕೆಟ್ಟ ಹೆಸರು ತರಲು ಈ ರೀತಿಯ ಹೇಳಿಕೆ ನೀಡಿದ್ದಾರೆ. ನಾನು ನಗರಸಭೆ ಅಧ್ಯಕ್ಷೆಯಾಗಲು ಯಾವುದೇ ಕಪ್ಪ ಕಾಣಿಕೆಯನ್ನು ಯಾರಿಗೂ ನೀಡಿಲ್ಲ’ ಎಂದು ಸೋಮವಾರ ಸುದ್ದಿಗೋಷ್ಠಿಯಲ್ಲಿ ಸ್ಪಷ್ಟಪಡಿಸಿದರು.</p>.<p>‘ನನ್ನ ಮತ್ತು ಪಕ್ಷದ ಮುಖಂಡರ ಹೆಸರಿಗೆ ಮಸಿ ಬಳಿಯುವ ಉದ್ದೇಶದಿಂದ ವೇಣುಗೋಪಾಲ್ ಅವರು ಈ ರೀತಿ ಹೇಳಿಕೆ ನೀಡಿದ್ದಾರೆ. ಅವರು ನಗರಸಭೆ ಅಧ್ಯಕ್ಷರಾದಾಗ ಎಷ್ಟು ಕಪ್ಪ ಕಾಣಿಕೆ ನೀಡಿದ್ದರು’ ಎಂದು ಪ್ರಶ್ನಿಸಿದರು.</p>.<p>ನಗರಸಭೆ ಸದಸ್ಯ ಅಮೃತೇಶ್ ಚನ್ನಕೇಶವ, ಸದಸ್ಯರಾದ ರಾಜು, ಲಲಿತಾಬಾಯಿ, ಬಿಜೆಪಿ ನಗರ ಘಟಕದ ಕಾರ್ಯದರ್ಶಿ ಕಾರ್ತಿಕ್, ಸಿ.ಎಂ. ಕೌಶಿಕ್ ಉಪಸ್ಥಿತರಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಚಿಕ್ಕಮಗಳೂರು</strong>: ನಗರಸಭೆ ಅಧ್ಯಕ್ಷರ ಚುನಾವಣೆಯಲ್ಲಿ ಬಿಜೆಪಿ ಮುಖಂಡರು ಕಪ್ಪ ಕಾಣಿಕೆ ಪಡೆದಿದ್ದಾರೆ ಎಂದು ನಗರಸಭೆ ಸದಸ್ಯ ವರಸಿದ್ದಿ ವೇಣುಗೋಪಾಲ್ ನೀಡಿರುವ ಹೇಳಿಕೆಯಲ್ಲಿ ಸತ್ಯಾಂಶ ಇಲ್ಲ ಎಂದು ನಗರಸಭೆ ಮಾಜಿ ಅಧ್ಯಕ್ಷೆ ಸುಜಾತಾ ಶಿವಕುಮಾರ್ ಹೇಳಿದರು.</p>.<p>‘ಪಕ್ಷದ ಸಿದ್ಧಾಂತ, ಶಿಸ್ತು ಉಲ್ಲಂಘನೆ ಮಾಡಿದ್ದರಿಂದ ವೇಣುಗೋಪಾಲ್ ಅವರನ್ನು ಪಕ್ಷದಿಂದ ಅಮಾನತುಗೊಳಿಸಲಾಗಿದೆ. ಪಕ್ಷದ ಮುಖಂಡರು ಹಾಗೂ ಪಕ್ಷಕ್ಕೆ ಕೆಟ್ಟ ಹೆಸರು ತರಲು ಈ ರೀತಿಯ ಹೇಳಿಕೆ ನೀಡಿದ್ದಾರೆ. ನಾನು ನಗರಸಭೆ ಅಧ್ಯಕ್ಷೆಯಾಗಲು ಯಾವುದೇ ಕಪ್ಪ ಕಾಣಿಕೆಯನ್ನು ಯಾರಿಗೂ ನೀಡಿಲ್ಲ’ ಎಂದು ಸೋಮವಾರ ಸುದ್ದಿಗೋಷ್ಠಿಯಲ್ಲಿ ಸ್ಪಷ್ಟಪಡಿಸಿದರು.</p>.<p>‘ನನ್ನ ಮತ್ತು ಪಕ್ಷದ ಮುಖಂಡರ ಹೆಸರಿಗೆ ಮಸಿ ಬಳಿಯುವ ಉದ್ದೇಶದಿಂದ ವೇಣುಗೋಪಾಲ್ ಅವರು ಈ ರೀತಿ ಹೇಳಿಕೆ ನೀಡಿದ್ದಾರೆ. ಅವರು ನಗರಸಭೆ ಅಧ್ಯಕ್ಷರಾದಾಗ ಎಷ್ಟು ಕಪ್ಪ ಕಾಣಿಕೆ ನೀಡಿದ್ದರು’ ಎಂದು ಪ್ರಶ್ನಿಸಿದರು.</p>.<p>ನಗರಸಭೆ ಸದಸ್ಯ ಅಮೃತೇಶ್ ಚನ್ನಕೇಶವ, ಸದಸ್ಯರಾದ ರಾಜು, ಲಲಿತಾಬಾಯಿ, ಬಿಜೆಪಿ ನಗರ ಘಟಕದ ಕಾರ್ಯದರ್ಶಿ ಕಾರ್ತಿಕ್, ಸಿ.ಎಂ. ಕೌಶಿಕ್ ಉಪಸ್ಥಿತರಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>