ರೇಣುಕ ಶಿವಾಚಾರ್ಯ ಸ್ವಾಮೀಜಿ ಮಾತನಾಡಿ, ‘ಸಂಸ್ಥೆಯ ಆದರ್ಶ, ಧ್ಯೇಯ ಉಳಿಸಿ ಬೆಳೆಸಲು ಪ್ರಯತ್ನಿಸುವೆ. ರಂಭಾಪುರಿ ಸ್ವಾಮೀಜಿಯ ಮಾರ್ಗದರ್ಶನದಲ್ಲಿ ಸಂಸ್ಥೆಯನ್ನು ಇನ್ನಷ್ಟು ಬಲಗೊಳಿಸುವ ಹಾಗೂ ಸಂಘಟನಾ ಶಕ್ತಿಯನ್ನು ಬೆಳೆಸಲಾಗುವುದು. ನಾವೆಲ್ಲರೂ ಒಂದೇ ಬೇರಿನ ಹೂಗಳು. ಒಗ್ಗಟ್ಟಿನಿಂದ ಎಲ್ಲರೂ ಮುನ್ನಡೆದು ಆರೋಗ್ಯ ಪೂರ್ಣ ಸಮಾಜ ನಿರ್ಮಾಣಕ್ಕೆ ಶ್ರಮಿಸೋಣ’ ಎಂದರು.