<p><strong>ತರೀಕೆರೆ</strong>: ಉಡೇವಾ ಗ್ರಾಮದ ಮರೆಕಲ್ಲಳ್ಳಿ ಶ್ರೀರಂಗನಾಥ ಸ್ವಾಮಿಯ ಜಾತ್ರಾ ಮಹೋತ್ಸವವು ಬ್ರಹ್ಮ ರಥೋತ್ಸವದೊಂದಿಗೆ ಸಂಪನ್ನಗೊಂಡಿತು.</p>.<p>ಬ್ರಹ್ಮ ರಥೋತ್ಸವಕ್ಕೂ ಮುನ್ನ 101 ಎಡೆ ಸೇವೆ ಮಾಡಲಾಯಿತು. ಬಳಿಕ, ಬ್ರಹ್ಮ ರಥೋತ್ಸವದ ಸಂದರ್ಭದಲ್ಲಿ ಆಕಾಶದಲ್ಲಿ ಹಾರಾಡಿದ ಗರುಡ ಪಕ್ಷಿಯನ್ನು ಕಂಡ ಭಕ್ತರು ಮರೆಕಲ್ಲಳ್ಳಿ ರಂಗನಾಥ ಸ್ವಾಮಿಗೆ ಜೈಕಾರ ಹಾಕುತ್ತಾ ಬ್ರಹ್ಮರಥ ಎಳೆದರು.</p>.<p>ಉಡೇವಾ, ಲಿಂಗದಹಳ್ಳಿ, ಯರದಂಕಲು, ಗಂಗೂರು, ಕಾಮನದುರ್ಗ ಗ್ರಾಮಗಳ ಭಕ್ತಾದಿಗಳು, ಶ್ರೀರಂಗನಾಥ ಸ್ವಾಮಿಯ ರಥಕ್ಕೆ ದವಸ ಧಾನ್ಯ, ಬಾಳೆ ಹಣ್ಣು, ಹೂವು ಮುಂತಾದ ಮಂಗಳ ದ್ರವ್ಯಗಳನ್ನು ಎಸೆಯುವ ಮೂಲಕ ಹರಕೆ ತೀರಿಸಿದರು.</p>.<p>ಉಡೇವಾ ಹಾಗೂ ಸುತ್ತಮುತ್ತಲ ಗ್ರಾಮಸ್ಥರು, ಪಾನಕದ ಬಂಡಿಗಳನ್ನು ತಂದು ರಥಕ್ಕೆ 3 ಸುತ್ತು ಪ್ರದಕ್ಷಿಣೆ ಹಾಕುವ ಮೂಲಕ ತಮ್ಮ ಹರಕೆ ತೀರಿಸಿ ಬಳಿಕ ಭಕ್ತಾದಿಗಳಿಗೆ ಬೆಲ್ಲದ ಪಾನಕ, ಕೋಸಂಬರಿ ವಿತರಿಸಿದರು.</p>.<p>ಶ್ರೀರಂಗನಾಥ ಸ್ವಾಮಿ ದೇವಸ್ಥಾನ ಸಮಿತಿಯ ಕಾರ್ಯದರ್ಶಿ ತಮ್ಮಯ್ಯ, ಉಡೇವಾ ಗ್ರಾ.ಪಂ. ಅಧ್ಯಕ್ಷೆ ಭಾರತಿ ಸಿ. ರಾಜಪ್ಪ, ತಾ.ಪಂ. ಮಾಜಿ ಸದಸ್ಯ ಎಸ್.ಎ. ಕೃಷ್ಣಪ್ಪ ಅವರು, ಬ್ರಹ್ಮ ರಥೋತ್ಸವಕ್ಕೆ ಚಾಲನೆ ನೀಡಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ತರೀಕೆರೆ</strong>: ಉಡೇವಾ ಗ್ರಾಮದ ಮರೆಕಲ್ಲಳ್ಳಿ ಶ್ರೀರಂಗನಾಥ ಸ್ವಾಮಿಯ ಜಾತ್ರಾ ಮಹೋತ್ಸವವು ಬ್ರಹ್ಮ ರಥೋತ್ಸವದೊಂದಿಗೆ ಸಂಪನ್ನಗೊಂಡಿತು.</p>.<p>ಬ್ರಹ್ಮ ರಥೋತ್ಸವಕ್ಕೂ ಮುನ್ನ 101 ಎಡೆ ಸೇವೆ ಮಾಡಲಾಯಿತು. ಬಳಿಕ, ಬ್ರಹ್ಮ ರಥೋತ್ಸವದ ಸಂದರ್ಭದಲ್ಲಿ ಆಕಾಶದಲ್ಲಿ ಹಾರಾಡಿದ ಗರುಡ ಪಕ್ಷಿಯನ್ನು ಕಂಡ ಭಕ್ತರು ಮರೆಕಲ್ಲಳ್ಳಿ ರಂಗನಾಥ ಸ್ವಾಮಿಗೆ ಜೈಕಾರ ಹಾಕುತ್ತಾ ಬ್ರಹ್ಮರಥ ಎಳೆದರು.</p>.<p>ಉಡೇವಾ, ಲಿಂಗದಹಳ್ಳಿ, ಯರದಂಕಲು, ಗಂಗೂರು, ಕಾಮನದುರ್ಗ ಗ್ರಾಮಗಳ ಭಕ್ತಾದಿಗಳು, ಶ್ರೀರಂಗನಾಥ ಸ್ವಾಮಿಯ ರಥಕ್ಕೆ ದವಸ ಧಾನ್ಯ, ಬಾಳೆ ಹಣ್ಣು, ಹೂವು ಮುಂತಾದ ಮಂಗಳ ದ್ರವ್ಯಗಳನ್ನು ಎಸೆಯುವ ಮೂಲಕ ಹರಕೆ ತೀರಿಸಿದರು.</p>.<p>ಉಡೇವಾ ಹಾಗೂ ಸುತ್ತಮುತ್ತಲ ಗ್ರಾಮಸ್ಥರು, ಪಾನಕದ ಬಂಡಿಗಳನ್ನು ತಂದು ರಥಕ್ಕೆ 3 ಸುತ್ತು ಪ್ರದಕ್ಷಿಣೆ ಹಾಕುವ ಮೂಲಕ ತಮ್ಮ ಹರಕೆ ತೀರಿಸಿ ಬಳಿಕ ಭಕ್ತಾದಿಗಳಿಗೆ ಬೆಲ್ಲದ ಪಾನಕ, ಕೋಸಂಬರಿ ವಿತರಿಸಿದರು.</p>.<p>ಶ್ರೀರಂಗನಾಥ ಸ್ವಾಮಿ ದೇವಸ್ಥಾನ ಸಮಿತಿಯ ಕಾರ್ಯದರ್ಶಿ ತಮ್ಮಯ್ಯ, ಉಡೇವಾ ಗ್ರಾ.ಪಂ. ಅಧ್ಯಕ್ಷೆ ಭಾರತಿ ಸಿ. ರಾಜಪ್ಪ, ತಾ.ಪಂ. ಮಾಜಿ ಸದಸ್ಯ ಎಸ್.ಎ. ಕೃಷ್ಣಪ್ಪ ಅವರು, ಬ್ರಹ್ಮ ರಥೋತ್ಸವಕ್ಕೆ ಚಾಲನೆ ನೀಡಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>