<p><strong>ತರೀಕೆರೆ</strong>: ಪಟ್ಟಣದ ಟಿಎಪಿಸಿಎಂಎಸ್ ‘ಬಿ’ ವರ್ಗದ 7 ನಿರ್ದೇಶಕರ ಚುನಾವಣೆಯಲ್ಲಿ ಕಾಂಗ್ರೆಸ್ ಹಾಗೂ ಜೆಡಿಎಸ್ ಮೈತ್ರಿಕೂಟದ ಏಳೂ ಅಭ್ಯರ್ಥಿಗಳು ಜಯ ಗಳಿಸಿದ್ದಾರೆ ಎಂದು ಜೆಡಿಎಸ್ನ ತಾಲ್ಲೂಕು ಅಧ್ಯಕ್ಷ ಎಂ.ನರೇಂದ್ರ ಹೇಳಿದರು.</p>.<p>ಪಟ್ಟಣದ ಜೆಡಿಎಸ್ ಕಚೇರಿಯಲ್ಲಿ ನೂತನವಾಗಿ ಆಯ್ಕೆಯಾದ ನಿರ್ದೇಶಕರ ಜತೆ ಸೋಮವಾರ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ಒಟ್ಟು 14 ಸ್ಥಾನಗಳ ಪೈಕಿ ‘ಎ’ ವರ್ಗದ 6 ಸ್ಥಾನಗಳು ಅವಿರೋಧವಾಗಿ ಆಯ್ಕೆ ನಡೆದಿದೆ. ‘ಬಿ’ ವರ್ಗದ ನಿರ್ದೇಶಕ (ಪ.ಪಂ) ಸ್ಥಾನಕ್ಕೆ ಜೆಡಿಎಸ್ನ ಆರ್. ಹಾಲಪ್ಪ ಅವಿರೋಧ ಆಯ್ಕೆಯಾಗಿದ್ದರು. ಉಳಿದ 7 ಸ್ಥಾನಗಳಲ್ಲಿ 3 ಜೆಡಿಎಸ್ ಹಾಗೂ 4 ಸ್ಥಾನಗಳನ್ನು ಕಾಂಗ್ರೆಸ್ ಬೆಂಬಲಿತ ಅಭ್ಯರ್ಥಿಗಳು ಜಯಗಳಿಸಿದ್ದಾರೆ ಎಂದು ಹೇಳಿದರು.</p>.<p>ಎಂ.ನರೇಂದ್ರ (ಬಿಸಿಎಂ ‘ಎ’), ಉಮಾಶಂಕರ್ (ಬಿಸಿಎಂ‘ಬಿ’) ಎಚ್.ಸಿ. ಬಸವರಾಜಪ್ಪ (ಪ.ಜಾತಿ) ಗೆದ್ದ ಜೆಡಿಎಸ್ ಪಕ್ಷದ ಅಭ್ಯರ್ಥಿಗಳಾಗಿದ್ದಾರೆ ಎಂದು ತಿಳಿಸಿದರು.</p>.<p>ಬಿಜೆಪಿ ಮುಖಂಡರ ಉದಾಸೀನತೆ ಮತ್ತು ನಿರ್ಲಕ್ಷ್ಯದಿಂದ ಬೇಸತ್ತು ಜೆಡಿಎಸ್ ಪಕ್ಷವು ಅನಿವಾರ್ಯವಾಗಿ ಸ್ಥಳೀಯವಾಗಿ ಕಾಂಗ್ರೆಸ್ನೊಂದಿಗೆ ಮೈತ್ರಿ ಮಾಡಿಕೊಂಡಿತು ಎಂದು ಹೇಳಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ತರೀಕೆರೆ</strong>: ಪಟ್ಟಣದ ಟಿಎಪಿಸಿಎಂಎಸ್ ‘ಬಿ’ ವರ್ಗದ 7 ನಿರ್ದೇಶಕರ ಚುನಾವಣೆಯಲ್ಲಿ ಕಾಂಗ್ರೆಸ್ ಹಾಗೂ ಜೆಡಿಎಸ್ ಮೈತ್ರಿಕೂಟದ ಏಳೂ ಅಭ್ಯರ್ಥಿಗಳು ಜಯ ಗಳಿಸಿದ್ದಾರೆ ಎಂದು ಜೆಡಿಎಸ್ನ ತಾಲ್ಲೂಕು ಅಧ್ಯಕ್ಷ ಎಂ.ನರೇಂದ್ರ ಹೇಳಿದರು.</p>.<p>ಪಟ್ಟಣದ ಜೆಡಿಎಸ್ ಕಚೇರಿಯಲ್ಲಿ ನೂತನವಾಗಿ ಆಯ್ಕೆಯಾದ ನಿರ್ದೇಶಕರ ಜತೆ ಸೋಮವಾರ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ಒಟ್ಟು 14 ಸ್ಥಾನಗಳ ಪೈಕಿ ‘ಎ’ ವರ್ಗದ 6 ಸ್ಥಾನಗಳು ಅವಿರೋಧವಾಗಿ ಆಯ್ಕೆ ನಡೆದಿದೆ. ‘ಬಿ’ ವರ್ಗದ ನಿರ್ದೇಶಕ (ಪ.ಪಂ) ಸ್ಥಾನಕ್ಕೆ ಜೆಡಿಎಸ್ನ ಆರ್. ಹಾಲಪ್ಪ ಅವಿರೋಧ ಆಯ್ಕೆಯಾಗಿದ್ದರು. ಉಳಿದ 7 ಸ್ಥಾನಗಳಲ್ಲಿ 3 ಜೆಡಿಎಸ್ ಹಾಗೂ 4 ಸ್ಥಾನಗಳನ್ನು ಕಾಂಗ್ರೆಸ್ ಬೆಂಬಲಿತ ಅಭ್ಯರ್ಥಿಗಳು ಜಯಗಳಿಸಿದ್ದಾರೆ ಎಂದು ಹೇಳಿದರು.</p>.<p>ಎಂ.ನರೇಂದ್ರ (ಬಿಸಿಎಂ ‘ಎ’), ಉಮಾಶಂಕರ್ (ಬಿಸಿಎಂ‘ಬಿ’) ಎಚ್.ಸಿ. ಬಸವರಾಜಪ್ಪ (ಪ.ಜಾತಿ) ಗೆದ್ದ ಜೆಡಿಎಸ್ ಪಕ್ಷದ ಅಭ್ಯರ್ಥಿಗಳಾಗಿದ್ದಾರೆ ಎಂದು ತಿಳಿಸಿದರು.</p>.<p>ಬಿಜೆಪಿ ಮುಖಂಡರ ಉದಾಸೀನತೆ ಮತ್ತು ನಿರ್ಲಕ್ಷ್ಯದಿಂದ ಬೇಸತ್ತು ಜೆಡಿಎಸ್ ಪಕ್ಷವು ಅನಿವಾರ್ಯವಾಗಿ ಸ್ಥಳೀಯವಾಗಿ ಕಾಂಗ್ರೆಸ್ನೊಂದಿಗೆ ಮೈತ್ರಿ ಮಾಡಿಕೊಂಡಿತು ಎಂದು ಹೇಳಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>