<p>ತರೀಕೆರೆ: ಪಟ್ಟಣದ ವ್ಯಾಪ್ತಿಯ ಅಂಗವಿಕಲರಿಗೆ ಪುರಸಭೆ ವತಿಯಿಂದ ಮಂಗಳವಾರ ಗಾಲಿ ಕುರ್ಚಿಗಳನ್ನು ವಿತರಿಸಲಾಯಿತು.</p>.<p>ಕುರ್ಚಿ ವಿತರಿಸಿ ಮಾತನಾಡಿದ ಪುರಸಭೆ ಅಧ್ಯಕ್ಷ ವಸಂತ ಕುಮಾರ್, ‘ಪುರಸಭೆ ವತಿಯಿಂದ ಬಡವರ ಒಳಿತಿಗಾಗಿ ಕಲ್ಯಾಣ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳಲಾಗಿದೆ. ಆರೋಗ್ಯ, ಮಕ್ಕಳ ವಿದ್ಯಾಭ್ಯಾಸಕ್ಕಾಗಿ ವಿದ್ಯಾರ್ಥಿವೇತನ, ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡದ ಜನರಿಗೆ ಕಲ್ಯಾಣ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳಲಾಗಿದೆ’ ಎಂದರು.</p>.<p>ಜನರ ತೆರಿಗೆ ಹಣವನ್ನು ಬಡವರಿಗೆ ಸದ್ವಿನಿಯೋಗ ಮಾಡಲು ಪುರಸಭೆ ಕಾರ್ಯಕ್ರಮ ಹಮ್ಮಿಕೊಂಡಿದೆ. ಸಾರ್ವಜನಿಕರು ಕಚೇರಿಗೆ ಭೇಟಿ ನೀಡಿ ಪ್ರಯೋಜನ ಪಡೆದುಕೊಳ್ಳಬೇಕು ಎಂದು ಸದಸ್ಯ ಟಿ. ದಾದಾಪೀರ್ ಹೇಳಿದರು.</p>.<p>ಮುಖ್ಯಾಧಿಕಾರಿ ಮಂಜುನಾಥ, ವ್ಯವಸ್ಥಾಪಕ ಪ್ರಸನ್ನ, ಮುಖಂಡ ಮನ್ಸೂರ್, ಅಧಿಕಾರಿಗಳು ಹಾಜರಿದ್ದರು.</p>.<p><em>ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ</em><br />260401-126-1064245206</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p>ತರೀಕೆರೆ: ಪಟ್ಟಣದ ವ್ಯಾಪ್ತಿಯ ಅಂಗವಿಕಲರಿಗೆ ಪುರಸಭೆ ವತಿಯಿಂದ ಮಂಗಳವಾರ ಗಾಲಿ ಕುರ್ಚಿಗಳನ್ನು ವಿತರಿಸಲಾಯಿತು.</p>.<p>ಕುರ್ಚಿ ವಿತರಿಸಿ ಮಾತನಾಡಿದ ಪುರಸಭೆ ಅಧ್ಯಕ್ಷ ವಸಂತ ಕುಮಾರ್, ‘ಪುರಸಭೆ ವತಿಯಿಂದ ಬಡವರ ಒಳಿತಿಗಾಗಿ ಕಲ್ಯಾಣ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳಲಾಗಿದೆ. ಆರೋಗ್ಯ, ಮಕ್ಕಳ ವಿದ್ಯಾಭ್ಯಾಸಕ್ಕಾಗಿ ವಿದ್ಯಾರ್ಥಿವೇತನ, ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡದ ಜನರಿಗೆ ಕಲ್ಯಾಣ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳಲಾಗಿದೆ’ ಎಂದರು.</p>.<p>ಜನರ ತೆರಿಗೆ ಹಣವನ್ನು ಬಡವರಿಗೆ ಸದ್ವಿನಿಯೋಗ ಮಾಡಲು ಪುರಸಭೆ ಕಾರ್ಯಕ್ರಮ ಹಮ್ಮಿಕೊಂಡಿದೆ. ಸಾರ್ವಜನಿಕರು ಕಚೇರಿಗೆ ಭೇಟಿ ನೀಡಿ ಪ್ರಯೋಜನ ಪಡೆದುಕೊಳ್ಳಬೇಕು ಎಂದು ಸದಸ್ಯ ಟಿ. ದಾದಾಪೀರ್ ಹೇಳಿದರು.</p>.<p>ಮುಖ್ಯಾಧಿಕಾರಿ ಮಂಜುನಾಥ, ವ್ಯವಸ್ಥಾಪಕ ಪ್ರಸನ್ನ, ಮುಖಂಡ ಮನ್ಸೂರ್, ಅಧಿಕಾರಿಗಳು ಹಾಜರಿದ್ದರು.</p>.<p><em>ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ</em><br />260401-126-1064245206</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>