<p>ತರೀಕೆರೆ: ಕೆಲ ದೇಶಗಳಲ್ಲಿ ಕಠಿಣ ಕಾನೂನುಗಳಡಿ ಜನ ಗುಲಾಮರಂತೆ ಬದುಕುತ್ತಿದ್ದಾರೆ. ಆದರೆ ನಮ್ಮ ದೇಶದ ಜನರು ಸ್ವತಂತ್ರವಾಗಿ ಬದುಕುತ್ತಿರುವುದಕ್ಕೆ ಡಾ.ಅಂಬೇಡ್ಕರ್ ಅವರು ಬರೆದ ಸಾರ್ವಕಾಲಿಕ ಸಂವಿಧಾನವೇ ಕಾರಣ ಎಂದು ತಹಶೀಲ್ದಾರ್ ರಶ್ಮಿ ಎಚ್.ಜೆ. ಹೇಳಿದರು.</p>.<p>ಪಟ್ಟಣದ ಅಂಬೇಡ್ಕರ್ ಭವದಲ್ಲಿ ತಾಲ್ಲೂಕು ಆಡಳಿತ, ತಾಲ್ಲೂಕು ಪಂಚಾಯಿತಿ, ಪುರಸಭೆ ಮತ್ತು ಸಮಾಜ ಕಲ್ಯಾಣ ಇಲಾಖೆ ಸಂಯುಕ್ತಾಶ್ರಯದಲ್ಲಿ ಮಂಗಳವಾರ ನಡೆದ ಡಾ.ಬಿ.ಆರ್. ಅಂಬೇಡ್ಕರ್ ಅವರ 135ನೇ ಹಾಗೂ ಬಾಬು ಜಗಜೀವನ ರಾಂ ಅವರ 119ನೇ ಜನ್ಮ ದಿನಾಚರಣಾ ಸಮಾರಂಭದಲ್ಲಿ ಅವರು ಮಾತನಾಡಿದರು.</p>.<p>ಅಂಬೇಡ್ಕರ್ ಅವರು ಪ್ರಭುದ್ಧ ಭಾರತದ ಪರಿಕಲ್ಪನೆಯೊಂದಿಗೆ ಪ್ರಪಂಚದ ಶ್ರೇಷ್ಠ ಸಂವಿಧಾನವನ್ನು ರಚಿಸಿಕೊಟ್ಟರು.ಇದರ ಅಡಿಯಲ್ಲಿ ನಾವು ಬದುಕುತ್ತಿದ್ದೇವೆ ಎಂದರು.</p>.<p>ಸ್ವಾತಂತ್ರ ನಂತರದಲ್ಲಿ ಆಡಳಿತ ನಡೆಸಿದ ಸರ್ಕಾರದಲ್ಲಿ ವಿವಿಧ ಇಲಾಖಾ ಮಂತ್ರಿಗಳಾಗಿ ಬಾಬು ಜಗಜೀನವರಾಂ ತಮ್ಮದೇ ಆದ ರೀತಿ ದೇಶದ ಏಳಿಗೆಗೆ ಶ್ರಮಿಸಿದರು ಎಂದರು.</p>.<p>ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದ ತಾಲ್ಲೂಕು ಪಂಚಾಯಿತಿ ಇಓ ದೇವೇಂದ್ರಪ್ಪ ಮಾತನಾಡಿ, ಅಂಬೇಡ್ಕರ್ ಅವರ ಸಾಧನೆ, ಆದರ್ಶ ಮತ್ತು ಸಂವಿಧಾನವನ್ನು ಸದಾ ಮೆಲುಕು ಹಾಕುತ್ತಿರಬೇಕು ಎಂದು ಹೇಳಿದರು.</p>.<p>ಅಂಬೇಡ್ಕರ್ ಅವರ ಕುರಿತು ಭದ್ರಾವತಿ ಆಕಾಶವಾಣಿ ಉದ್ಘೋಷಕ ಎಂ.ಕೆ.ಶಿವಕುಮಾರ್ ಮತ್ತು ಬಾಬು ಜಗಜೀವನ ರಾಂ ಕುರಿತು ದಸಂಸ ಮುಖಂಡ ಎನ್.ವೆಂಕಟೇಶ್ ಉಪನ್ಯಾಸ ನೀಡಿದರು. ಪುರಸಭಾ ಮಾಜಿ ಅಧ್ಯಕ್ಷ ಎಂ. ನರೇಂದ್ರ ಮಾತನಾಡಿದರು.</p>.<p>ಸಭೆಯಲ್ಲಿ ಎಸ್ಎಸ್ಎಲ್ಸಿ ಮತ್ತು ಪಿಯುಸಿಯಲ್ಲಿ ಅಧಿಕ ಗಳಿಸಿದ ವಿದ್ಯಾರ್ಥಿಗಳನ್ನು ಅಭಿನಂಧಿಸಲಾಯಿತು.</p>.<p>ಸಭೆಯಲ್ಲಿ ಡಿವೈಎಸ್ಪಿ ಎಚ್.ಪರಶುರಾಮಪ್ಪ, ಪುರಸಭಾ ಮುಖ್ಯಾಧಿಕಾರಿ ಸಿ.ಎಸ್.ಮಂಜುನಾಥ್, ಸಿಡಿಪಿಒ ಚರಣ್ರಾಜ್, ಪಿಆರ್ಇಡಿ ಎಇಇ ವಿನೋದ್, ಲೋಕೋಪಯೋಗಿ ಇಲಾಖೆ ಎಇಇ ಸೋಮಶೇಖರ್, ತೋಟಗಾರಿಕಾ ಇಲಾಖೆ ಸಹಾಯಕ ನಿರ್ದೇಶಕ ಯತಿರಾಜ್ ಹಾಜರಿದ್ದರು.</p>.<p>ಸಮಾಜ ಕಲ್ಯಾಣ ಇಲಾಖೆ ಸಹಾಯಕ ನಿರ್ದೇಶಕ ಎಸ್.ಮಂಜುನಾಥ್ ಸ್ವಾಗತಿಸಿದರು.</p>.<p>ಉಪನ್ಯಾಸಕ ಚೇತನ್ ನಿರೂಪಿಸಿದರು. ಎಚ್.ಕೆ.ಶೇಖರಪ್ಪ ವಂದಿಸಿದರು.</p>.<p><em>ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ</em><br />260415-126-510106261</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p>ತರೀಕೆರೆ: ಕೆಲ ದೇಶಗಳಲ್ಲಿ ಕಠಿಣ ಕಾನೂನುಗಳಡಿ ಜನ ಗುಲಾಮರಂತೆ ಬದುಕುತ್ತಿದ್ದಾರೆ. ಆದರೆ ನಮ್ಮ ದೇಶದ ಜನರು ಸ್ವತಂತ್ರವಾಗಿ ಬದುಕುತ್ತಿರುವುದಕ್ಕೆ ಡಾ.ಅಂಬೇಡ್ಕರ್ ಅವರು ಬರೆದ ಸಾರ್ವಕಾಲಿಕ ಸಂವಿಧಾನವೇ ಕಾರಣ ಎಂದು ತಹಶೀಲ್ದಾರ್ ರಶ್ಮಿ ಎಚ್.ಜೆ. ಹೇಳಿದರು.</p>.<p>ಪಟ್ಟಣದ ಅಂಬೇಡ್ಕರ್ ಭವದಲ್ಲಿ ತಾಲ್ಲೂಕು ಆಡಳಿತ, ತಾಲ್ಲೂಕು ಪಂಚಾಯಿತಿ, ಪುರಸಭೆ ಮತ್ತು ಸಮಾಜ ಕಲ್ಯಾಣ ಇಲಾಖೆ ಸಂಯುಕ್ತಾಶ್ರಯದಲ್ಲಿ ಮಂಗಳವಾರ ನಡೆದ ಡಾ.ಬಿ.ಆರ್. ಅಂಬೇಡ್ಕರ್ ಅವರ 135ನೇ ಹಾಗೂ ಬಾಬು ಜಗಜೀವನ ರಾಂ ಅವರ 119ನೇ ಜನ್ಮ ದಿನಾಚರಣಾ ಸಮಾರಂಭದಲ್ಲಿ ಅವರು ಮಾತನಾಡಿದರು.</p>.<p>ಅಂಬೇಡ್ಕರ್ ಅವರು ಪ್ರಭುದ್ಧ ಭಾರತದ ಪರಿಕಲ್ಪನೆಯೊಂದಿಗೆ ಪ್ರಪಂಚದ ಶ್ರೇಷ್ಠ ಸಂವಿಧಾನವನ್ನು ರಚಿಸಿಕೊಟ್ಟರು.ಇದರ ಅಡಿಯಲ್ಲಿ ನಾವು ಬದುಕುತ್ತಿದ್ದೇವೆ ಎಂದರು.</p>.<p>ಸ್ವಾತಂತ್ರ ನಂತರದಲ್ಲಿ ಆಡಳಿತ ನಡೆಸಿದ ಸರ್ಕಾರದಲ್ಲಿ ವಿವಿಧ ಇಲಾಖಾ ಮಂತ್ರಿಗಳಾಗಿ ಬಾಬು ಜಗಜೀನವರಾಂ ತಮ್ಮದೇ ಆದ ರೀತಿ ದೇಶದ ಏಳಿಗೆಗೆ ಶ್ರಮಿಸಿದರು ಎಂದರು.</p>.<p>ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದ ತಾಲ್ಲೂಕು ಪಂಚಾಯಿತಿ ಇಓ ದೇವೇಂದ್ರಪ್ಪ ಮಾತನಾಡಿ, ಅಂಬೇಡ್ಕರ್ ಅವರ ಸಾಧನೆ, ಆದರ್ಶ ಮತ್ತು ಸಂವಿಧಾನವನ್ನು ಸದಾ ಮೆಲುಕು ಹಾಕುತ್ತಿರಬೇಕು ಎಂದು ಹೇಳಿದರು.</p>.<p>ಅಂಬೇಡ್ಕರ್ ಅವರ ಕುರಿತು ಭದ್ರಾವತಿ ಆಕಾಶವಾಣಿ ಉದ್ಘೋಷಕ ಎಂ.ಕೆ.ಶಿವಕುಮಾರ್ ಮತ್ತು ಬಾಬು ಜಗಜೀವನ ರಾಂ ಕುರಿತು ದಸಂಸ ಮುಖಂಡ ಎನ್.ವೆಂಕಟೇಶ್ ಉಪನ್ಯಾಸ ನೀಡಿದರು. ಪುರಸಭಾ ಮಾಜಿ ಅಧ್ಯಕ್ಷ ಎಂ. ನರೇಂದ್ರ ಮಾತನಾಡಿದರು.</p>.<p>ಸಭೆಯಲ್ಲಿ ಎಸ್ಎಸ್ಎಲ್ಸಿ ಮತ್ತು ಪಿಯುಸಿಯಲ್ಲಿ ಅಧಿಕ ಗಳಿಸಿದ ವಿದ್ಯಾರ್ಥಿಗಳನ್ನು ಅಭಿನಂಧಿಸಲಾಯಿತು.</p>.<p>ಸಭೆಯಲ್ಲಿ ಡಿವೈಎಸ್ಪಿ ಎಚ್.ಪರಶುರಾಮಪ್ಪ, ಪುರಸಭಾ ಮುಖ್ಯಾಧಿಕಾರಿ ಸಿ.ಎಸ್.ಮಂಜುನಾಥ್, ಸಿಡಿಪಿಒ ಚರಣ್ರಾಜ್, ಪಿಆರ್ಇಡಿ ಎಇಇ ವಿನೋದ್, ಲೋಕೋಪಯೋಗಿ ಇಲಾಖೆ ಎಇಇ ಸೋಮಶೇಖರ್, ತೋಟಗಾರಿಕಾ ಇಲಾಖೆ ಸಹಾಯಕ ನಿರ್ದೇಶಕ ಯತಿರಾಜ್ ಹಾಜರಿದ್ದರು.</p>.<p>ಸಮಾಜ ಕಲ್ಯಾಣ ಇಲಾಖೆ ಸಹಾಯಕ ನಿರ್ದೇಶಕ ಎಸ್.ಮಂಜುನಾಥ್ ಸ್ವಾಗತಿಸಿದರು.</p>.<p>ಉಪನ್ಯಾಸಕ ಚೇತನ್ ನಿರೂಪಿಸಿದರು. ಎಚ್.ಕೆ.ಶೇಖರಪ್ಪ ವಂದಿಸಿದರು.</p>.<p><em>ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ</em><br />260415-126-510106261</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>