<p><strong>ಪುತ್ತೂರು: </strong>‘3 ಸೆಂಟ್ಸ್ ಜಾಗದ ಹಕ್ಕುಪತ್ರಕ್ಕಾಗಿ ಮಹಿಳೆಯೊಬ್ಬರನ್ನು ಅಧಿಕಾರಿಗಳು ನೂರಾರು ಬಾರಿ ಕಚೇರಿಗೆ ಅಲೆದಾಡುವಂತೆ ಮಾಡಿದ್ದಾರೆ. 25 ವರ್ಷಗಳಿಂದ ವಾಸ್ತವ್ಯವಿರುವ ಈ ಮಹಿಳೆಗೆ ಅನ್ಯಾಯವಾಗಿದೆ’ ಎಂದು ಆರೋಪಿಸಿರುವ ಮಾಜಿ ಶಾಸಕಿ ಶಕುಂತಳಾ ಶೆಟ್ಟಿ ಅವರು, ಸೋಮವಾರ ಪುತ್ತೂರು ಮಿನಿ ವಿಧಾನಸೌಧಕ್ಕೆ ಭೇಟಿ ನೀಡಿ, ಮಹಿಳೆಗೆ ನ್ಯಾಯ ಒದಗಿಸುವಂತೆ ಅಧಿಕಾರಿಗಳನ್ನು ಒತ್ತಾಯಿಸಿದ್ದಾರೆ.</p>.<p>‘ತಾಲ್ಲೂಕು ಕಚೇರಿಯಲ್ಲಿ ಸಾರ್ವಜನಿಕರ ಕೆಲಸಗಳು ಸರಿಯಾಗಿ ನಡೆಯುತ್ತಿಲ್ಲ. ಸಂತತಿ ನಕ್ಷೆ ನೀಡುವಲ್ಲಿಯೂ ವಿಳಂಬವಾಗುತ್ತಿದೆ. ಉಪ ನೋಂದಣಿ ಕಚೇರಿಯಲ್ಲಿ ಸಮರ್ಪಕ ಕೆಲಸವೇ ನಡೆಯುತ್ತಿಲ್ಲ. ಕೇಳಿದರೆ ಸರ್ವರ್ ಸಮಸ್ಯೆ ಎಂದು ಹೇಳುತ್ತಿದ್ದಾರೆ. ಜಾಗದ ಪ್ಲಾಂಟಿಂಗ್ ಆಗದೆ ಜನತೆ ಕಷ್ಟಪಾಡುವಂತಾಗಿದೆ ಎಂದು ಅವರು ಆರೋಪಿಸಿದರು.</p>.<p>ಈ ಬಗ್ಗೆ ಪುತ್ತೂರು ಉಪ ವಿಭಾಗಾಧಿಕಾರಿ ಡಾ.ಯತೀಶ್ ಉಳ್ಳಾಲ್ ಮತ್ತುತಹಶೀಲ್ದಾರ್ ರಮೇಶ್ ಬಾಬು ಅವರೊಂದಿಗೆ ಚರ್ಚೆ ನಡೆಸಿದ ಶಕುಂತಳಾ ಶೆಟ್ಟಿ, ‘ಮಚ್ಚಿಮಲೆ ನಿವಾಸಿ ಸೀತಮ್ಮ ಬಡ ಮಹಿಳೆಯಾಗಿದ್ದು, ಒಂದು ವರ್ಷದಲ್ಲಿ ನೂರಾರು ಬಾರಿ ನಿಮ್ಮ ಕಚೇರಿಗೆ ಅಲೆದಾಟ ಮಾಡಿದ್ದಾರೆ. ಅವರಿಗೆ 3 ಸೆಂಟ್ಸ್ ಜಾಗದ ಹಕ್ಕುಪತ್ರ ನೀಡಲು ಸಾಧ್ಯವಾಗಿಲ್ಲ. ಇನ್ನು ನಿಮ್ಮ ಕಚೇರಿಯ ಬಾಗಿಲಲ್ಲಿ ಧರಣಿ ಕುಳಿತುಕೊಳ್ಳುವುದೊಂದೇ ನಮಗೆ ಉಳಿದಿರುವ ದಾರಿ’ ಎಂದು ಆಕ್ರೋಶ ವ್ಯಕ್ತಪಡಿಸಿದರು.</p>.<p>‘ನಿಮ್ಮ ಇಲಾಖೆಯಲ್ಲಿಯೇ ವ್ಯಕ್ತಿಯೊಬ್ಬರಿಂದ ಆ ಬಡ ಮಹಿಳೆಗೆ ಅನ್ಯಾಯವಾಗಿದೆ. ಆದರೂ ನೀವು ಈ ಬಗ್ಗೆ ಗಮನ ಹರಿಸಿಲ್ಲ’ ಎಂದು ಹೇಳಿದರು.</p>.<p>ತಹಶೀಲ್ದಾರ್ ರಮೇಶ್ ಬಾಬು ಅವರು, ‘ಈ ಬಗ್ಗೆ ತಕ್ಷಣ ಕ್ರಮ ಕೈಗೊಳ್ಳುವುದಾಗಿ ತಿಳಿಸಿ ಮಾರ್ಚ್ 25ರೊಳಗೆ ಹಕ್ಕುಪತ್ರ ನೀಡುವುದಾಗಿ ತಿಳಿಸಿದರು.</p>.<p>ಡಾ.ಯತೀಶ್ ಉಳ್ಳಾಲ್ ಅವರು, ‘ಜನರಿಗೆ ಯಾವುದೇ ತೊಂದರೆಯಾಗದಂತೆ ವ್ಯವಸ್ಥೆ ಮಾಡಲಾಗುವುದು. ನೋಂದಣಿ ಇಲಾಖೆ ಈಗ ಸ್ವಲ್ಪ ಮಟ್ಟಿಗೆ ಸರಿಯಾಗಿದೆ. ಇನ್ನೂ ದುರಸ್ತಿ ಆಗಬೇಕಾಗಿದೆ. ಬಡ ಮಹಿಳೆಗೆ ಹಕ್ಕುಪತ್ರ ನೀಡುವಲ್ಲಿ ನಮ್ಮಿಂದ ತಪ್ಪಾಗಿದೆ’ ಎಂದರು.</p>.<p class="Subhead">ಹೋರಾಟ ಅನಿವಾರ್ಯ: ಬಳಿಕ ಸುದ್ದಿಗಾರದೊಂದಿಗೆ ಮಾತನಾಡಿದ ಶಕುಂತಳಾ ಶೆಟ್ಟಿ, ‘ಹಾಲಿ ಶಾಸಕರು ಇದೇ ಕಟ್ಟಡದಲ್ಲಿದ್ದರೂ ಅವರಿಗೆ ಈ ಬಡಜನತೆಯ ಸಮಸ್ಯೆ ಅರ್ಥವಾಗುತ್ತಿಲ್ಲ. ಒಂದು ತಿಂಗಳಿನಿಂದ ಹಲವಾರು ದೂರುಗಳು ನನಗೆ ಬಂದಿವೆ. ಹಾಗಾಗಿ, ಅಧಿಕಾರಿಗಳಿಗೆ ಎಚ್ಚರಿಕೆ ನೀಡುವ ಕೆಲಸ ಮಾಡಿದ್ದೇನೆ. ಇದು ಹೀಗೆ ಮುಂದುವರಿದರೆ ಹೋರಾಟ ನಡೆಸುವುದು ಅನಿವಾರ್ಯವಾಗಲಿದೆ’ ಎಂದು ಎಚ್ಚರಿಸಿದರು.</p>.<p>ಪುತ್ತೂರು ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಮಹಮ್ಮದ್ ಬಡಗನ್ನೂರು, ಕೆಪಿಸಿಸಿ ಸದಸ್ಯ ಎಂ.ಬಿ.ವಿಶ್ವನಾಥ ರೈ, ಪಕ್ಷದ ಮುಖಂಡರಾದ ಎಚ್.ಮಹಮ್ಮದ್ ಆಲಿ, ಆಸ್ಕರ್ ಆಲಿ ನೆಕ್ಕಿಲಾಡಿ, ಬೋಳೋಡಿ ಚಂದ್ರಹಾಸ ರೈ, ಮಹಮ್ಮದ್ ರಿಯಾಝ್, ಪೂರ್ಣೇಶ್ ರೈ ಇದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಪುತ್ತೂರು: </strong>‘3 ಸೆಂಟ್ಸ್ ಜಾಗದ ಹಕ್ಕುಪತ್ರಕ್ಕಾಗಿ ಮಹಿಳೆಯೊಬ್ಬರನ್ನು ಅಧಿಕಾರಿಗಳು ನೂರಾರು ಬಾರಿ ಕಚೇರಿಗೆ ಅಲೆದಾಡುವಂತೆ ಮಾಡಿದ್ದಾರೆ. 25 ವರ್ಷಗಳಿಂದ ವಾಸ್ತವ್ಯವಿರುವ ಈ ಮಹಿಳೆಗೆ ಅನ್ಯಾಯವಾಗಿದೆ’ ಎಂದು ಆರೋಪಿಸಿರುವ ಮಾಜಿ ಶಾಸಕಿ ಶಕುಂತಳಾ ಶೆಟ್ಟಿ ಅವರು, ಸೋಮವಾರ ಪುತ್ತೂರು ಮಿನಿ ವಿಧಾನಸೌಧಕ್ಕೆ ಭೇಟಿ ನೀಡಿ, ಮಹಿಳೆಗೆ ನ್ಯಾಯ ಒದಗಿಸುವಂತೆ ಅಧಿಕಾರಿಗಳನ್ನು ಒತ್ತಾಯಿಸಿದ್ದಾರೆ.</p>.<p>‘ತಾಲ್ಲೂಕು ಕಚೇರಿಯಲ್ಲಿ ಸಾರ್ವಜನಿಕರ ಕೆಲಸಗಳು ಸರಿಯಾಗಿ ನಡೆಯುತ್ತಿಲ್ಲ. ಸಂತತಿ ನಕ್ಷೆ ನೀಡುವಲ್ಲಿಯೂ ವಿಳಂಬವಾಗುತ್ತಿದೆ. ಉಪ ನೋಂದಣಿ ಕಚೇರಿಯಲ್ಲಿ ಸಮರ್ಪಕ ಕೆಲಸವೇ ನಡೆಯುತ್ತಿಲ್ಲ. ಕೇಳಿದರೆ ಸರ್ವರ್ ಸಮಸ್ಯೆ ಎಂದು ಹೇಳುತ್ತಿದ್ದಾರೆ. ಜಾಗದ ಪ್ಲಾಂಟಿಂಗ್ ಆಗದೆ ಜನತೆ ಕಷ್ಟಪಾಡುವಂತಾಗಿದೆ ಎಂದು ಅವರು ಆರೋಪಿಸಿದರು.</p>.<p>ಈ ಬಗ್ಗೆ ಪುತ್ತೂರು ಉಪ ವಿಭಾಗಾಧಿಕಾರಿ ಡಾ.ಯತೀಶ್ ಉಳ್ಳಾಲ್ ಮತ್ತುತಹಶೀಲ್ದಾರ್ ರಮೇಶ್ ಬಾಬು ಅವರೊಂದಿಗೆ ಚರ್ಚೆ ನಡೆಸಿದ ಶಕುಂತಳಾ ಶೆಟ್ಟಿ, ‘ಮಚ್ಚಿಮಲೆ ನಿವಾಸಿ ಸೀತಮ್ಮ ಬಡ ಮಹಿಳೆಯಾಗಿದ್ದು, ಒಂದು ವರ್ಷದಲ್ಲಿ ನೂರಾರು ಬಾರಿ ನಿಮ್ಮ ಕಚೇರಿಗೆ ಅಲೆದಾಟ ಮಾಡಿದ್ದಾರೆ. ಅವರಿಗೆ 3 ಸೆಂಟ್ಸ್ ಜಾಗದ ಹಕ್ಕುಪತ್ರ ನೀಡಲು ಸಾಧ್ಯವಾಗಿಲ್ಲ. ಇನ್ನು ನಿಮ್ಮ ಕಚೇರಿಯ ಬಾಗಿಲಲ್ಲಿ ಧರಣಿ ಕುಳಿತುಕೊಳ್ಳುವುದೊಂದೇ ನಮಗೆ ಉಳಿದಿರುವ ದಾರಿ’ ಎಂದು ಆಕ್ರೋಶ ವ್ಯಕ್ತಪಡಿಸಿದರು.</p>.<p>‘ನಿಮ್ಮ ಇಲಾಖೆಯಲ್ಲಿಯೇ ವ್ಯಕ್ತಿಯೊಬ್ಬರಿಂದ ಆ ಬಡ ಮಹಿಳೆಗೆ ಅನ್ಯಾಯವಾಗಿದೆ. ಆದರೂ ನೀವು ಈ ಬಗ್ಗೆ ಗಮನ ಹರಿಸಿಲ್ಲ’ ಎಂದು ಹೇಳಿದರು.</p>.<p>ತಹಶೀಲ್ದಾರ್ ರಮೇಶ್ ಬಾಬು ಅವರು, ‘ಈ ಬಗ್ಗೆ ತಕ್ಷಣ ಕ್ರಮ ಕೈಗೊಳ್ಳುವುದಾಗಿ ತಿಳಿಸಿ ಮಾರ್ಚ್ 25ರೊಳಗೆ ಹಕ್ಕುಪತ್ರ ನೀಡುವುದಾಗಿ ತಿಳಿಸಿದರು.</p>.<p>ಡಾ.ಯತೀಶ್ ಉಳ್ಳಾಲ್ ಅವರು, ‘ಜನರಿಗೆ ಯಾವುದೇ ತೊಂದರೆಯಾಗದಂತೆ ವ್ಯವಸ್ಥೆ ಮಾಡಲಾಗುವುದು. ನೋಂದಣಿ ಇಲಾಖೆ ಈಗ ಸ್ವಲ್ಪ ಮಟ್ಟಿಗೆ ಸರಿಯಾಗಿದೆ. ಇನ್ನೂ ದುರಸ್ತಿ ಆಗಬೇಕಾಗಿದೆ. ಬಡ ಮಹಿಳೆಗೆ ಹಕ್ಕುಪತ್ರ ನೀಡುವಲ್ಲಿ ನಮ್ಮಿಂದ ತಪ್ಪಾಗಿದೆ’ ಎಂದರು.</p>.<p class="Subhead">ಹೋರಾಟ ಅನಿವಾರ್ಯ: ಬಳಿಕ ಸುದ್ದಿಗಾರದೊಂದಿಗೆ ಮಾತನಾಡಿದ ಶಕುಂತಳಾ ಶೆಟ್ಟಿ, ‘ಹಾಲಿ ಶಾಸಕರು ಇದೇ ಕಟ್ಟಡದಲ್ಲಿದ್ದರೂ ಅವರಿಗೆ ಈ ಬಡಜನತೆಯ ಸಮಸ್ಯೆ ಅರ್ಥವಾಗುತ್ತಿಲ್ಲ. ಒಂದು ತಿಂಗಳಿನಿಂದ ಹಲವಾರು ದೂರುಗಳು ನನಗೆ ಬಂದಿವೆ. ಹಾಗಾಗಿ, ಅಧಿಕಾರಿಗಳಿಗೆ ಎಚ್ಚರಿಕೆ ನೀಡುವ ಕೆಲಸ ಮಾಡಿದ್ದೇನೆ. ಇದು ಹೀಗೆ ಮುಂದುವರಿದರೆ ಹೋರಾಟ ನಡೆಸುವುದು ಅನಿವಾರ್ಯವಾಗಲಿದೆ’ ಎಂದು ಎಚ್ಚರಿಸಿದರು.</p>.<p>ಪುತ್ತೂರು ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಮಹಮ್ಮದ್ ಬಡಗನ್ನೂರು, ಕೆಪಿಸಿಸಿ ಸದಸ್ಯ ಎಂ.ಬಿ.ವಿಶ್ವನಾಥ ರೈ, ಪಕ್ಷದ ಮುಖಂಡರಾದ ಎಚ್.ಮಹಮ್ಮದ್ ಆಲಿ, ಆಸ್ಕರ್ ಆಲಿ ನೆಕ್ಕಿಲಾಡಿ, ಬೋಳೋಡಿ ಚಂದ್ರಹಾಸ ರೈ, ಮಹಮ್ಮದ್ ರಿಯಾಝ್, ಪೂರ್ಣೇಶ್ ರೈ ಇದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>