<p><strong>ತರೀಕೆರೆ</strong>: ‘ವೈಚಾರಿಕ ಕ್ರಾಂತಿ, ವಿಚಾರಧಾರೆ ಕೊಂಡೊಯ್ದವರು ಬಸವಣ್ಣನವರು. ಇತಿಹಾಸವನ್ನು ಅರ್ಥ ಮಾಡಿಕೊಳ್ಳಬೇಕು, ಜೊತೆ ಜೊತೆಯಾಗಿ ಬದುಕುವುದೇ ಶರಣರ ತತ್ವವಾಗಿದೆ’ ಎಂದು ಉಪನ್ಯಾಸಕ ಚೇತನ್ ಗೌಡ ಹೇಳಿದರು.</p>.<p>ತಾಲ್ಲೂಕು ರಾಷ್ಟ್ರೀಯ ಹಬ್ಬಗಳ ಆಚರಣಾ ಸಮಿತಿ ವತಿಯಿಂದ ಪಟ್ಟಣದ ಬೂದಿ ಬಸವೇಶ್ವರ ದೇವಸ್ಥಾನದ ಆವರಣದಲ್ಲಿ ಆಯೋಜಿಸಲಾಗಿದ್ದ ಬಸವ ಜಯಂತಿ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು.</p>.<p>ಕಾಯಕದಿಂದ ಬದುಕು ಎಂದು ಹೇಳಿಕೊಟ್ಟವರು ಬಸವಣ್ಣನವರು. ಅವರ ಸಹೋದರಿ ಶರಣೆ ಅಕ್ಕನಾಗಲಾಂಬಿಕೆ ತರೀಕೆರೆ ನೆಲಸಿದ ಪುಣ್ಯ ಸ್ಥಳವಾಗಿದೆ ಎಂದರು.</p>.<p>ಪುರಸಭೆ ಮುಖ್ಯಾಧಿಕಾರಿ ಎಚ್. ಪ್ರಶಾಂತ್ ಮಾತನಾಡಿ, ‘ಬಸವಣ್ಣ ಸಾಂಸ್ಕೃತಿಕ ನಾಯಕರು, ಜ್ಞಾನದ ಬೆಳಕು ನೀಡಿದವರು, ಧ್ವನಿ ಇಲ್ಲದವರಿಗೆ ಧ್ವನಿಯಾದವರು’ ಎಂದು ಬಣ್ಣಿಸಿದರು.</p>.<p>ಪುರಸಭೆ ಉಪಾಧ್ಯಕ್ಷೆ ಪಾರ್ವತಮ್ಮ, ಪೊಲೀಸ್ ಸಬ್ ಇನ್ಸ್ಪೆಕ್ಟರ್ ನಾಗೇಂದ್ರ ನಾಯ್ಕ ಮಾತನಾಡಿದರು. ಬೂದಿ ಬಸವೇಶ್ವರ ದೇವಸ್ಥಾನ ವಿಶ್ವಸ್ಥ ಸಮಿತಿ ಅಧ್ಯಕ್ಷ ಪ್ರಸನ್ನ ಕುಮಾರ್ ಅಧ್ಯಕ್ಷತೆ ವಹಿಸಿದ್ದರು.</p>.<p>ಅಖಿಲ ಭಾರತ ವೀರಶೈವ ಮಹಾಸಭಾ ಚಿಕ್ಕಮಗಳೂರು ಜಿಲ್ಲಾ ಘಟಕದ ಪ್ರಧಾನ ಕಾರ್ಯದರ್ಶಿ ಬೇಲೇನಹಳ್ಳಿ ಸೋಮಶೇಖರ್, ಬೂದಿ ಬಸವೇಶ್ವರ ದೇವಸ್ಥಾನ ವಿಶ್ವಸ್ಥ ಸಮಿತಿ ಉಪಾಧ್ಯಕ್ಷ ಟಿ.ಎಂ.ನವೀನ್ ಮಾತನಾಡಿದರು.</p>.<p>ಪುರಸಭೆ ಮಾಜಿ ಸದಸ್ಯ ಲೋಕೇಶ್, ಕೆ.ವಿ. ಬಾಬು, ವಿಶ್ವನಾಥ್, ರವಿ ಕುಮಾರ್ ಹಂಜಿ, ನಾಗರಾಜ್, ಶಾರದ ಅಶೋಕ್ ಕುಮಾರ್, ವನಜ ಹರೀಶ್, ಗೀತಾ ಶುಭಾಕರ್ ಭಾಗವಹಿಸಿದ್ದರು. ಬೂದಿ ಬಸವೇಶ್ವರ ದೇವಸ್ಥಾನದಿಂದ ಶ್ರೀಬಸವೇಶ್ವರ ರಥೋತ್ಸವವನ್ನು ಏರ್ಪಡಿಸಲಾಗಿತ್ತು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ತರೀಕೆರೆ</strong>: ‘ವೈಚಾರಿಕ ಕ್ರಾಂತಿ, ವಿಚಾರಧಾರೆ ಕೊಂಡೊಯ್ದವರು ಬಸವಣ್ಣನವರು. ಇತಿಹಾಸವನ್ನು ಅರ್ಥ ಮಾಡಿಕೊಳ್ಳಬೇಕು, ಜೊತೆ ಜೊತೆಯಾಗಿ ಬದುಕುವುದೇ ಶರಣರ ತತ್ವವಾಗಿದೆ’ ಎಂದು ಉಪನ್ಯಾಸಕ ಚೇತನ್ ಗೌಡ ಹೇಳಿದರು.</p>.<p>ತಾಲ್ಲೂಕು ರಾಷ್ಟ್ರೀಯ ಹಬ್ಬಗಳ ಆಚರಣಾ ಸಮಿತಿ ವತಿಯಿಂದ ಪಟ್ಟಣದ ಬೂದಿ ಬಸವೇಶ್ವರ ದೇವಸ್ಥಾನದ ಆವರಣದಲ್ಲಿ ಆಯೋಜಿಸಲಾಗಿದ್ದ ಬಸವ ಜಯಂತಿ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು.</p>.<p>ಕಾಯಕದಿಂದ ಬದುಕು ಎಂದು ಹೇಳಿಕೊಟ್ಟವರು ಬಸವಣ್ಣನವರು. ಅವರ ಸಹೋದರಿ ಶರಣೆ ಅಕ್ಕನಾಗಲಾಂಬಿಕೆ ತರೀಕೆರೆ ನೆಲಸಿದ ಪುಣ್ಯ ಸ್ಥಳವಾಗಿದೆ ಎಂದರು.</p>.<p>ಪುರಸಭೆ ಮುಖ್ಯಾಧಿಕಾರಿ ಎಚ್. ಪ್ರಶಾಂತ್ ಮಾತನಾಡಿ, ‘ಬಸವಣ್ಣ ಸಾಂಸ್ಕೃತಿಕ ನಾಯಕರು, ಜ್ಞಾನದ ಬೆಳಕು ನೀಡಿದವರು, ಧ್ವನಿ ಇಲ್ಲದವರಿಗೆ ಧ್ವನಿಯಾದವರು’ ಎಂದು ಬಣ್ಣಿಸಿದರು.</p>.<p>ಪುರಸಭೆ ಉಪಾಧ್ಯಕ್ಷೆ ಪಾರ್ವತಮ್ಮ, ಪೊಲೀಸ್ ಸಬ್ ಇನ್ಸ್ಪೆಕ್ಟರ್ ನಾಗೇಂದ್ರ ನಾಯ್ಕ ಮಾತನಾಡಿದರು. ಬೂದಿ ಬಸವೇಶ್ವರ ದೇವಸ್ಥಾನ ವಿಶ್ವಸ್ಥ ಸಮಿತಿ ಅಧ್ಯಕ್ಷ ಪ್ರಸನ್ನ ಕುಮಾರ್ ಅಧ್ಯಕ್ಷತೆ ವಹಿಸಿದ್ದರು.</p>.<p>ಅಖಿಲ ಭಾರತ ವೀರಶೈವ ಮಹಾಸಭಾ ಚಿಕ್ಕಮಗಳೂರು ಜಿಲ್ಲಾ ಘಟಕದ ಪ್ರಧಾನ ಕಾರ್ಯದರ್ಶಿ ಬೇಲೇನಹಳ್ಳಿ ಸೋಮಶೇಖರ್, ಬೂದಿ ಬಸವೇಶ್ವರ ದೇವಸ್ಥಾನ ವಿಶ್ವಸ್ಥ ಸಮಿತಿ ಉಪಾಧ್ಯಕ್ಷ ಟಿ.ಎಂ.ನವೀನ್ ಮಾತನಾಡಿದರು.</p>.<p>ಪುರಸಭೆ ಮಾಜಿ ಸದಸ್ಯ ಲೋಕೇಶ್, ಕೆ.ವಿ. ಬಾಬು, ವಿಶ್ವನಾಥ್, ರವಿ ಕುಮಾರ್ ಹಂಜಿ, ನಾಗರಾಜ್, ಶಾರದ ಅಶೋಕ್ ಕುಮಾರ್, ವನಜ ಹರೀಶ್, ಗೀತಾ ಶುಭಾಕರ್ ಭಾಗವಹಿಸಿದ್ದರು. ಬೂದಿ ಬಸವೇಶ್ವರ ದೇವಸ್ಥಾನದಿಂದ ಶ್ರೀಬಸವೇಶ್ವರ ರಥೋತ್ಸವವನ್ನು ಏರ್ಪಡಿಸಲಾಗಿತ್ತು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>