<p><strong>ತರೀಕೆರೆ:</strong> ಪೌತಿ ಖಾತೆ ಮಾಡಿಕೊಡಲು ಲಂಚ ಪಡೆಯುತ್ತಿದ್ದ ಅರೋಪದಲ್ಲಿ ಕಂದಾಯ ಅಧಿಕಾರಿ(ಆರ್ಐ) ಮತ್ತು ಗ್ರಾಮ ಆಡಳಿತಾಧಿಕಾರಿಯನ್ನು ಲೋಕಾ ಯುಕ್ತ ಪೊಲೀಸರು ಬಂಧಿಸಿದ್ದಾರೆ.</p>.<p>ಅಮೃತಾಪುರ ಹೋಬಳಿ ಕಂದಾಯ ಅಧಿಕಾರಿ ಎಸ್.ಕೆ. ರಮೇಶ್ ಮತ್ತು ಹುಣಸಘಟ್ಟ ವೃತ್ತದ ಗ್ರಾಮ ಆಡಳಿತಾಧಿಕಾರಿ ಸಂತೋಷ್ ನಾಯ್ಕ ಲೋಕಾಯುಕ್ತರ ಬಲೆಗೆ ಬಿದ್ದಿರುವ ನೌಕರರು.</p>.<p>ಕುಮಾರಸ್ವಾಮಿ ಎಂಬುವರು ತನ್ನ ಅಜ್ಜಿಯ ಹೆಸರಿನಲ್ಲಿದ್ದ 17 ಗುಂಟೆ ಜಮೀನನ್ನು ಪೌತಿ ಖಾತೆ ಮಾಡಿಸಲು ಅರ್ಜಿ ಸಲ್ಲಿಸಿದ್ದರು. ಇದಕ್ಕೆ ₹30 ಸಾವಿರ ಲಂಚ ಕೊಡಬೇಕು ಎಂದು ಬೇಡಿಕೆ ಇಡಲಾಗಿತ್ತು ಎನ್ನಲಾಗಿದೆ.</p>.<p>ಕುಮಾರಸ್ವಾಮಿ ನೀಡಿದ ದೂರು ಆಧರಿಸಿ ಲೋಕಾಯುಕ್ತ ಡಿವೈಎಸ್ಪಿ ತಿರುಮಲೇಶ್ ನೇತೃತ್ವದಲ್ಲಿ ಸಿಬ್ಬಂದಿ ದಾಳಿ ನಡೆಸಿದರು. ಹಣದ ಸಮೇತ ನೌಕರರನ್ನು ವಶಕ್ಕೆ ಪಡೆದರು.</p>.<p><em>ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ</em><br />260514-126-1713403083</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ತರೀಕೆರೆ:</strong> ಪೌತಿ ಖಾತೆ ಮಾಡಿಕೊಡಲು ಲಂಚ ಪಡೆಯುತ್ತಿದ್ದ ಅರೋಪದಲ್ಲಿ ಕಂದಾಯ ಅಧಿಕಾರಿ(ಆರ್ಐ) ಮತ್ತು ಗ್ರಾಮ ಆಡಳಿತಾಧಿಕಾರಿಯನ್ನು ಲೋಕಾ ಯುಕ್ತ ಪೊಲೀಸರು ಬಂಧಿಸಿದ್ದಾರೆ.</p>.<p>ಅಮೃತಾಪುರ ಹೋಬಳಿ ಕಂದಾಯ ಅಧಿಕಾರಿ ಎಸ್.ಕೆ. ರಮೇಶ್ ಮತ್ತು ಹುಣಸಘಟ್ಟ ವೃತ್ತದ ಗ್ರಾಮ ಆಡಳಿತಾಧಿಕಾರಿ ಸಂತೋಷ್ ನಾಯ್ಕ ಲೋಕಾಯುಕ್ತರ ಬಲೆಗೆ ಬಿದ್ದಿರುವ ನೌಕರರು.</p>.<p>ಕುಮಾರಸ್ವಾಮಿ ಎಂಬುವರು ತನ್ನ ಅಜ್ಜಿಯ ಹೆಸರಿನಲ್ಲಿದ್ದ 17 ಗುಂಟೆ ಜಮೀನನ್ನು ಪೌತಿ ಖಾತೆ ಮಾಡಿಸಲು ಅರ್ಜಿ ಸಲ್ಲಿಸಿದ್ದರು. ಇದಕ್ಕೆ ₹30 ಸಾವಿರ ಲಂಚ ಕೊಡಬೇಕು ಎಂದು ಬೇಡಿಕೆ ಇಡಲಾಗಿತ್ತು ಎನ್ನಲಾಗಿದೆ.</p>.<p>ಕುಮಾರಸ್ವಾಮಿ ನೀಡಿದ ದೂರು ಆಧರಿಸಿ ಲೋಕಾಯುಕ್ತ ಡಿವೈಎಸ್ಪಿ ತಿರುಮಲೇಶ್ ನೇತೃತ್ವದಲ್ಲಿ ಸಿಬ್ಬಂದಿ ದಾಳಿ ನಡೆಸಿದರು. ಹಣದ ಸಮೇತ ನೌಕರರನ್ನು ವಶಕ್ಕೆ ಪಡೆದರು.</p>.<p><em>ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ</em><br />260514-126-1713403083</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>