ಕೃಷಿ ಇಲಾಖೆಯ ಸಹಾಯಕ ನಿರ್ದೇಶಕ ರಮೇಶ್ ಮಸ್ಕಲೆ ಮಾತನಾಡಿ, ಜಯ, ಜ್ಯೋತಿ ಸೇರಿದಂತೆ ನಾಲ್ಕು ವಿಧದ ಭತ್ತದ ಬಿತ್ತನೆ ಬೀಜ ವಿತರಣೆ ಮಾಡಲಾಗುತ್ತಿದೆ ಎಂದರು. ತೋಟಗಾರಿಕೆ ಇಲಾಖೆಯ ಅಧಿಕಾರಿ ಪುನಿತ್, ಇಲಾಖೆಯಿಂದ ಅಡಿಕೆ, ಕಾಳುಮೆಣಸು, ತೆಂಗಿನ ಸಸಿ ಶೀಘ್ರ ವಿತರಣೆ ಮಾಡಲಾಗುವುದು ಎಂದರು. ಪ್ರತಿ ಗ್ರಾಮ ಪಂಚಾಯಿತಿ ವ್ಯಾಪ್ತಿಯಲ್ಲಿ ಅತಿ ಹೆಚ್ಚು ಮಕ್ಕಳಿರುವ ಶಾಲೆಗೆ ಉದ್ಯೋಗ ಖಾತರಿ ಯೋಜನೆಯಡಿ ದಾಸೋಹ ಭವನ ನಿರ್ಮಾಣ ಮಾಡಲು ಅವಕಾಶವಿದೆ ಎಂದು ಅಕ್ಷರ ದಾಸೋಹದ ಸಹಾಯಕ ನಿರ್ದೇಶಕ ಧನಂಜಯ ಮೇದೂರ ತಿಳಿಸಿದರು. 2010–11 ನೇ ಸಾಲಿನಿಂದ ಈವರೆಗೆ ವಸತಿ ಯೋಜನೆಯಡಿ 3771 ಮನೆಗಳು ಮಂಜೂರಾಗಿದ್ದು 2641 ಮನೆಗಳು ಪೂರ್ಣಗೊಂಡಿವೆ ಎಂದರು.