<p><strong>ಆಲ್ದೂರು</strong>: ಯಲಗುಡಿಗೆ ಸರ್ಕಾರಿ ಕಿರಿಯ ಪ್ರಾಥಮಿಕ ಶಾಲೆಯಲ್ಲಿ 12 ದಿನಗಳ ಕಾಲ ನಡೆಯುವ ಬೇಸಿಗೆ ಶಿಬಿರಕ್ಕೆ ಶುಕ್ರವಾರ ಚಾಲನೆ ನೀಡಲಾಯಿತು.</p>.<p>ಶಿಬಿರದ ಸಂಘಟಕಿ, ಶಿಕ್ಷಕಿ ಗೀತಾ ಕೆ.ಎಚ್ ಮಾತನಾಡಿ, ‘ಗ್ರಾಮೀಣ ವಿದ್ಯಾರ್ಥಿಗಳಿಗೆ ಕಲಿಕೆ ಮತ್ತು ಕೌಶಲ ವೃದ್ಧಿಗೆ ಮಣ್ಣಿನ ಮಾದರಿ ತಯಾರಿಕೆ, ಚಿತ್ರಕಲೆ, ಶ್ಲೋಕ, ರಂಗಗೀತೆ, ಲಾವಣಿ, ಆಟೋಟಗಳು, ಬರವಣಿಗೆ, ಕೈಗಳಿಂದ ಮಾಡುವ ಕುಶಲ ಕಲೆಗಳನ್ನು ಕಲಿಸಲು ಶಿಬಿರ ಯೋಜನೆ ಮಾಡಲಾಗಿದೆ’ ಎಂದರು.</p>.<p>ಸಂಪನ್ಮೂಲ ವ್ಯಕ್ತಿ ನಾಗಶ್ರೀ ತ್ಯಾಗರಾಜ್ ಮಾತನಾಡಿ, ‘ಅಂತರರಾಷ್ಟ್ರೀಯ ಜಾನಪದ ಕಲಾವಿದ ಡಾ. ವಿಜಯಕುಮಾರ್, ಪ್ರಸಿದ್ಧ ಚಿತ್ರಕಲಾ ಶಿಕ್ಷಕ ಸತ್ಯ ಪ್ರಕಾಶ್, ನಾಗರಾಜ್ ವಾಣಿ, ನಾಮದೇವ ಕಾಗದಗಾರ ಭಾಗವಹಿಸಲಿದ್ದಾರೆ. ಸುತ್ತಮುತ್ತಲಿನ ಗ್ರಾಮೀಣ ಭಾಗದ ವಿದ್ಯಾರ್ಥಿಗಳು ಶಿಬಿರದ ಲಾಭ ಪಡೆದುಕೊಳ್ಳಬೇಕು’ ಎಂದರು.</p>.<p>ಸತ್ತಿಹಳ್ಳಿ ಗ್ರಾಮ ಪಂಚಾಯಿತಿ ಮಾಜಿ ಉಪಾಧ್ಯಕ್ಷ ಯಲಗುಡಿಗೆ ಹೊನ್ನಪ್ಪ, ‘ವಿದ್ಯಾರ್ಥಿಗಳ ಪ್ರತಿಭೆ ಅನಾವರಕ್ಕೆ ಬೇಸಿಗೆ ಶಿಬಿರ ಉತ್ತಮ ವೇದಿಕೆಯಾಗಿದ್ದು, ಎಲ್ಲ ಸರ್ಕಾರಿ ಶಾಲೆಯಲ್ಲೂ ಬೇಸಿಗೆ ಶಿಬಿರ ಆಯೋಜಿಸುವುದರ ಮೂಲಕ ವಿದ್ಯಾರ್ಥಿಗಳ ವ್ಯಕ್ತಿತ್ವ ವಿಕಸನಕ್ಕೆ ಸಹಕರಿಸಬೇಕು’ ಎಂದು ಅಭಿಪ್ರಾಯಪಟ್ಟರು. </p>.<p>ಎಸ್.ಡಿ.ಎಂ.ಸಿ ಅಧ್ಯಕ್ಷ ಚಂದ್ರಶೇಖರ್, ಸದಸ್ಯ ವೆಂಕಟೇಶ್, ಹಿರೇಕೊಳಲೆ ಮುಖ್ಯ ಶಿಕ್ಷಕ ಅಣ್ಣನಾಯಕ್, ಹೆಡದಾಳು ಶಾಲೆಯ ಶಿಕ್ಷಕಿ ವಿಮಲಾಕ್ಷಿ, ರೂಪಿಣಿ ಇದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಆಲ್ದೂರು</strong>: ಯಲಗುಡಿಗೆ ಸರ್ಕಾರಿ ಕಿರಿಯ ಪ್ರಾಥಮಿಕ ಶಾಲೆಯಲ್ಲಿ 12 ದಿನಗಳ ಕಾಲ ನಡೆಯುವ ಬೇಸಿಗೆ ಶಿಬಿರಕ್ಕೆ ಶುಕ್ರವಾರ ಚಾಲನೆ ನೀಡಲಾಯಿತು.</p>.<p>ಶಿಬಿರದ ಸಂಘಟಕಿ, ಶಿಕ್ಷಕಿ ಗೀತಾ ಕೆ.ಎಚ್ ಮಾತನಾಡಿ, ‘ಗ್ರಾಮೀಣ ವಿದ್ಯಾರ್ಥಿಗಳಿಗೆ ಕಲಿಕೆ ಮತ್ತು ಕೌಶಲ ವೃದ್ಧಿಗೆ ಮಣ್ಣಿನ ಮಾದರಿ ತಯಾರಿಕೆ, ಚಿತ್ರಕಲೆ, ಶ್ಲೋಕ, ರಂಗಗೀತೆ, ಲಾವಣಿ, ಆಟೋಟಗಳು, ಬರವಣಿಗೆ, ಕೈಗಳಿಂದ ಮಾಡುವ ಕುಶಲ ಕಲೆಗಳನ್ನು ಕಲಿಸಲು ಶಿಬಿರ ಯೋಜನೆ ಮಾಡಲಾಗಿದೆ’ ಎಂದರು.</p>.<p>ಸಂಪನ್ಮೂಲ ವ್ಯಕ್ತಿ ನಾಗಶ್ರೀ ತ್ಯಾಗರಾಜ್ ಮಾತನಾಡಿ, ‘ಅಂತರರಾಷ್ಟ್ರೀಯ ಜಾನಪದ ಕಲಾವಿದ ಡಾ. ವಿಜಯಕುಮಾರ್, ಪ್ರಸಿದ್ಧ ಚಿತ್ರಕಲಾ ಶಿಕ್ಷಕ ಸತ್ಯ ಪ್ರಕಾಶ್, ನಾಗರಾಜ್ ವಾಣಿ, ನಾಮದೇವ ಕಾಗದಗಾರ ಭಾಗವಹಿಸಲಿದ್ದಾರೆ. ಸುತ್ತಮುತ್ತಲಿನ ಗ್ರಾಮೀಣ ಭಾಗದ ವಿದ್ಯಾರ್ಥಿಗಳು ಶಿಬಿರದ ಲಾಭ ಪಡೆದುಕೊಳ್ಳಬೇಕು’ ಎಂದರು.</p>.<p>ಸತ್ತಿಹಳ್ಳಿ ಗ್ರಾಮ ಪಂಚಾಯಿತಿ ಮಾಜಿ ಉಪಾಧ್ಯಕ್ಷ ಯಲಗುಡಿಗೆ ಹೊನ್ನಪ್ಪ, ‘ವಿದ್ಯಾರ್ಥಿಗಳ ಪ್ರತಿಭೆ ಅನಾವರಕ್ಕೆ ಬೇಸಿಗೆ ಶಿಬಿರ ಉತ್ತಮ ವೇದಿಕೆಯಾಗಿದ್ದು, ಎಲ್ಲ ಸರ್ಕಾರಿ ಶಾಲೆಯಲ್ಲೂ ಬೇಸಿಗೆ ಶಿಬಿರ ಆಯೋಜಿಸುವುದರ ಮೂಲಕ ವಿದ್ಯಾರ್ಥಿಗಳ ವ್ಯಕ್ತಿತ್ವ ವಿಕಸನಕ್ಕೆ ಸಹಕರಿಸಬೇಕು’ ಎಂದು ಅಭಿಪ್ರಾಯಪಟ್ಟರು. </p>.<p>ಎಸ್.ಡಿ.ಎಂ.ಸಿ ಅಧ್ಯಕ್ಷ ಚಂದ್ರಶೇಖರ್, ಸದಸ್ಯ ವೆಂಕಟೇಶ್, ಹಿರೇಕೊಳಲೆ ಮುಖ್ಯ ಶಿಕ್ಷಕ ಅಣ್ಣನಾಯಕ್, ಹೆಡದಾಳು ಶಾಲೆಯ ಶಿಕ್ಷಕಿ ವಿಮಲಾಕ್ಷಿ, ರೂಪಿಣಿ ಇದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>