<p>ತರೀಕೆರೆ: ‘ನಾನು ನಿರಂತರವಾಗಿ ಜನಪರ ಕಾರ್ಯಕ್ರಮಗಳಲ್ಲಿ ತೊಡಗಿಸಿಕೊಂಡಿದ್ದೇನೆ. ಹಿಂದುಳಿದ ವರ್ಗಗಳ ಆಯೋಗದ ಅಧ್ಯಕ್ಷನಾಗಿ ಪಾರದರ್ಶಕವಾಗಿ ಕಾರ್ಯನಿರ್ವಹಣೆ ಮಾಡಿದ್ದೇನೆ’ ಎಂದು ಕಾಂಗ್ರೆಸ್ ಮುಖಂಡ ಜಯಪ್ರಕಾಶ್ ಹೆಗ್ಡೆ ಹೇಳಿದರು.</p>.<p>ಪಟ್ಟಣದದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಪ್ರತಿನಿತ್ಯ ಜನರು ಯಾವುದಾದರೂ ಕೆಲಸಕ್ಕೆ, ಸಮಸ್ಯೆ ನಿವಾರಣೆಗೆ ಕರೆ ಮಾಡುತ್ತಾರೆ. ಅಂಥ ಕೆಲಸಗಳನ್ನು ಮುತುವರ್ಜಿಯಿಂದ ನಿಭಾಯಿಸುತ್ತಿದ್ದೇನೆ ಎಂದು ತಿಳಿಸಿದರು.</p>.<p>ಸಿದ್ದರಾಮಯ್ಯ ಅವರು 8 ವರ್ಷ ಮುಖ್ಯಮಂತ್ರಿಯಾಗಿ, 2 ಬಾರಿ ವಿರೋಧ ಪಕ್ಷದ ನಾಯಕರಾಗಿ ಸಮರ್ಥವಾಗಿ ಕಾರ್ಯ ನಿರ್ವಹಿಸಿದ್ದಾರೆ. ರಾಜಕೀಯದಲ್ಲಿ ಬದಲಾವಣೆಗಳು ಸಹಜವಾಗಿ ನಡೆಯುತ್ತವೆ. ಮುಖ್ಯಮಂತ್ರಿ ಸ್ಥಾನದ ಬದಲಾವಣೆ ಯಾವುದೇ ಗೊಂದಲವಿಲ್ಲದೆ ಸರಾಗವಾಗಿ ನಡೆದಿದೆ. ಯಾರಿಗೂ ನೋವಾಗದಂತೆ, ಸಿದ್ದರಾಮಯ್ಯ ಅವರ ಗೌರವ ಹೆಚ್ಚಾಗುವಂತೆ ನಡೆದುಕೊಳ್ಳಲಾಗಿದೆ ಎಂದರು.</p>.<p>ಜೂನ್ 3ರಂದು ನೂತನ ಮುಖ್ಯಮಂತ್ರಿ ಪ್ರಮಾಣ ವಚನ ಕಾರ್ಯಕ್ರಮ ನಡೆಯಲಿದ್ದು, ಡಿ.ಕೆ. ಶಿವಕುಮಾರ್ ನೇತೃತ್ವದ ಸಚಿವ ಸಂಪುಟದಲ್ಲಿ ಚಿಕ್ಕಮಗಳೂರು ಜಿಲ್ಲೆಗೆ ಮಂತ್ರಿ ಸ್ಥಾನ ಸಿಗಲಿ ಎಂದರು.</p>.<p>ತರೀಕೆರೆ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಎಚ್.ಯು.ಫಾರೂಕ್, ಜಯಪ್ರಕಾಶ್ಹೆಗ್ಡೆ ಸರಳ ವ್ಯಕ್ತಿತ್ವದ ರಾಜಕಾರಣಿ. ರಾಜಕಾರಣದಲ್ಲಿ ಅನುಭವ ಹೊಂದಿದ್ದಾರೆ. ಪಕ್ಷದ ಹೈಕಮಾಂಡ್ ಜಯಪ್ರಕಾಶ್ಹೆಗ್ಡೆ ಅವರಿಗೆ ರಾಜ್ಯಸಭಾ ಸದಸ್ಯ ಸ್ಥಾನ ನೀಡಬೇಕು ಎಂದರು.</p>.<p>ಪುರಸಭೆ ಮಾಜಿ ಅಧ್ಯಕ್ಷ ಟಿ.ಎಸ್. ಧರ್ಮರಾಜ್, ಕಾಂಗ್ರೆಸ್ ನಗರಾಧ್ಯಕ್ಷ ಪ್ರಕಾಶ್ ವರ್ಮ, ಕಾಂಗ್ರೆಸ್ ಕಿಸಾನ್ ಕೋಶದ ಅಧ್ಯಕ್ಷ ಗಿರೀಶ್, ಪುರಸಭೆ ಸದಸ್ಯ ಟಿ.ಜಿ.ಮಂಜುನಾಥ್, ಮಾಜಿ ಸದಸ್ಯ ಕೃಷ್ಣ, ರಾಜು ಭಾಗವಹಿಸಿದ್ದರು.</p>.<p><em>ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ</em><br />260601-126-657688303</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p>ತರೀಕೆರೆ: ‘ನಾನು ನಿರಂತರವಾಗಿ ಜನಪರ ಕಾರ್ಯಕ್ರಮಗಳಲ್ಲಿ ತೊಡಗಿಸಿಕೊಂಡಿದ್ದೇನೆ. ಹಿಂದುಳಿದ ವರ್ಗಗಳ ಆಯೋಗದ ಅಧ್ಯಕ್ಷನಾಗಿ ಪಾರದರ್ಶಕವಾಗಿ ಕಾರ್ಯನಿರ್ವಹಣೆ ಮಾಡಿದ್ದೇನೆ’ ಎಂದು ಕಾಂಗ್ರೆಸ್ ಮುಖಂಡ ಜಯಪ್ರಕಾಶ್ ಹೆಗ್ಡೆ ಹೇಳಿದರು.</p>.<p>ಪಟ್ಟಣದದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಪ್ರತಿನಿತ್ಯ ಜನರು ಯಾವುದಾದರೂ ಕೆಲಸಕ್ಕೆ, ಸಮಸ್ಯೆ ನಿವಾರಣೆಗೆ ಕರೆ ಮಾಡುತ್ತಾರೆ. ಅಂಥ ಕೆಲಸಗಳನ್ನು ಮುತುವರ್ಜಿಯಿಂದ ನಿಭಾಯಿಸುತ್ತಿದ್ದೇನೆ ಎಂದು ತಿಳಿಸಿದರು.</p>.<p>ಸಿದ್ದರಾಮಯ್ಯ ಅವರು 8 ವರ್ಷ ಮುಖ್ಯಮಂತ್ರಿಯಾಗಿ, 2 ಬಾರಿ ವಿರೋಧ ಪಕ್ಷದ ನಾಯಕರಾಗಿ ಸಮರ್ಥವಾಗಿ ಕಾರ್ಯ ನಿರ್ವಹಿಸಿದ್ದಾರೆ. ರಾಜಕೀಯದಲ್ಲಿ ಬದಲಾವಣೆಗಳು ಸಹಜವಾಗಿ ನಡೆಯುತ್ತವೆ. ಮುಖ್ಯಮಂತ್ರಿ ಸ್ಥಾನದ ಬದಲಾವಣೆ ಯಾವುದೇ ಗೊಂದಲವಿಲ್ಲದೆ ಸರಾಗವಾಗಿ ನಡೆದಿದೆ. ಯಾರಿಗೂ ನೋವಾಗದಂತೆ, ಸಿದ್ದರಾಮಯ್ಯ ಅವರ ಗೌರವ ಹೆಚ್ಚಾಗುವಂತೆ ನಡೆದುಕೊಳ್ಳಲಾಗಿದೆ ಎಂದರು.</p>.<p>ಜೂನ್ 3ರಂದು ನೂತನ ಮುಖ್ಯಮಂತ್ರಿ ಪ್ರಮಾಣ ವಚನ ಕಾರ್ಯಕ್ರಮ ನಡೆಯಲಿದ್ದು, ಡಿ.ಕೆ. ಶಿವಕುಮಾರ್ ನೇತೃತ್ವದ ಸಚಿವ ಸಂಪುಟದಲ್ಲಿ ಚಿಕ್ಕಮಗಳೂರು ಜಿಲ್ಲೆಗೆ ಮಂತ್ರಿ ಸ್ಥಾನ ಸಿಗಲಿ ಎಂದರು.</p>.<p>ತರೀಕೆರೆ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಎಚ್.ಯು.ಫಾರೂಕ್, ಜಯಪ್ರಕಾಶ್ಹೆಗ್ಡೆ ಸರಳ ವ್ಯಕ್ತಿತ್ವದ ರಾಜಕಾರಣಿ. ರಾಜಕಾರಣದಲ್ಲಿ ಅನುಭವ ಹೊಂದಿದ್ದಾರೆ. ಪಕ್ಷದ ಹೈಕಮಾಂಡ್ ಜಯಪ್ರಕಾಶ್ಹೆಗ್ಡೆ ಅವರಿಗೆ ರಾಜ್ಯಸಭಾ ಸದಸ್ಯ ಸ್ಥಾನ ನೀಡಬೇಕು ಎಂದರು.</p>.<p>ಪುರಸಭೆ ಮಾಜಿ ಅಧ್ಯಕ್ಷ ಟಿ.ಎಸ್. ಧರ್ಮರಾಜ್, ಕಾಂಗ್ರೆಸ್ ನಗರಾಧ್ಯಕ್ಷ ಪ್ರಕಾಶ್ ವರ್ಮ, ಕಾಂಗ್ರೆಸ್ ಕಿಸಾನ್ ಕೋಶದ ಅಧ್ಯಕ್ಷ ಗಿರೀಶ್, ಪುರಸಭೆ ಸದಸ್ಯ ಟಿ.ಜಿ.ಮಂಜುನಾಥ್, ಮಾಜಿ ಸದಸ್ಯ ಕೃಷ್ಣ, ರಾಜು ಭಾಗವಹಿಸಿದ್ದರು.</p>.<p><em>ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ</em><br />260601-126-657688303</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>