<p>ತರೀಕೆರೆ: ‘ಭಜನೆಯು ನಮ್ಮ ಮನಸ್ಸಿನ ಶಾಂತಿ, ಒಗ್ಗಟ್ಟು, ಸಂಸ್ಕೃತಿಯನ್ನು ಕಾಪಾಡುತ್ತದೆ. ಭಕ್ತಿಯ ಮೂಲಕ ಸಮಾಜವನ್ನು ಉತ್ತಮ ಮಾರ್ಗಕ್ಕೆ ಕರೆದೊಯ್ಯುತ್ತದೆ’ ಎಂದು ಶ್ರೀರಂಗ ಭಜನಾ ಮಂಡಳಿಯ ರಾಜೇಶ್ವರಿ ನಂದಕುಮಾರ್ ಹೇಳಿದರು.</p>.<p>ತಾಲ್ಲೂಕಿನ ಕೆಂಚಿಕೊಪ್ಪ ಗ್ರಾಮದ ಶ್ರೀರಂಗ ಭಜನಾ ಮಂಡಳಿ ವತಿಯಿಂದ ನಡೆದ ಅಂತರರಾಷ್ಟ್ರೀಯ ಮಹಿಳಾ ದಿನಾಚರಣೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.</p>.<p>ನಮ್ಮ ಭಜನಾ ಮಂಡಳಿಯಲ್ಲಿ ಮಹಿಳೆಯರ ಪಾತ್ರ ಮಹತ್ವದ್ದು. ಸ್ವಾಭಿಮಾನ, ಸ್ವಾವಲಂಬನೆ, ಪರಸ್ಪರ ಬೆಂಬಲದ ಮೂಲಕ ನಮ್ಮೊಳಗಿನ ಶಕ್ತಿಯನ್ನು ಅರಿತು, ಪರಸ್ಪರ ಸಹಾಯ ಮಾಡುವ ಮೂಲಕ ಒಗ್ಗಟ್ಟಿನಿಂದ ಬೆಳೆಯೋಣ ಎಂದರು.</p>.<p>ಭಜನಾ ಮಂಡಳಿ ಆರಂಭಿಸಲು ಶ್ರಮಿಸಿದ ಮಹಿಳೆಯರನ್ನು ಸನ್ಮಾನಿಸಲಾಯಿತು. ಕಾರ್ಯಕ್ರಮದ ಅಂಗವಾಗಿ ಹಮ್ಮಿಕೊಳ್ಳಲಾಗಿದ್ದ ಕ್ರೀಡೆಯಲ್ಲಿ ವಿಜೇತರಿಗೆ ಬಹುಮಾನ ವಿತರಿಸಲಾಯಿತು. ಶ್ರೀಲೇಖಾ ರತ್ನಾಕರ್, ಶಾಂತಾ ಜಗನ್ನಾಥ, ರುಕ್ಮಿಣಿ, ಮೀನಾಕ್ಷಿ ಮಾಧವ್, ವೀಣಾ ಶಿಲ್ಪ ಸಾಲಮ್ಮ, ಮಂಜುಳಾ, ಚಂದ್ರಕಲಾ, ಲಕ್ಷ್ಮಿ, ಪ್ರತಿಮಾ, ಪದ್ಮ, ಶೃತಿ, ಸರೋಜಾ, ಪದ್ಮ ವೆಂಕಟೇಶ್, ಮಮತಾ, ಶ್ರೀದೇವಿ, ಪುಷ್ಪಮ್ಮ, ಸುಶೀಲ, ಉಮಾ ಭಾಗವಹಿಸಿದ್ದರು. ರವಣಮ್ಮ ವಂದಿಸಿದರು.</p>.<p><em>ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ</em><br />260402-126-242264986</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p>ತರೀಕೆರೆ: ‘ಭಜನೆಯು ನಮ್ಮ ಮನಸ್ಸಿನ ಶಾಂತಿ, ಒಗ್ಗಟ್ಟು, ಸಂಸ್ಕೃತಿಯನ್ನು ಕಾಪಾಡುತ್ತದೆ. ಭಕ್ತಿಯ ಮೂಲಕ ಸಮಾಜವನ್ನು ಉತ್ತಮ ಮಾರ್ಗಕ್ಕೆ ಕರೆದೊಯ್ಯುತ್ತದೆ’ ಎಂದು ಶ್ರೀರಂಗ ಭಜನಾ ಮಂಡಳಿಯ ರಾಜೇಶ್ವರಿ ನಂದಕುಮಾರ್ ಹೇಳಿದರು.</p>.<p>ತಾಲ್ಲೂಕಿನ ಕೆಂಚಿಕೊಪ್ಪ ಗ್ರಾಮದ ಶ್ರೀರಂಗ ಭಜನಾ ಮಂಡಳಿ ವತಿಯಿಂದ ನಡೆದ ಅಂತರರಾಷ್ಟ್ರೀಯ ಮಹಿಳಾ ದಿನಾಚರಣೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.</p>.<p>ನಮ್ಮ ಭಜನಾ ಮಂಡಳಿಯಲ್ಲಿ ಮಹಿಳೆಯರ ಪಾತ್ರ ಮಹತ್ವದ್ದು. ಸ್ವಾಭಿಮಾನ, ಸ್ವಾವಲಂಬನೆ, ಪರಸ್ಪರ ಬೆಂಬಲದ ಮೂಲಕ ನಮ್ಮೊಳಗಿನ ಶಕ್ತಿಯನ್ನು ಅರಿತು, ಪರಸ್ಪರ ಸಹಾಯ ಮಾಡುವ ಮೂಲಕ ಒಗ್ಗಟ್ಟಿನಿಂದ ಬೆಳೆಯೋಣ ಎಂದರು.</p>.<p>ಭಜನಾ ಮಂಡಳಿ ಆರಂಭಿಸಲು ಶ್ರಮಿಸಿದ ಮಹಿಳೆಯರನ್ನು ಸನ್ಮಾನಿಸಲಾಯಿತು. ಕಾರ್ಯಕ್ರಮದ ಅಂಗವಾಗಿ ಹಮ್ಮಿಕೊಳ್ಳಲಾಗಿದ್ದ ಕ್ರೀಡೆಯಲ್ಲಿ ವಿಜೇತರಿಗೆ ಬಹುಮಾನ ವಿತರಿಸಲಾಯಿತು. ಶ್ರೀಲೇಖಾ ರತ್ನಾಕರ್, ಶಾಂತಾ ಜಗನ್ನಾಥ, ರುಕ್ಮಿಣಿ, ಮೀನಾಕ್ಷಿ ಮಾಧವ್, ವೀಣಾ ಶಿಲ್ಪ ಸಾಲಮ್ಮ, ಮಂಜುಳಾ, ಚಂದ್ರಕಲಾ, ಲಕ್ಷ್ಮಿ, ಪ್ರತಿಮಾ, ಪದ್ಮ, ಶೃತಿ, ಸರೋಜಾ, ಪದ್ಮ ವೆಂಕಟೇಶ್, ಮಮತಾ, ಶ್ರೀದೇವಿ, ಪುಷ್ಪಮ್ಮ, ಸುಶೀಲ, ಉಮಾ ಭಾಗವಹಿಸಿದ್ದರು. ರವಣಮ್ಮ ವಂದಿಸಿದರು.</p>.<p><em>ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ</em><br />260402-126-242264986</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>